ಶಿಕ್ಷಣಾಭಿವೃದ್ಧಿಗೆ ಏಕಲವ್ಯ ಲಕ್ಷ್ಯ


Team Udayavani, Feb 2, 2018, 9:15 AM IST

Jetli-3.jpg

ದೇಶದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ಕೈಗೊಳ್ಳಲು ಕೇಂದ್ರ ನಿರ್ಧರಿಸಿದ್ದು, ಪರಿಶಿಷ್ಟ ಪಂಗಡ ಮತ್ತು ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ನವೋದಯ ವಸತಿ ಶಾಲೆಗಳ ಮಾದರಿಯಲ್ಲಿ ಏಕಲವ್ಯ ವಸತಿ ಶಾಲೆ, 13 ಲಕ್ಷ ಬಿ.ಎಡ್‌ಶಿಕ್ಷಕರಿಗೆ ತರಬೇತಿ, ಪ್ರಿ ನರ್ಸರಿಯಿಂದ ಪದವಿ ಪೂರ್ವವರೆಗಿನ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕ್ರಮಗಳಂಥ ಮಹತ್ವದ ಯೋಜನೆಗಳಿಗೆ ಕೈ ಹಾಕಲಾಗಿದೆ. 2022ರೊಳಗೆ ಶಿಕ್ಷಣ ಕ್ಷೇತ್ರವನ್ನು ಉಚ್ಛ್ರಾಯ ಮಟ್ಟಕ್ಕೇರಿಸುವ ಗುರಿಯನ್ನು ಹೊಂದಲಾಗಿದ್ದು, ಇದಕ್ಕಾಗಿ, 1 ಲಕ್ಷ ಕೋಟಿ ರೂ.ಗಳನ್ನು ನಿಗದಿಗೊಳಿಸಲಾಗಿದೆ.

ಮಹತ್ವಾಕಾಂಕ್ಷೆಯ ‘ಏಕಲವ್ಯ’
ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳಗಳಲ್ಲೇ ಶಿಕ್ಷಣ ನೀಡಲು ರೂಪಿಸಲಾಗಿರುವ ಈ ಯೋಜನೆಯಡಿಯಲ್ಲಿ,  ಶೇ. 50ಕ್ಕಿಂತ ಹೆಚ್ಚು ಪರಿಶಿಷ್ಟ ವರ್ಗ ಹಾಗೂ ಕನಿಷ್ಠ 20 ಸಾವಿರ ಬುಡಕಟ್ಟು ಜನಾಂಗ ವಾಸವಾಗಿರುವ ಪ್ರತಿ ಬ್ಲಾಕ್‌ಗಳಲ್ಲಿ ‘ಏಕಲವ್ಯ ಮಾದರಿ ವಸತಿ ಶಾಲೆ’ಗಳು ಅನುಷ್ಠಾನಕ್ಕೆ ಬರಲಿವೆ. ಈ ಮೂಲಕ, 2022ರ ವೇಳೆಗೆ, ಎಲ್ಲಾ ಬುಡಕಟ್ಟು ಜನಾಂಗದ ಮಕ್ಕಳಿಗೆ ವಿದ್ಯಾಭ್ಯಾಸ ಸೌರ್ಯ ಕಲ್ಪಿಸುವ ಮಹದೋದ್ದೇಶವನ್ನು ಹೊಂದಲಾಗಿದೆ. ನವೋದಯ ಶಾಲೆಗಳಂತೆಯೇ ಕಾರ್ಯ ನಿರ್ವಹಿಸಲಿರುವ ಈ ಶಾಲೆಗಳಲ್ಲಿ ಬುಡಕಟ್ಟು ಹಾಗೂ ಪರಿಶಿಷ್ಟರ ಪಾರಂಪರಿಕ ಕಲೆಗಳು, ಸಂಸ್ಕೃತಿ ಸಂರಕ್ಷಣೆ ಮಾಡುವುದರೊಂದಿಗೆ, ಶಿಕ್ಷಣ ಹಾಗೂ ಕ್ರೀಡೆಗಳಿಗೂ ಪ್ರೋತ್ಸಾಹ ನೀಡಲಾಗುತ್ತದೆ. 

ಶಿಕ್ಷಕರ ಕೌಶಲಾಭಿವೃದ್ಧಿ
ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ವಿಶೇಷ ಬಿ.ಎಡ್‌. ಕಾರ್ಯಕ್ರಮ ರೂಪಿಸಲಾಗಿದ್ದು, ಈ ವಿಶೇಷ ಯೋಜನೆಯಡಿ, 13 ಲಕ್ಷ ಸಮರ್ಪಕ ತರಬೇತಿ ಪಡೆಯದ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ. 

ಸಮಗ್ರ ಶಿಕ್ಷಣ
ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿರುವ ಗುಣಮಟ್ಟದ ಕೊರತೆ ಹೋಗಲಾಡಿಸಲು ಕೇಂದ್ರ ತೀರ್ಮಾನಿಸಿದೆ. ಅದೇ ಕಾರಣಕ್ಕೆ 20 ಲಕ್ಷ ವಿದ್ಯಾರ್ಥಿಗಳ ಸಮೀಕ್ಷೆ ನಡೆಸಿ ಸಮಸ್ಯೆಗಳ ಪತ್ತೆಹಚ್ಚಿ ಪ್ರತಿ ಜಿಲ್ಲಾ ಮಟ್ಟದಲ್ಲಿ ಗುಣಮಟ್ಟ ವೃದ್ಧಿಸುವ ಚಿಂತನೆ ನಡೆಸಿದೆ. ಇಡೀ ದೇಶದಲ್ಲೇ ಸಮಗ್ರ ಶಿಕ್ಷಣ ಜಾರಿ ಈಗ ಕೇಂದ್ರದ ಆದ್ಯತೆ. ಆದ್ದರಿಂದ ಪ್ರಿ ನರ್ಸರಿಯಿಂದ ದ್ವಿತೀಯ ಪಿಯುಸಿವರೆಗೆ ಸಮಗ್ರ ವ್ಯವಸ್ಥೆ ಮಾಡುವುದಾಗಿ ಹೇಳಿಕೊಂಡಿದೆ. 

ಉನ್ನತೀಕರಣಕ್ಕಾಗಿ ‘ರೈಸ್‌’
ದೇಶದ ಪ್ರಮುಖ ವಿದ್ಯಾ ಸಂಸ್ಥೆಗಳಲ್ಲಿ ಸಂಶೋಧನೆ, ಮೂಲ ಸೌಕರ್ಯಾಭಿವೃದ್ಧಿಗಾಗಿ ‘ರೈಸ್‌’ (ರಿವಿಟಲೈಸಿಂಗ್‌ ಇನ್‌ಫ್ರಾಸ್ಟ್ರಕ್ಚರ್‌ ಆ್ಯಂಡ್‌ ಸಿಸ್ಟಮ್ಸ್‌ ಇನ್‌ ಎಜುಕೇಷನ್‌) ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯ ಮೂಲ ಉದ್ದೇಶಗಳ ಸಾಕಾರಕ್ಕಾಗಿ, ಉನ್ನತ ಶಿಕ್ಷಣ ಹಣಕಾಸು ಏಜೆನ್ಸಿಯಲ್ಲಿ (ಎಚ್‌ಇಎಫ್ಎ) ಮುಂದಿನ ನಾಲ್ಕು ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗುತ್ತದೆ. 

ಎಸ್‌ಪಿಎ ಸ್ಥಾಪನೆ
ದೇಶದ ನಾನಾ ಐಐಟಿ ಹಾಗೂ ಎನ್‌ಐಟಿಗಳಲ್ಲಿ 18 ಸುಸಜ್ಜಿತ ‘ಸ್ಕೂಲ್ಸ್‌ ಆಫ್ ಪ್ಲಾನಿಂಗ್‌ ಆ್ಯಂಡ್‌ ಆರ್ಕಿಟೆಕ್ಟರ್‌’ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಇವು ಸ್ವಾಯತ್ತ ವಿದ್ಯಾಸಂಸ್ಥೆಗಳಾಗಿ ಕಾರ್ಯ ನಿರ್ವಹಿಸಲಿವೆ. 

ಫೆಲೋಶಿಪ್‌
1000 ಪ್ರತಿಭಾವಂತ ಬಿ.ಟೆಕ್‌ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡಿ ಅವರು ಸ್ವಪ್ರೇರಣೆಯಿಂದ ಶಿಕ್ಷಣ ಸಂಸ್ಥೆಗಳಲ್ಲಿ ವಾರದಲ್ಲಿ ಕೆಲವು ಗಂಟೆಗಳು ತರಬೇತಿ ನೀಡುವಂತೆ ಮಾಡಬೇಕೆನ್ನುವುದು ಕೇಂದ್ರದ ಮತ್ತೂಂದು ಮಹತ್ವದ ಯೋಜನೆ.

ಕಪ್ಪು ಬೋರ್ಡ್‌ ಬದಲಿಗೆ ಡಿಜಿಟಲ್‌ ಬೋರ್ಡ್‌
ಶಿಕ್ಷಣ ಕ್ಷೇತ್ರದಲ್ಲಿ ತಾಂತ್ರಿಕ ಕ್ರಾಂತಿ ಮಾಡುವುದು ಕೇಂದ್ರದ ಉದ್ದೇಶ. ಇದುವರೆಗೆ ಎಲ್ಲ ಕಡೆ ಕಪ್ಪುಹಲಗೆಯನ್ನು ಶಿಕ್ಷಕರು ಬಳಸುತ್ತಿದ್ದಾರೆ. ಇನ್ನು ಮುಂದೆ ಆ ಜಾಗದಲ್ಲಿ ಕಂಪ್ಯೂಟರೀಕೃತ ಡಿಜಿಟಲ್‌ ಬೋರ್ಡ್‌ ಬರಲಿದೆ! ಅದಕ್ಕಾಗಿ ಈಗಾಗಲೇ ‘ಧಿಕ್ಷಾ’ ಎನ್ನುವ ಶಿಕ್ಷಕರ ಕೌಶಲಾಭಿವೃದ್ಧಿ ವೆಬ್‌ಸೈಟ್‌ ಆರಂಭಿಸಲಾಗಿದೆ.

1000 ಬಿಟೆಕ್‌ ವಿದ್ಯಾರ್ಥಿಗಳಿಗೆ ನೆರವು 
ಇದೇ ವರ್ಷದಿಂದ ಕೇಂದ್ರಸರ್ಕಾರ ಪ್ರೈಮ್‌ ಮಿನಿಸ್ಟರ್ಸ್‌ ರೀಸರ್ಚ್‌ ಫೆಲೋಸ್‌ (ಪಿಎಂಆರ್‌ಎಫ್) ಎನ್ನುವ ಯೋಜನೆ ಆರಂಭಿಸಲಿದೆ. ಇದರ ಉದ್ದೇಶ ದೇಶದ ಪ್ರಮುಖ ವಿದ್ಯಾಸಂಸ್ಥೆಗಳ ಪ್ರತಿಭಾವಂತ 1000 ಬಿಟೆಕ್‌ ವಿದ್ಯಾರ್ಥಿಗಳನ್ನು ಗುರುತಿಸುವುದು. ಈ ವಿದ್ಯಾರ್ಥಿಗಳು ಐಐಟಿ ಮತ್ತು ಐಐಎಸ್ಸಿಗಳಲ್ಲಿ ಪಿಎಚ್‌ಡಿ ಮಾಡುವಂತೆ ಪ್ರೋತ್ಸಾಹಿಸಲಾಗುತ್ತದೆ. ಅದಕ್ಕಾಗಿ ಗರಿಷ್ಠ ಆರ್ಥಿಕ ನೆರವು (ಫೆಲೋಶಿಪ್‌) ನೀಡಲಾಗುತ್ತದೆ.

ಟಾಪ್ ನ್ಯೂಸ್

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.