ರಾಹುಲ್ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ: ತನಿಖೆಗೆ ಡಿಜಿಸಿಎ ಸಮಿತಿ
Team Udayavani, Apr 28, 2018, 6:00 AM IST
ನವದೆಹಲಿ: ರಾಹುಲ್ ಗಾಂಧಿ ಗುರುವಾರ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ
“ಅಸಹಜ’ವೇನೂ ಅಲ್ಲ ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ)ದ ಅಧಿಕಾರಿಯೊಬ್ಬರು
ತಿಳಿಸಿದ್ದಾರೆ. ಇದೇ ವೇಳೆ, ಈ ಬಗ್ಗೆ ತನಿಖೆಗೆ ಇಬ್ಬರು ಸದಸ್ಯರ ಸಮಿತಿಯನ್ನು ಡಿಜಿಸಿಎ ರಚಿಸಿದ್ದು, 2-3 ವಾರಗಳಲ್ಲಿ ಈ ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ.
ಗುರುವಾರ ಬೆಳಗ್ಗೆ 9:30ಕ್ಕೆ ನವದೆಹಲಿಯಿಂದ ಹೊರಟಿದ್ದ ವಿಮಾನದಲ್ಲಿ 10:30ರ ಹೊತ್ತಿಗೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ವಿಮಾನದ ಆಟೋ ಪೈಲಟ್ ಮೋಡ್ ಕೈಕೊಟ್ಟಿದ್ದರಿಂದಾಗಿ, ಒಂದು ಬದಿಗೆ ವಾಲಿಕೊಂಡ ವಿಮಾನ ಕಂಪಿಸತೊಡಗಿತ್ತು. ಆಗ, ವಿಮಾನದಲ್ಲಿದ್ದ ಪೈಲಟ್, ಮ್ಯಾನ್ಯುವಲ್ ಮೋಡ್ಗೆ ಹಾಕಿದ ನಂತರವೂ, ತಕ್ಷಣಕ್ಕೆ ಹತೋಟಿಗೆ ಬಾರದ ವಿಮಾನ, ಸತತ ಮೂರು ಬಾರಿ ಪ್ರಯತ್ನಿಸಿದ ಮೇಲೆ ಹುಬ್ಬಳ್ಳಿಯಲ್ಲಿ ಭೂಸ್ಪರ್ಶ ಮಾಡಿತು. ಈ ಘಟನೆಯನ್ನು ಕಾಂಗ್ರೆಸ್ ಷಡ್ಯಂತ್ರವೆಂದು ಅನುಮಾನಿಸಿದ್ದು
ಸೂಕ್ತ ತನಿಖೆಗಾಗಿ ಕರ್ನಾಟಕ ಪೊಲೀಸ್ ಇಲಾಖೆಗೆ ಗುರುವಾರವೇ ಮನವಿ ಮಾಡಿತ್ತು. ಇದೇ ವೇಳೆ ಮಾತನಾಡಿರುವ ಅಧಿಕಾರಿಯೊಬ್ಬರು, ವಿಮಾನದ ಆಟೋ ಪೈಲಟ್ ಮೋಡ್ನಲ್ಲಿ ಲೋಪ ಕಂಡುಬಂದಿತ್ತು. ಕೂಡಲೇ ಪೈಲಟ್ ಅದನ್ನು ಮ್ಯಾನುವಲ್ ಮೋಡ್ಗೆ ಬದಲಿಸಿ, ಸುರಕ್ಷಿತವಾಗಿ ವಿಮಾನವನ್ನು ಇಳಿಸಿದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ಗೆ ಕರೆ ಮಾಡಿದ ಮೋದಿ: ರಾಹುಲ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ವಿಚಾರ ತಿಳಿಯುತ್ತಿದ್ದಂತೆಯೇ,
ಚೀನಾಗೆ ಹೊರಟಿದ್ದ ಪ್ರಧಾನಿ ಮೋದಿ ಅವರು ಕೂಡಲೇ ರಾಹುಲ್ಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದರು.
ರಾಹುಲ್ ವಿಮಾನದಲ್ಲಿನ ದೋಷ ಕುರಿತು ವಿಸ್ತೃತ ತನಿಖೆಗೆ ಆದೇಶಿಸಲಾಗಿದೆ. ತಪ್ಪು ನಡೆದಿರುವುದು ಕಂಡುಬಂದರೆ, ತಪ್ಪಿತಸ್ಥರ
ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ.
ಸುರೇಶ್ ಪ್ರಭು, ನಾಗರಿಕ ವಿಮಾನಯಾನ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್