ಸರ್ಜಿಕಲ್ ದಾಳಿಗೆ ಸಾಕ್ಷ್ಯ ಕೇಳುವುದೇ ಹಾಸ್ಯಾಸ್ಪದ: ರಾಹುಲ್ ಗಾಂಧಿ
ದಿಗ್ವಿಜಯ ಸಿಂಗ್ ಹೇಳಿಕೆಗೆ ಅತೃಪ್ತಿ
Team Udayavani, Jan 24, 2023, 10:29 PM IST
ಜಮ್ಮು:ಸರ್ಜಿಕಲ್ ದಾಳಿ ಕುರಿತು ಮಧ್ಯ ಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಖಂಡಿಸಿದ್ದಾರೆ. ಜಮ್ಮುವಿನಲ್ಲಿ ಮಂಗಳವಾರ ಮಾತನಾಡಿದ ಅವರು, ದಿಗ್ವಿಜಯ ಸಿಂಗ್ ಹೇಳಿಕೆ ಹಾಸ್ಯಾಸ್ಪದವಾಗಿದೆ.
ದೇಶದ ಭದ್ರತಾಪಡೆಗಳು ತಮ್ಮ ಕಾರ್ಯವನ್ನು ನಿಷ್ಠೆಯಿಂದ ಮಾಡುತ್ತಿವೆ. ಅದನ್ನು ನಿರೂಪಿಸುವ ಅಗತ್ಯವಿಲ್ಲ ಎಂದಿದ್ದಾರೆ. ಹೇಳಿಕೆ ಬಗ್ಗೆ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರಾಹುಲ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಇದೇ ವೇಳೆ ತಮ್ಮನ್ನು ಜಾಲತಾಣಗಳಲ್ಲಿ ಪಪ್ಪು ಎಂದು ಬಿಂಬಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ನನ್ನ ವ್ಯಕ್ತಿತ್ವ ಹಾಳು ಮಾಡಲು ಬಿಜೆಪಿ ಹಣ ಸುರಿಯುತ್ತಿದೆ. ಆದರೆ, ದೇಶದಲ್ಲಿ ಗೆಲ್ಲುವುದು ಹಣವಲ್ಲ, ಸತ್ಯ ಎಂಬುದನ್ನು ಶೀಘ್ರವೇ ಕಾಂಗ್ರೆಸ್ ಬಿಜೆಪಿಗೆ ತಿಳಿಸಲಿದೆ ಎಂದರು.
ಪಾಕ್ ಪರ:
ಇನ್ನೊಂದೆಡೆ, ಸಿಂಗ್ ಹೇಳಿಕೆ ಖಂಡಿಸಿ ದೇಶದ ಹಲವು ಭಾಗಗಳಲ್ಲಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮಾತನಾಡಿ, “ಕಾಂಗ್ರೆಸ್ ಡಿಎನ್ಎ ಪಾಕಿಸ್ತಾನದ ಪರವಿದೆ. ಅವರು ಒಂದು ಬಾರಿ ಸರ್ಜಿಕಲ್ ದಾಳಿಗೆ ಸಾಕ್ಷಿ ಕೇಳುತ್ತಾರೆ. ಮತ್ತೊಂದು ಬಾರಿ ರಾಮಸೇತು, ಕೆಲವೊಮ್ಮೆ ರಾಮನ ಅಸ್ತಿತ್ವಕ್ಕೆ ಸಾಕ್ಷಿ ಕೇಳುತ್ತಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ