ಅಸ್ಸಾಂನಲ್ಲಿ ಸಿಎಎ ಅನುಷ್ಠಾನಗೊಳ್ಳುವುದು ಡೌಟ್! ; ಸೋನಾವಾಲ್ ಟ್ವೀಟ್ ನ ಅರ್ಥವೇನು?
Team Udayavani, Jan 3, 2020, 4:40 PM IST
ಗೌಹಾತಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗ ಇಂದು ಇನ್ನೊಂದು ತಿರುವು ಲಭಿಸಿದೆ. ಅಸ್ಸಾಂನಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷ ಸರಕಾರದ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ಅವರು ಮಾಡಿರುವ ಒಂದು ಟ್ವೀಟ್ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ.
ಗೌಹಾತಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯ ವಿಡಿಯೋ ಒದನ್ನು ಟ್ಯಾಗ್ ಮಾಡಿ ಟ್ವೀಟ್ ಒಂದನ್ನು ಮಾಡಿರುವ ಸೋನಾವಾಲ್ ಅವರು, ‘ಅಸ್ಸಾಂ ನೆಲದ ಮಗನಾಗಿ, ನಾನು ಯಾವುದೇ ವಿದೇಶಿಯರನ್ನು ನನ್ನ ಮಣ್ಣಿನಲ್ಲಿ ಬಂದಿರಲು ಅವಕಾಶ ನೀಡುವುದಿಲ್ಲ. ಸರ್ಬಾನಂದ ಸೋನೋವಾಲ್ ಆಗಿರುವ ನಾನು ಅದಕ್ಕೆ ಯಾವತ್ತೂ ಅವಕಾಶ ನೀಡಲಾರೆ…’ ಎಂದು ಬರೆದುಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯು ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಿಂದ ಭಾರತಕ್ಕೆ 2014ರ ಮೊದಲು ಬಂದು ನೆಲೆಸಿರುವ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ವಿಚಾರಕ್ಕೆ ಸಂಬಂಧಿಸಿದುದಾಗಿದೆ.
ಹಾಗಾದರೆ ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವವನ್ನು ಪಡೆದುಕೊಳ್ಳಲಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ವಲಸಿಗರಿಗೆ ಅಸ್ಸಾಂ ರಾಜ್ಯದಲ್ಲಿ ನೆಲೆ ನೀಡುವುದಕ್ಕೆ ಬಿಜೆಪಿಯ ಮುಖ್ಯಮಂತ್ರಿಯೇ ವಿರೋಧ ವ್ಯಕ್ತಪಡಿಸಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಈಗಾಗಲೇ ಕೇರಳ, ಪಶ್ಚಿಮ ಬಂಗಾಲ ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿವೆ.
As a son of Assam, I will never settle foreigners in my state. This Sarbananda Sonowal will never allow this…
https://t.co/vjoexMdicj— Sarbananda Sonowal (@sarbanandsonwal) January 2, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ