ನೇರ ತೆರಿಗೆ ಸಂಗ್ರಹ ಶೇ.24 ಹೆಚ್ಚಳ: ಕೇಂದ್ರ ವಿತ್ತ ಖಾತೆ
Team Udayavani, Feb 12, 2023, 7:05 AM IST
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ನೇರ ತೆರಿಗೆ ಸಂಗ್ರಹ ಶೇ. 24ರಷ್ಟು ಹೆಚ್ಚಳವಾಗಿದ್ದು, ಈವರೆಗೆ ಒಟ್ಟು 15.67 ಲಕ್ಷ ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ಶನಿವಾರ ಕೇಂದ್ರ ವಿತ್ತ ಸಚಿ ವಾಲಯ ಮಾಹಿತಿ ನೀಡಿದೆ.
ಜತೆಗೆ ರೀಫಂಡ್ (ಮರು ಪಾವತಿ)ಗೆ ಹೊಂದಾಣಿಕೆ ಮಾಡಿದ ಬಳಿಕ ನಿವ್ವಳ ನೇರ ತೆರಿಗೆ ಸಂಗ್ರಹ 12.98 ಲಕ್ಷ ಕೋಟಿ ರೂ. ಆಗಿದ್ದು, ಶೇ. 18.40ರ ಬೆಳವಣಿಗೆ ದಾಖಲಿಸಿದೆ. ಇದು ಪ್ರಸಕ್ತ ಹಣಕಾಸು ವರ್ಷದ ನೇರ ತೆರಿಗೆ ಸಂಗ್ರಹದ ಪರಿಷ್ಕೃತ ಅಂದಾಜಿನ ಶೇ. 79ರಷ್ಟು ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ.
ಫೆ. 10ರ ವರೆಗೆ 15.67 ಲಕ್ಷ ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 24.09ರಷ್ಟು ಏರಿಕೆ ಆಗಿದೆ. ವಿತ್ತ ವರ್ಷ ಮುಗಿಯಲು ಇನ್ನೂ 2 ತಿಂಗಳು ಬಾಕಿಯಿದ್ದು, ಹಾಲಿ ಹಣಕಾಸು ವರ್ಷದಲ್ಲಿ (2022 23) ನೇರ ತೆರಿಗೆಯ ಆದಾಯವು ಶೇ. 17ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. 2021 22ರ ಹಣಕಾಸು ವರ್ಷದಲ್ಲಿ ಒಟ್ಟಾರೆ ನೇರ ತೆರಿಗೆ ಸಂಗ್ರಹ 14.08 ಲಕ್ಷ ಕೋಟಿ ರೂ. ಆಗಿತ್ತು.
ಎಪ್ರಿಲ್ ಮತ್ತು ಫೆಬ್ರವರಿ 10ರ ನಡುವೆ ಒಟ್ಟು ಕಾರ್ಪೊರೇಟ್ ಆದಾಯ ತೆರಿಗೆ ಮತ್ತು ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಕ್ರಮವಾಗಿ ಶೇ. 19.33 ಮತ್ತು ಶೇ. 29.63ರಷ್ಟು ಏರಿಕೆ ಕಂಡಿದೆ.
ರಾಜ್ಯ: ದಾಖಲೆ ಜಿಎಸ್ಟಿ ಸಂಗ್ರಹ
ಬೆಂಗಳೂರು: ಈ ವರ್ಷದ ಜನವರಿಯಲ್ಲಿ 6,085 ಕೋಟಿ ರೂ. ಜಿಎಸ್ಟಿ ಸಂಗ್ರಹಿಸುವ ಮೂಲಕ ರಾಜ್ಯ ಸರಕಾರ ದಾಖಲೆ ಬರೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಶೇ. 30ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣ ಹೊಂದಿರುವ ರಾಜ್ಯವಾಗಿ ಮುಂದುವರಿದಿದೆ. ತೆರಿಗೆ ಸಂಗ್ರ ಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು