ನಾಡಿನಾದ್ಯಂತ ದೀಪಾವಳಿ ಹಬ್ಬದ ಸಡಗರ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ
Team Udayavani, Oct 27, 2019, 9:29 AM IST
ನವದೆಹಲಿ : ದೇಶದಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ದೀಪದಿಂದ ದೀಪವನ್ನು ಹಚ್ಚುವ ಮೂಲಕ ಮನೆಮಂದಿಯೆಲ್ಲಾ ಖುಷಿಯಿಂದ ಕಲೆತು ಬೆರೆತು ಸಂಭ್ರಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬದ ಶುಭಾಸಯ ತಿಳಿಸಿದ್ದಾರೆ.
ದೀಪಾವಳಿ ಬರೀ ಹಬ್ಬವಲ್ಲ… ನಮ್ಮ ಸಂಸ್ಕೃತಿಯ ಸಾರ… ಭಾರತೀಯರಿಗೆ ದೀಪಾವಳಿ ಎಂದರೆ ಬಹುದೊಡ್ಡ ಹಬ್ಬ. ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ಪ್ರೀತಿ, ಕಾಳಜಿ ಹಾಗೂ ಹಂಚಿಕೆಯ ದೀಪವನ್ನು ಬೆಳಗಿಸುವ ಮೂಲಕ ನಿರ್ಗತಿಕರ ಜೀವನದಲ್ಲಿ ಸಂತೋಷವನ್ನು ತರೋಣ ಎಂದು ರಾಷ್ಟ್ರಪತಿಗಳು ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ಹೇಳಿದ್ದು , ದೀಪಾವಳಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ. ದೀಪಗಳ ಈ ಹಬ್ಬವು ನಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತರಲಿ ಮತ್ತು ನಮ್ಮ ದೇಶ ಸದಾಕಾಲ ಸಂತೋಷ, ಸಮೃದ್ಧಿ ಹಾಗೂ ಅದೃಷ್ಟದಿಂದ ಬೆಳಗಲಿ ಎಂದು ತಿಳಿಸಿದ್ದಾರೆ.
देशवासियों को दीपावली के पावन अवसर पर बहुत-बहुत शुभकामनाएं। रोशनी का यह उत्सव हम सभी के जीवन में नया प्रकाश लेकर आए और हमारा देश सदा सुख, समृद्धि और सौभाग्य से आलोकित रहे।
Wishing you all a Happy #Diwali. pic.twitter.com/5nhimk58CO
— Narendra Modi (@narendramodi) October 27, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ