Congress ಡಿಎನ್ ಎಯಲ್ಲೇ ವಿಭಜನೆ ಅಂತರ್ಗತವಾಗಿದೆ: ಸಂಸದ ತೇಜಸ್ವಿ ಸೂರ್ಯ
ದಕ್ಷಿಣ ಭಾರತ ಬಿಜೆಪಿಯ ಕೋಟೆಯಾಗಲಿದೆ...
Team Udayavani, Feb 29, 2024, 6:34 PM IST
ನಾಗ್ಪುರ: “ಕಾಂಗ್ರೆಸ್ನ ಡಿಎನ್ಎಯಲ್ಲಿ ವಿಭಜನೆ ಅಂತರ್ಗತವಾಗಿದೆ” ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುರುವಾರ ಕಿಡಿ ಕಾರಿದ್ದಾರೆ.
ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ವಿಧಾನಸೌಧದ ಕಾರಿಡಾರ್ಗನಲ್ಲಿ ಪಾಕಿಸ್ಥಾನದ ಪರ ಘೋಷಣೆಗಳು ಕೇಳಿಬಂದಿರುವ ಕುರಿತು ಪ್ರತಿಕ್ರಿಯಿಸಿ,”ದೇಶವನ್ನು ವಿಭಜಿಸಲು ಕಾಂಗ್ರೆಸ್ ಮೂಲ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲೇ ವಿಭಜನೆ ಅಂತರ್ಗತವಾಗಿದೆ. ಇದನ್ನು ಬಿಟ್ಟು ಬೇರೆ ಏನನ್ನೂ ಕಾಂಗ್ರೆಸ್ನಿಂದ ನಿರೀಕ್ಷಿಸುವುದು ತಪ್ಪಾಗುತ್ತದೆ” ಎಂದರು.
”ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತ ಬಿಜೆಪಿಯ ಕೋಟೆಯಾಗಲಿದೆ. ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಮೈತ್ರಿಕೂಟ ಗೆಲ್ಲಲಿದೆ. ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಐತಿಹಾಸಿಕ ಜನಾದೇಶ ಪಡೆಯಲಿದೆ. ಬಿಜೆಪಿ ಕೇರಳದಲ್ಲಿಯೂ ಲೋಕಸಭಾ ಸದಸ್ಯರನ್ನೂ ಹೊಂದಲಿದ್ದು, ಆಂಧ್ರಪ್ರದೇಶದಲ್ಲಿ ಪಕ್ಷದ ಮತಗಳ ಶೇಕಡಾವಾರು ಹೆಚ್ಚಾಗಲಿದೆ” ಎಂದರು.
”ಮಾರ್ಚ್ 4 ರಂದು ನಾಗ್ಪುರದಲ್ಲಿ ಆಯೋಜಿಸಲಾದ ‘ನಮೋ ಮಹಾ ಯುವ ಸಮ್ಮೇಳನ’ದ ರ್ಯಾಲಿಯನ್ನುದ್ದೇಶಿಸಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮಾತನಾಡಲಿದ್ದಾರೆ. ಸಮಾವೇಶದಲ್ಲಿ ಮಹಾರಾಷ್ಟ್ರದ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಭಾಗವಹಿಸಲಿದ್ದಾರೆ” ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ