ಜಯಾ ಕ್ಷೇತ್ರದಲ್ಲಿ ದಿನಕರನ್‌ಗೆ ಜಯ


Team Udayavani, Dec 25, 2017, 6:00 AM IST

dinakaran.jpg

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪ್ರತಿನಿಧಿಸುತ್ತಿದ್ದ ಆರ್‌.ಕೆ. ನಗರ ಉಪ ಚುನಾವಣೆಯಲ್ಲಿ ಶಶಿಕಲಾ ಆಪ್ತ ಹಾಗೂ ಪಕ್ಷೇತರ ಅಭ್ಯರ್ಥಿ ಟಿ.ಟಿ.ವಿ. ದಿನಕರನ್‌ ಭಾರೀ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದು, ಎಐಎಡಿಎಂಕೆಯ ಜಯಲಲಿತಾ ಬಣಕ್ಕೆ ಮುಖಭಂಗ ಉಂಟಾಗಿದೆ. ಅಚ್ಚರಿಯ ಸಂಗತಿಯೆಂದರೆ 2016ರಲ್ಲಿ ಜಯಲಲಿತಾ ಗೆದ್ದು ಬಂದಿದ್ದಕ್ಕಿಂತ ಸ್ವಲ್ಪ ಹೆಚ್ಚೇ ಅಂತರದಿಂದ ದಿನಕರನ್‌ ಜಯ ಗಳಿಸಿದ್ದಾರೆ. ಜಯಾ 39,545 ಮತಗಳ ಅಂತರದಿಂದ ಗೆದ್ದು ಬಂದಿದ್ದರೆ, ಪ್ರಷರ್‌ ಕುಕ್ಕರ್‌ ಚಿಹ್ನೆಯಡಿ ಸ್ಪರ್ಧಿಸಿದ್ದ ದಿನಕರನ್‌ 40,707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎಐಎಡಿಎಂಕೆ ಅಭ್ಯರ್ಥಿ ಮಧುಸೂದನ್‌ 48,306 ಮತಗಳನ್ನು ಪಡೆದಿದ್ದಾರೆ.

ಎರಡೆಲೆ ಚಿಹ್ನೆಯನ್ನು ಶತಾಯಗತಾಯ ಪಡೆಯಲು ಯತ್ನಿಸಿದ್ದ ದಿನಕರನ್‌ ಕೆಲವೇ ದಿನಗಳ ಹಿಂದೆ ಸೋಲುಂಡಿದ್ದರು. ಪಳನಿಸ್ವಾಮಿ ಮತ್ತು ಪನ್ನೀರಸೆಲ್ವಂ ಬಣಕ್ಕೆ ಎಐಎಡಿಎಂಕೆಯ ಎರಡೆಲೆ ಚಿಹ್ನೆ ಸಿಕ್ಕಿತ್ತು.

ಇದರಿಂದ ಮೂಲ ಎಐಎಡಿಎಂಕೆ ಪನ್ನೀರ್‌ ಸೆಲ್ವಂ ಬಣದ್ದು ಎಂದು ಸಾಬೀತಾಗಿತ್ತು. ಅಷ್ಟೇ ಅಲ್ಲ, ಇದೇ ಚಿಹ್ನೆಯನ್ನು ಪಡೆಯಲು ಚುನಾವಣಾ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ದಿನಕರನ್‌ ಬಂಧನಕ್ಕೂ ಒಳಗಾಗಿದ್ದರು. ಈಗ ಜಾಮೀನು ಪಡೆದಿದ್ದಾರೆ.

ಬಿಜೆಪಿಗಿಂತ ನೋಟಾಗೇ ಹೆಚ್ಚು ಮತ: ಆರ್‌ಕೆ ನಗರ ಕ್ಷೇತ್ರದ ಜನರಿಗೆ ಬಿಜೆಪಿಗಿಂತ ನೋಟಾ ಹೆಚ್ಚು ಪ್ರಿಯವಾದಂತಿದೆ. ಬಿಜೆಪಿ ಅಭ್ಯರ್ಥಿ ಕರು ನಾಗರಾಜ ಕೇವಲ 1,417 ಮತಗಳನ್ನು ಪಡೆದಿದ್ದಾರೆ. ಆದರೆ ನೋಟಾಗೆ 2,373 ಮತಗಳು ಬಿದ್ದಿವೆ.

ದಿನಕರನ್‌ ಇತಿಹಾಸ: ತಮಿಳುನಾಡಿನ ಉಪಚುನಾವಣೆ ಯೊಂದರಲ್ಲಿ ಪಕ್ಷೇತರ ಅಭ್ಯರ್ಥಿ ಗೆಲ್ಲುವ ಮೂಲಕ ದಿನಕರನ್‌ ಇತಿಹಾಸ ಸೃಷ್ಟಿಸಿದ್ದಾರೆ. ಈ ಹಿಂದೆ ರಾಜ್ಯದ ಯಾವ ಉಪಚುನಾವಣೆಯಲ್ಲೂ ಪಕ್ಷೇತರ ಅಭ್ಯರ್ಥಿ ಗೆಲುವು ಕಂಡಿರಲಿಲ್ಲ. ಇನ್ನೊಂದೆಡೆ ಕಳೆದ 18 ವರ್ಷಗಳಲ್ಲಿ ಒಮ್ಮೆಯೂ ತಮಿಳುನಾಡಿನಲ್ಲಿ ಆಡಳಿತಾರೂಢ ಪಕ್ಷವು ಉಪಚುನಾವಣೆಯಲ್ಲಿ ಸೋತಿರಲಿಲ್ಲ.

ಸರಕಾರಕ್ಕೆ ಭೀತಿ: ಉಪಚುನಾವಣೆಯಲ್ಲಿ ಗೆದ್ದ ಅನಂತರದಲ್ಲಿ ಇದೀಗ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಸರಕಾರ ಉರುಳುವ ಭೀತಿ ಉಂಟಾಗಿದೆ. ದಿನಕರನ್‌ ಗೆಲುವಿನಿಂದ ಸಿಕ್ಕ ಆತ್ಮವಿಶ್ವಾಸದಿಂದಾಗಿ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜೈಲುಪಾಲಾಗಿರುವ ಶಶಿಕಲಾ ಬಣವು ಸರಕಾರ ಉರುಳಿಸುವಲ್ಲಿ ಇನ್ನಷ್ಟು ಶ್ರಮಿಸಲಿದೆ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಗೆಲುವಿನ ಬಳಿಕ ದಿನಕರನ್‌ ಕೂಡ 3 ತಿಂಗಳೊಳಗೆ ಸರಕಾರ ಉರುಳಲಿದೆ ಎಂದಿದ್ದಾರೆ. ಅಷ್ಟೇ ಅಲ್ಲ, ಚುನಾವಣಾ ಆಯೋಗವು ದಿನಕರನ್‌ ಗೆದ್ದಿದ್ದಾರೆ ಎಂಬುದನ್ನು ಘೋಷಿಸುವುದಕ್ಕೂ ಮುನ್ನವೇ ಎಐಎಡಿಎಂಕೆ ಶಾಸಕರೊಬ್ಬರು ದಿನಕರನ್‌ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಒಂದಷ್ಟು ಶಾಸಕರು ಬಣ ಬದಲಾವಣೆ ಮಾಡುವ ಸಾಧ್ಯತೆ ಹೆಚ್ಚಿದೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.