Haryana ಬೈಕ್ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್
Team Udayavani, Sep 26, 2023, 5:06 PM IST
ಕರ್ನಾಲ್: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು ಬೆಳಗ್ಗೆ ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ರಸ್ತೆಗಳ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದರು.
ಕಾರ್ ಫ್ರೀ ಡೇ ಎಂದು ಸೆ. 2ರಂದು ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಘೋಷಿಸಿದ್ದರು. ಅದರ ಅನ್ವಯ ಪ್ರತಿ ಮಂಗಳವಾರದಂದು ಕಾರುಗಳನ್ನು ಬಳಸದಂತೆ ಕರ್ನಾಲ್ನಲ್ಲಿರುವ ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ತಿಳಿಸಿ, ಸ್ವತಃ ಕಾರು ಬಿಟ್ಟು ಸಂಚರಿಸಲು ವಿನೂತನ ಪ್ರಯತ್ನ ನಡೆಸಿದ್ದಾರೆ.
ಲಾಲ್ ಖಟ್ಟರ್ ಅವರು ಪ್ರಯಾಣಿಸುತ್ತಿದ್ದುದನ್ನು ನೋಡಿದ ಕರ್ನಾಲ್ ನಿವಾಸಿಗಳು ಆಶ್ಚರ್ಯಚಕಿತರಾದರು. ಮುಖ್ಯಮಂತ್ರಿಯನ್ನು ಹಿಂಬಾಲಿಸಿ ಪೊಲೀಸರು ಹಾಗೂ ಅಧಿಕಾರಿಗಳು ಸಹ ಬೈಕ್ಗಳಲ್ಲಿ ಬಂದರು. ಮುಖ್ಯಮಂತ್ರಿ ಪ್ರಯಾಣಕ್ಕಾಗಿ ರಸ್ತೆಯಲ್ಲಿ ಇತರ ವಾಹನಗಳಿಗೆ ನಿರ್ಬಂಧ ಹೇರಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿತ್ತು.
“कार फ्री डे” हो या “नशामुक्त हरियाणा” बनाने का संकल्प हो बिना जनसहयोग के पूरा नहीं हो सकता!
“कार फ्री डे” पर करनाल एयरपोर्ट तक की यात्रा बाइक द्वारा करके, आज के दिन कार ट्रैफिक कम करने का एक छोटा सा प्रयास मेरा भी रहा।
मुझे आशा है कि प्रदेश के जागरूक लोग इस सन्देश को आगे… pic.twitter.com/a5DQeDn1ky
— Manohar Lal (@mlkhattar) September 26, 2023
“ಕಾರ್-ಮುಕ್ತ ದಿನ” ಅಥವಾ “ವ್ಯಸನ ಮುಕ್ತ ಹರಿಯಾಣ”, ಸಾರ್ವಜನಿಕ ಬೆಂಬಲವಿಲ್ಲದೆ ಯಾವುದೇ ಗುರಿಯನ್ನು ತಲುಪಲು ಸಾಧ್ಯವಿಲ್ಲ. “ಕಾರ್-ಮುಕ್ತ ದಿನ” ದಲ್ಲಿ ನಾನು ವಿಮಾನ ನಿಲ್ದಾಣಕ್ಕೆ ಬೈಕ್ನಲ್ಲಿ ಪ್ರಯಾಣಿಸುವ ಮೂಲಕ, ನಾನು ಟ್ರಾಫಿಕ್ ನ್ನು ಕಡಿಮೆ ಮಾಡಲು ಸ್ವಲ್ಪ ಪ್ರಯತ್ನ ಮಾಡಿದೆ. ವಾರದಲ್ಲಿ ಕೇವಲ ಒಂದು ದಿನ ಕಾರುಗಳನ್ನು ತ್ಯಜಿಸಲು ಜನರನ್ನು ಪ್ರೋತ್ಸಾಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಮುಖ್ಯಮಂತ್ರಿ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಡ್ರಗ್ಸ್ ವಿರೋಧಿ ಅಭಿಯಾನದ ಭಾಗವಾಗಿ ಅವರ ಸರ್ಕಾರವು ಆಯೋಜಿಸಿದ್ದ ಸೈಕ್ಲೊಥಾನ್ ಡೇನಲ್ಲಿ ಖಟ್ಟರ್ ಅವರು ಇತ್ತೀಚೆಗೆ ಸೈಕಲ್ ತುಳಿದಿದ್ದರು. ಸೈಕ್ಲೋಥಾನ್ 25 ದಿನಗಳಲ್ಲಿ ಹರಿಯಾಣದ 22 ಜಿಲ್ಲೆಗಳಲ್ಲಿ ಸಂಚರಿಸಿತು.
#WATCH | Haryana CM Manohar Lal Khattar rides a bicycle during the Cyclothon, in Karnal. pic.twitter.com/Aqaus49sea
— ANI (@ANI) September 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ