ಬಿಜೆಪಿಯನ್ನು ಪರಾಭವಗೊಳಿಸಲು ಕಾಂಗ್ರೇಸ್ ಪರ್ಯಾಯ ಮಾರ್ಗವನ್ನು ತೆರೆದಿದೆ : ಗುಂಡೂರಾವ್
Team Udayavani, Jun 19, 2021, 6:57 PM IST
ಪಣಜಿ : ಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಪರಾಭವಗೊಳಿಸಲು ಕಾಂಗ್ರೇಸ್ ಪಕ್ಷವು ಎಲ್ಲ ಪರ್ಯಾಯ ಮಾರ್ಗಗಳನ್ನು ತೆರೆದಿದೆ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪಣಜಿಯ ಕಾಂಗ್ರೇಸ್ ಕಚೇರಿಯಲ್ಲಿ ಇಂದು(ಶನಿವಾರ, ಜೂನ್ 19) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೇಸ್ ಪಕ್ಷವು ಬಿಜೆಪಿಯನ್ನು ಪರಾಭವಗೊಳಿಸಲು ನಿಶ್ಚಯ ಮಾಡಿಕೊಂಡಿದೆ. ಗೋವಾದಲ್ಲಿ ಕಾಂಗ್ರೇಸ್ ಪಕ್ಷ ಶಕ್ತಿಶಾಲಿಯಾಗಿರುವುದರಿಂದ ಕಾಂಗ್ರೇಸ್ ಪಕ್ಷದ ಮೈತ್ರಿಗೆ ಕೆಲ ಪಕ್ಷಗಳು ಇಚ್ಛೆ ವ್ಯಕ್ತಪಡಿಸಿವೆ. ಬಿಜೆಪಿಯನ್ನು ಪರಾಭವಗೊಳಿಸಲು ಯಾವೆಲ್ಲ ನಿರ್ಣಯಗಳನ್ನು ತೆಗೆದುಕೊಳ್ಳಬೇಕೊ ಅವೆಲ್ಲ ನಿರ್ಣಯಗಳನ್ನು ಕಾಂಗ್ರೇಸ್ ಪಕ್ಷ ತೆಗೆದುಕೊಳ್ಳಲಿದೆ. ಪಕ್ಷವು ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂಬುದನ್ನು ನಾನು ಈಗ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕ್ರೀಡೆಗೆ ಪೂರಕ ವಾತಾವರಣವೇ ಇಲ್ಲದ ಹೊತ್ತಿನಲ್ಲಿ ದೇಶವನ್ನೇ ಪ್ರಭಾವಿಸಿದ್ದರು ಮಿಲ್ಖಾ |
ಗೋವಾ ಬಿಜೆಪಿ ಸರ್ಕಾರವು ಕೋವಿಡ್ ಮಹಾಮಾರಿಯ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಜನತೆಯನ್ನು ರಕ್ಷಣೆ ಮಾಡಿಲ್ಲ. ಆಪೂರ್ಣ ವೈದ್ಯಕೀಯ ಸೇವೆ, ಆಮ್ಲಜನಕ ಕೊರತೆ ಹೀಗೆ ಹಲವು ಕಾರಣಗಳಿಂದಾಗಿ ಗೋವಾದಲ್ಲಿ ಹಲವು ಜೀವಗಳನ್ನು ಕಳೆದುಕೊಳ್ಳುವಂತಾಗಿದೆ. ಈ ಎಲ್ಲ ಜವಾಬ್ದಾರಿಗಳನ್ನೂ ಸರ್ಕಾರ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ