ಮನೆ ಬಾಗಿಲಿಗೆ ಬರಲಿದೆ ಡೀಸೆಲ್‌ ಬಂಕ್‌!

ಆನ್‌ಲೈನ್‌ ಮೂಲಕ ಬೇಡಿಕೆ ಸಲ್ಲಿಸಿದರೆ ಸ್ಥಳಕ್ಕೆ ಇಂಧನ ಪೂರೈಕೆ

Team Udayavani, Jan 2, 2020, 6:30 AM IST

aa-35

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಬುಧವಾರದಿಂದ ಮನೆ ಮನೆಗೆ ಡೀಸೆಲ್‌ ವಿತರಣೆ ಸೇವೆ ಆರಂಭವಾಗಿದೆ.

ಹಾಸನ: ಗ್ರಾಮೀಣ ಭಾಗಗಳಿಗೂ ಸುಲಭವಾಗಿ ಇಂಧನ ಪೂರೈಕೆಯಾಗಬೇಕೆಂಬ ಕೇಂದ್ರ ಸರಕಾರದ ಮಹತ್ವದ ಯೋಜನೆ ಸಂಚಾರಿ ಡೀಸೆಲ್‌ ಬಂಕ್‌ಗಳಿಗೆ ಚಾಲನೆ ಸಿಕ್ಕಿದೆ. ರಾಜ್ಯದಲ್ಲಿ ಬುಧವಾರ ಎರಡು ಸಂಚಾರಿ ಬಂಕ್‌ಗಳು ಆರಂಭವಾಗಿವೆ. ಬೆಂಗಳೂರಿನಲ್ಲಿ ಒಂದು ಸಂಚಾರಿ ಬಂಕ್‌ ಆರಂಭವಾಗಿದ್ದರೆ, ಮತ್ತೂಂದು ಚನ್ನರಾಯಪಟ್ಟಣ ತಾಲೂಕಿನಲ್ಲಿ ಆರಂಭವಾಗಿದೆ. ಗ್ರಾಹಕರು ಆನ್‌ಲೈನ್‌ ಮೂಲಕ ಬೇಡಿಕೆ ಸಲ್ಲಿಸಿದರೆ ಸ್ಥಳಕ್ಕೆ 6 ಸಾವಿರ ಲೀ. ಸಾಮರ್ಥ್ಯದ ಡೀಸೆಲ್‌ ಟ್ಯಾಂಕರ್‌ ಬರಲಿದೆ. ಇದರಲ್ಲಿ ಪೆಟ್ರೋಲ್‌ ಬಂಕ್‌ಗಳಲ್ಲಿರುವಂತೆ ಡೀಸೆಲ್‌ ಹಾಕುವ ಗನ್‌ ಮತ್ತು ಡೀಸೆಲ್‌ನ ಪ್ರಮಾಣ ಮತ್ತು ದರದ ಮಾಹಿತಿಯ ಫ‌ಲಕಗಳು ಇರಲಿವೆ. ಇದಷ್ಟೇ ಅಲ್ಲ, ಅಗ್ನಿ ಅನಾಹುತ ತಡೆಗಟ್ಟುವ ಸಾಧನಗಳೂ ಇರಲಿವೆ.

ಯೋಜನೆಯ ಉದ್ದೇಶ?
ಗ್ರಾಮೀಣ ಭಾಗದಲ್ಲಿ ಕಾಮಗಾರಿ ಗಳು ನಡೆಯುವ ಪ್ರದೇಶದಲ್ಲಿ ಬೃಹತ್‌ ಯಂತ್ರಗಳಿಗೆ ಹಾಗೂ ಕೃಷಿ ಚಟು ವಟಿಕೆಗಳಿಗೆ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್‌ ಪೂರೈಸುವುದು ಈ ಯೋಜನೆಯ ಉದ್ದೇಶವಾಗಿದೆ. ಗ್ರಾಮೀಣ ಭಾಗದಲ್ಲಿರುವ ಯಂತ್ರೋಪ ಕರಣಗಳಿಗೆ ಇಂಧನದ ಕೊರತೆಯಾಗ ಬಾರ ದೆಂದು ಕೇಂದ್ರ ಸರಕಾರ ಈ ಯೋಜನೆ ಜಾರಿಗೆ ತಂದಿದೆ ಎನ್ನುತ್ತಾರೆ ಚನ್ನರಾಯ ಪಟ್ಟಣ ತಾಲೂಕಿನಲ್ಲಿ ಸಂಚಾರಿ ಡೀಸೆಲ್‌ ಬಂಕ್‌ ಲೈಸೆನ್ಸ್‌ ಪಡೆದು ಕೊಂಡಿರುವ ಹಿರೀಸಾವೆಯ ಕಾಂತರಾಜು ಅವರು.

ಹೇಗೆ ಬುಕ್ಕಿಂಗ್‌?
ಗ್ರಾಹಕರು ಮೊಬೈಲ್‌ನಲ್ಲಿ ಕರೆ ಮಾಡಿ ಅಥವಾ ಆನ್‌ಲೈನ್‌ನಲ್ಲಿ ತಮಗೆ ಬೇಕಾದ ಡೀಸೆಲ್‌ ಪ್ರಮಾಣ ತಿಳಿಸಿದರೆ ಆ ನಂಬರ್‌ಗೆ ಒಟಿಪಿ ದಾಖ ಲಾಗುತ್ತದೆ. ಅದನ್ನು ಆಧರಿಸಿ ಟ್ಯಾಂಕರ್‌ ಸ್ಥಳಕ್ಕೆ ಹೋಗಿ ಡೀಸೆಲ್‌ ಪೂರೈಕೆ ಮಾಡುತ್ತದೆ.

ಗ್ರಾಹಕರು ಕನಿಷ್ಠ 100 ಲೀಟರ್‌ ಡೀಸೆಲ್‌ಗೆ ಬೇಡಿಕೆ ಸಲ್ಲಿಸಿದರೆ ಕೋರಿದ ಸ್ಥಳಕ್ಕೆ ಹೋಗಿ ಡೀಸೆಲ್‌ ಪೂರೈಕೆ ಮಾಡುತ್ತೇವೆ. ದೇಶದಲ್ಲಿ 100, ರಾಜ್ಯದಲ್ಲಿ ಎರಡು ಬಂಕ್‌ಗಳಿಗೆ ಮಾತ್ರ ಈಗ ಅನುಮತಿ ದೊರೆತಿದೆ. 100 ಕಿ.ಮೀ. ವ್ಯಾಪ್ತಿಯಲ್ಲಿ ಸಂಚರಿಸಿ ಡೀಸೆಲ್‌ ಪೂರೈಕೆ ಮಾಡುತ್ತೇವೆ. ಭಾರತ್‌ ಪೆಟ್ರೋಲಿಯಂ ಕಂಪೆನಿ ವಿಶೇಷವಾದ ಟ್ಯಾಂಕರ್‌ನ್ನು ಒದಗಿಸಿದೆ. ಪ್ರಾರಂಭದಲ್ಲಿ ಡೀಸೆಲ್‌ ಪೂರೈಕೆಗೆ ಅನುಮತಿ ನೀಡಿದ್ದು, ಮುಂದಿನ ದಿನಗಳಲ್ಲಿ ಪೆಟ್ರೋಲ್‌ ಪೂರೈಕೆಗೂ ಅನುಮತಿ ಸಿಗಬಹುದು ಎನ್ನುತ್ತಾರೆ ಅವರು.

ಗ್ರಾಮೀಣ ಭಾಗದಲ್ಲಿ ಬೃಹತ್‌ ಪ್ರಮಾಣದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಯಂತ್ರೋಪಕರಣ ಗಳಿಗೆ ಸಂಚಾರಿ ಡೀಸೆಲ್‌ ಬಂಕ್‌ಗಳು ಸ್ಥಳಕ್ಕೆ ಹೋಗಿ ಡೀಸೆಲ್‌ ಪೂರೈಸುವುದರಿಂದ ವೆಚ್ಚ ಕಡಿಮೆಯಾಗುತ್ತದೆ.
– ಕಾಂತರಾಜು, ಸಂಚಾರಿ ಡೀಸೆಲ್‌ ಬಂಕ್‌ ಮಾಲಕ

- ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.