‘ಮಹಾ’ ಕಾಂಗ್ರೆಸ್‌ನೊಳಗೂ ಮುನಿಸು ಸ್ಫೋಟ

ಲೆಟರ್‌ಬಾಂಬ್‌ ನಡುವೆ ಸೋನಿಯಾ ಗಾಂಧಿಗೆ ಮತ್ತೂಂದು ತಲೆನೋವು

Team Udayavani, Aug 29, 2020, 7:06 AM IST

‘ಮಹಾ’ ಕಾಂಗ್ರೆಸ್‌ನೊಳಗೂ ಮುನಿಸು ಸ್ಫೋಟ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: 23 ಮುಖಂಡರ ‘ಲೆಟರ್‌ ಬಾಂಬ್‌’ ಸ್ಫೋಟದ ಬೆನ್ನಲ್ಲೇ, ಮಹಾರಾಷ್ಟ್ರದ ಕಾಂಗ್ರೆಸ್‌ ಕೂಡ ಬೂದಿ ಮುಚ್ಚಿದ ಕೆಂಡವಾಗಿ, ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಲೆನೋವು ಹೆಚ್ಚಿಸಿದೆ.

ಇಲ್ಲಿ ಕಾಂಗ್ರೆಸ್‌, ಎನ್‌ಸಿಪಿ ಜತೆ ಸೇರಿ ಶಿವಸೇನೆ ನೇತೃತ್ವದ ಮೈತ್ರಿ ಸರಕಾರಕ್ಕೆ ಬೆಂಬಲ ಸೂಚಿಸಿರುವುದು ನಿಜ. ಆದರೆ, ಶಿವಸೇನೆ ಮಾತ್ರ ಕೈ ಶಾಸಕರಿಗೆ ಸೂಕ್ತ ಗೌರವ ನೀಡುತ್ತಿಲ್ಲ.

‘ನಮ್ಮ ವಿಧಾನಸಭಾ ಕ್ಷೇತ್ರಗಳಿಗೆ ಶಿವಸೇನೆ ಅನುದಾನದ ತಾರತಮ್ಯ ಎಸಗುತ್ತಿದೆ’ ಎಂದು ಕೈ ಶಾಸಕರು ಉದ್ಧವ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಧರಣಿ ಎಚ್ಚರಿಕೆ: ಮರಾಠವಾಡ ಪ್ರದೇಶ ಜಲ್ಸಾದ ಶಾಸಕ ಕೈಲಾಶ್‌ ಗೊರಂಟ್ಯಾಲ್‌ ಅನುದಾನ ಹಂಚಿಕೆ ವಿಚಾರದಲ್ಲಿ ಶಿವಸೇನೆ ಮಲತಾಯಿ ಧೋರಣೆ ಅನುಸರಿಸುತ್ತಿದೆ.

ಜಲ್ಸಾ ಮುನ್ಸಿಪಲ್‌ ಕೌನ್ಸಿಲ್‌ಗೆ ಅನುದಾನ ಬಿಡುಗಡೆ ಮಾಡದೆ ಶಿವಸೇನೆಯ ಏಕನಾಥ ಶಿಂಧೆ ನೇತೃತ್ವದ ನಗರ ಅಭಿವೃದ್ಧಿ ಪ್ರಾಧಿಕಾರ ಸತಾಯಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಶಿವಸೇನೆಯ ಈ ನಿಲುವು ಖಂಡಿಸಿ ಕೈ ಪಕ್ಷದ 11 ಶಾಸಕರು ಉಪವಾಸ ಸತ್ಯಾಗ್ರಹ ನಡೆಸುವುದಾಗಿಯೂ ಬೆದರಿಕೆಯೊಡ್ಡಿದ್ದಾರೆ. ಮೈತ್ರಿ ಸರ್ಕಾರದ ಕಾಂಗ್ರೆಸ್‌ನ ಒಟ್ಟು 44 ಶಾಸಕರಲ್ಲಿ 11 ಶಾಸಕರ ಈ ಬಂಡಾಯದ ಬಿಸಿಯನ್ನು ತಣಿಸಲು ಕೈ ಹೈಕಮಾಂಡ್‌ ಹರಸಾಹಸಪಡುತ್ತಿದೆ.

ಥೋರತ್‌ ದುರ್ಬಲ: ಇನ್ನೊಂದೆಡೆ ಪ್ರಬಲ ಮರಾಠ ಸಮುದಾಯಕ್ಕೆ ಸೇರಿದ ಕಂದಾಯ ಸಚಿವ ಬಾಳಾಸಾಹೇಬ್‌ ಥೋರತ್‌ ಮಹಾರಾಷ್ಟ್ರ ಕಾಂಗ್ರೆಸ್‌ ಸಮಿತಿ (ಎಂಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿರುವುದು ಅನೇಕರಿಗೆ ಅಸಮಾಧಾನ ತಂದಿದೆ. 8 ಬಾರಿ ಶಾಸಕರಾದ ಅನುಭವವಿದ್ದರೂ ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಥೋರತ್‌ ವಿಫ‌ಲರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಕೈಗೆ 24×7 ನಾಯಕತ್ವ ಬೇಕಿದೆ: ಕಪಿಲ್‌ ಸಿಬಲ್‌
ಲೆಟರ್‌ಬಾಂಬ್‌ನಲ್ಲಿ ಪ್ರಮುಖವಾಗಿ ಸಹಿ ಹಾಕಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ ಕಪಿಲ್‌ ಸಿಬಲ್‌ ಮತ್ತೆ ಪಕ್ಷವನ್ನು ಕಟುವಾಗಿ ವಿಮರ್ಶಿಸಿದ್ದಾರೆ. ಕಾಂಗ್ರೆಸ್‌ ಐತಿಹಾಸಿಕವಾಗಿ ಅಧಃಪತನಕ್ಕೆ ಇಳಿದಿದೆ. ಈ ಪಕ್ಷವನ್ನು ಮೇಲೆತ್ತಲು 24×7 ನಾಯಕತ್ವದ ಆವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಗುರುವಾರ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ನಮ್ಮ ಪತ್ರ, ವಿಮರ್ಶೆಗಳ ಉದ್ದೇಶ ಪಕ್ಷ ಪುನರುಜ್ಜೀವ ನಗೊಳಿಸುವುದೇ ಆಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

– ಶಿವಸೇನೆ ವಿರುದ್ಧ 11 ಕಾಂಗ್ರೆಸ್‌ಶಾಸಕರ ಧರಣಿ ಎಚ್ಚರಿಕೆ
– ಅನುದಾನ ನೀಡದೆ ಆಟ ಆಡಿಸುತ್ತಿರುವ ಶಿವಸೇನೆ
– 11 ಶಾಸಕರ ಬಂಡಾಯ ಶಮನಕ್ಕೆ ಕಾಂಗ್ರೆಸ್‌ ಹರಸಾಹಸ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.