ಬಿಜೆಪಿ ಶಾಸಕರೊಬ್ಬರ ಬರ್ತ್ ಡೇ ಪಾರ್ಟಿಯಲ್ಲಿ ಸಂಘರ್ಷ: ಇಬ್ಬರು ಸಾವು
Team Udayavani, Mar 6, 2021, 7:03 PM IST
ಮಧ್ಯಪ್ರದೇಶ: ಬಿಜೆಪಿ ಶಾಸಕರೊಬ್ಬರ ಜನ್ಮದಿನದ ಸಂಭ್ರಮದ ವೇಳೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಬನ್ವಾರ್ ಗ್ರಾಮದಲ್ಲಿ ನಡೆದಿದೆ.
ಮಧ್ಯಪ್ರದೇಶ ಜಬೇರಾ ಕ್ಷೇತ್ರದ ಶಾಸಕ ಧರ್ಮೇಂದ್ರ ಸಿಂಗ್ ಲೋಧಿ ಜನ್ಮದಿನದ ಸಂಭ್ರಮದ ವೇಳೆ ಈ ದುರಂತ ಸಂಭವಿಸಿದ್ದು, ಮೃತಪಟ್ಟವರನ್ನು ಜೋಗೇಂದ್ರ ಸಿಂಗ್ (30) ಮತ್ತು ಅರವಿಂದ್ ಜೈ ಎಂದು ಗುರುತಿಸಲಾಗಿದೆ.
ಶುಕ್ರವಾರ (ಮಾ.5) ರಾತ್ರಿ ಸಮಯದಲ್ಲಿ ಈ ಪ್ರಕರಣ ನಡೆದಿದ್ದು, ಪಾರ್ಟಿಯ ಸಮಯದಲ್ಲಿ ನಡೆದ ಸಂಘರ್ಷವೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಪೈಕಿ ಅರವಿಂದ ಪೈ ಎಂಬಾತ ಶಾಸಕ ಧರ್ಮೇಂದ್ರ ಸಿಂಗ್ ಲೋಧಿ ಕಡೆಯವನಾಗಿದ್ದು, ಜೋಗೇಂದ್ರ ಸಿಂಗ್ ಅತಿಥಿ ಉಪನ್ಯಾಸಕನಾಗಿದ್ದ.
ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಪಟ್ಟಿ ರಿಲೀಸ್ : ನಂದಿಗ್ರಾಮದಲ್ಲಿ ದೀದಿಗೆ ವಿರುದ್ಧ ಸುವೆಂದು ಅಧಿಕಾರಿ
ವರದಿಗಳ ಪ್ರಕಾರ ಜೋಗೇಂದ್ರ ಸಿಂಗ್ ಗುಂಡು ತಗುಲಿ ಸಾವನ್ನಪ್ಪಿದ್ದರೆ, ಅರವಿಂದ್ ಜೈ ಎಂಬ ವ್ಯಕ್ತಿಯನ್ನು ಬಡಿಗೆ ಹಾಗೂ ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ.
ಘಟನೆ ನಡೆಯುವ ವೇಳೆ ಧರ್ಮೇಂದ್ರ ಸಿಂಗ್ ಸ್ಥಳದಲ್ಲಿರಲಿಲ್ಲ ಎಂದು ವರದಿಯಾಗಿದೆ. ನೋಹಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಹೊಸ ಗೌಪ್ಯತಾ ನೀತಿ: ಮತ್ತೊಮ್ಮೆ ಬಳಕೆದಾರರಿಗೆ ನೋಟಿಫಿಕೇಶನ್ ಕಳುಹಿಸಲಾರಂಭಿಸಿದ WhatsApp
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!