ಸಿಬಲ್ ಮನೆಯಲ್ಲಿ ವಿಪಕ್ಷ ನಾಯಕರ ಔತಣಕೂಟ: ಗಾಂಧಿ ಕುಟುಂಬ ನಾಯಕತ್ವಕ್ಕೆ ವಿರೋಧ


Team Udayavani, Aug 10, 2021, 8:53 AM IST

Dinner at kapil sibal’s house:

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ದೆಹಲಿ ನಿವಾಸದಲ್ಲಿ ಸೋಮವಾರ ರಾತ್ರಿ ವಿಪಕ್ಷ ನಾಯಕರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಔತಣಕೂಟದಲ್ಲಿ ಹಲವಾರು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆಯೂ ನಡೆಯಿತು.

ಇದುಕಪಿಲ್ ಸಿಬಲ್ ಹುಟ್ಟುಹಬ್ಬದ ಆಚರಣೆಯಾಗಿದ್ದರೂ, ಈ ಸಭೆಯು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಗೆ ತಂತ್ರಗಾರಿಕೆಯ ಕೇಂದ್ರವಾಯಿತು. ಕಾಂಗ್ರೆಸ್ ಪಕ್ಷವನ್ನು ಮತ್ತೆ ಬಲಪಡಿಸಯವ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಗಾಂಧಿ ಕುಟುಂಬಿಕರನ್ನು ನಾಯಕತ್ವದ ಹಿಡಿತದಿಂದ ಮುಕ್ತಗೊಳಿಸಿದರೆ ಮಾತ್ರ ಇದು ಸಾಧ್ಯ ಎಂದು ಕೆಲವು ನಾಯಕರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಸಂದರ್ಭದಲ್ಲಿ ಗಾಂಧಿ ಕುಟುಂಬಿಕರು ಭಾಗವಹಿಸಿರಲಿಲ್ಲ.

ಇದನ್ನೂ ಓದಿ:ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರಕಾರ!

ಕಳೆದ ವರ್ಷ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರವೊಂದನ್ನು ಬರೆದ ಸಿಬಲ್ ಅವರು, 2014 ರಲ್ಲಿ ಅಧಿಕಾರ ಕಳೆದುಕೊಂಡ ನಂತರ ಪಕ್ಷದ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಸಕ್ರಿಯ, ಗೋಚರ ನಾಯಕತ್ವ ಮತ್ತು ಆಂತರಿಕ ಚುನಾವಣೆಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಪತ್ರ ಬರೆಯಲಾಗಿತ್ತು.

ಪಕ್ಷದಲ್ಲಿ ನಾಯಕತ್ವ ಬದಲಾವಣೆಗೆ ಒತ್ತಾಯಿಸುವ ಇತರ ನಾಯಕರನ್ನು ಇಲ್ಲಿ ಆಹ್ವಾನಿಸಲಾಗಿತ್ತು. ಪಿ ಚಿದಂಬರಂ, ಶಶಿ ತರೂರ್ ಮತ್ತು ಆನಂದ್ ಶರ್ಮಾ ಔತಣ ಕೂಟದಲ್ಲಿ ಭಾಗವಹಿಸಿದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಶಿವಸೇನೆಯ ಸಂಜಯ್ ರಾವತ್, ಎನ್ ಸಿಪಿಯ ಶರದ್ ಪವಾರ್, ತೃಣಮೂಲದ ಡೆರೆಕ್ ಒಬ್ರೈನ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನ ಒಮರ್ ಅಬ್ದುಲ್ಲಾ ಸೇರಿದಂತೆ ವಿರೋಧ ಪಕ್ಷದ ನಾಯಕರು ಹಾಜರಿದ್ದರು.

ಈ ಹಿಂದೆ ಎನ್ ಡಿಎ ಭಾಗವಾಗಿದ್ದ ಅಕಾಲಿದಳವನ್ನು ಕೂಡ ಸಭೆಗೆ ಆಹ್ವಾನಿಸಲಾಗಿತು. ಅಕಾಲಿ ದಳ ಪಕ್ಷದ ಹಿರಿಯ ನಾಯಕ ನರೇಶ್ ಗುಜ್ರಾಲ್ ಹಾಜರಿದ್ದರು. ನವೀನ್ ಪಟ್ನಾಯಕ್ ಅವರ ಬಿಜು ಜನತಾದಳದಿಂದ ಪಿನಾಕಿ ಮಿಶ್ರಾ ಕೂಡ ಭಾಗವಹಿಸಿದ್ದರು.

ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್ ಯಾವಾಗ ಪ್ರಬಲವಾಗಿದೆಯೋ ಆಗ ಪ್ರತಿಪಕ್ಷಗಳು ಬಲಗೊಳ್ಳುತ್ತವೆ ಮತ್ತು ಪಕ್ಷವನ್ನು ಬಲಪಡಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರು ಮತ್ತು ಇತರ ವಿರೋಧ ಪಕ್ಷಗಳು ಕಾಂಗ್ರೆಸ್ ಅನ್ನು ಬಲಪಡಿಸಲು ನಾಯಕತ್ವದಲ್ಲಿ ಬದಲಾವಣೆಯನ್ನು ಮಾಡಬೇಕು ಎಂದು ಸೂಚಿಸಿದರು. ಆದಾಗ್ಯೂ, ಹಲವು ನಾಯಕರು ರಾಹುಲ್ ಗಾಂಧಿಯ ಪುನರಾಗಮನಕ್ಕಾಗಿ ಒತ್ತಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.