ಭಿನ್ನಮತ ಪರಿಹಾರಕ್ಕೆ ಫಡ್ನವೀಸ್ ಭೇಟಿಯಾಗಿದ್ದರೇ ಉದ್ಧವ್ ಠಾಕ್ರೆ?
ಏಕನಾಥ ಶಿಂಧೆ ಜತೆಗೆ ಬದಲು ತಮ್ಮ ಜತೆಗೆ ಮಾತಾಡುವಂತೆ ಸೂಚಿಸಿದ್ದ ಶಿವಸೇನೆ ನಾಯಕ
Team Udayavani, Jul 18, 2022, 7:10 AM IST
ಮುಂಬೈ: ಮಹಾರಾಷ್ಟ್ರದಲ್ಲಿ ಎಂವಿಎ ಸರ್ಕಾರ ಪತನಗೊಳ್ಳುವುದಕ್ಕೆ ಮೊದಲು ಅಂದಿನ ಸಿಎಂ ಆಗಿದ್ದ ಉದ್ಧವ್ ಠಾಕ್ರೆ ಅವರು ಬಿಜೆಪಿ ನಾಯಕ, ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್ ಜತೆಗೆ ಮಾತುಕತೆ ನಡೆಸಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ಫಡ್ನವೀಸ್ ಜತೆಗಿನ ಮಾತುಕತೆ ವೇಳೆ, ಏಕನಾಥ ಶಿಂಧೆಯವರಿಗೆ ಬೆಂಬಲ ನೀಡುವ ಬದಲು ನೇರವಾಗಿ ತಮ್ಮ ಜತೆಯೇ ಮಾತುಕತೆ ನಡೆಸಬೇಕು. ಈ ಮೂಲಕ ಪೂರ್ಣ ಶಿವಸೇನೆ ಬಿಜೆಪಿ ಜತೆಗೆ ಇರಲಿದೆ ಎಂದು ಫಡ್ನವೀಸ್ಗೆ, ಉದ್ಧವ್ ಮನವರಿಕೆ ಮಾಡಿಕೊಡಲು ಮುಂದಾಗಿದ್ದರು. ಖುದ್ದಾಗಿ ಈ ಭೇಟಿ ನಡೆದಿತ್ತು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ’ ವರದಿ ಮಾಡಿದೆ.
ಹಾಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದಲ್ಲಿ ಶಾಸಕರು ಬಂಡಾಯ ಎದ್ದಾಗ ಉದ್ಧವ್ ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಫೋನ್ ಮಾಡಲು ಮುಂದಾಗಿದ್ದರೂ ಅವರು ಸ್ಪಂದಿಸಲಿಲ್ಲ ಎಂದು ಹೇಳಲಾಗಿದೆ.
ಶಿವಸೇನೆಯ ಕೆಲವು ನಾಯಕರು ಶಿಂಧೆ ಜತೆಗೆ ಮಾತುಕತೆ ನಡೆಸಲು ಮುಂದಾಗಿ, ಬಿಕ್ಕಟ್ಟಿನ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದ್ದರು. ಆದರೆ, ಉದ್ಧವ್ ಜತೆಗೆ ಸಂಧಾನಕ್ಕೆ ಅವರೂ ಸಿದ್ಧರಿರಲಿಲ್ಲ ಎಂದೂ ವರದಿ ಹೇಳಿದೆ. 2019ರಲ್ಲಿ ಬಿಜೆಪಿ ನಾಯಕರು ಉದ್ಧವ್ ಜತೆಗೆ ಮಾತುಕತೆಗೆ ಯತ್ನಿಸಿದ್ದರಾದರೂ ಅವರು ಒಪ್ಪಿಕೊಂಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ