CBI ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧ SIT ತನಿಖೆ: ಸುಪ್ರೀಂ
Team Udayavani, Jan 23, 2017, 3:28 PM IST
ಹೊಸದಿಲ್ಲಿ : 2ಜಿ ಹಾಗೂ ಕಲ್ಲಿದ್ದಲು ಹಗರಣದಲ್ಲಿ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಇಂದು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಆದೇಶಿಸಿದೆ.
ಸಿನ್ಹಾ ಅವರು ಕಲ್ಲಿದ್ದಲು ಹಗರಣದಲ್ಲಿ ಶಾಮೀಲಾಗಿರುವ ಕೆಲವು ಆರೋಪಿಗಳೊಂದಿಗೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಸುಪ್ರೀಂ ಕೋರ್ಟ್ ಇಂದು ಸೋಮವಾರ ಹೇಳಿದೆ.
ಮಾಜಿ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ಅವರು ತಮ್ಮ ಅಧಿಕಾರವನ್ನು ದುರುಪಯೋಗಿಸಿರುವುದಾಗಿ ಆಪಾದಿಸಲಾಗಿದೆ.
ಜಸ್ಟಿಸ್ ಎಂ ಬಿ ಲೋಕೂರ್ ನೇತೃತ್ವದ ಸುಪ್ರೀಂ ಕೋರ್ಟಿನ ವಿಶೇಷ ಪೀಠವು ಸಿನ್ಹಾ ವಿರುದ್ಧ ತೀರ್ಪು ಪ್ರಕಟಿಸುವುದಿತ್ತಾದೂ ಅತ್ಯಂತ ಮುಖ್ಯ ಸಾಕ್ಷ್ಯದ ಕೊರತೆಯಿಂದಾಗಿ ಅದು ಸಿನ್ಹಾ ವಿರುದ್ಧ ಎಸ್ಐಟಿ ತನಿಖೆಗೆ ಆದೇಶಿಸಿದೆ.
ರಂಜಿತ್ ಸಿನ್ಹಾ ಅವರು 2ಜಿ ಹಾಗೂ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಮೇಲ್ ಮಟ್ಟದ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಿ ತನಿಖೆಯ ಮೇಲೆ ಪ್ರಭಾವ ಬೀರಿರುವುದನ್ನು ಮಾಜಿ ಸಿಬಿಐ ನಿರ್ದೇಶಕ ಎಂ ಎಲ್ ಶರ್ಮಾ ನೇತೃತ್ವದ ತಂಡವು ಕಂಡುಕೊಂಡಿರುವುದನ್ನು ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಕೋರ್ಟಿಗೆ ತಿಳಿಸಿರುವ ಹಿನ್ನೆಲೆಯಲ್ಲಿ 2016ರ ಜುಲೈ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಈ ಕೇಸಿಗೆ ಸಂಬಂಧಪಟ್ಟ ತನ್ನ ಆದೇಶನ್ನು ಕಾದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ