ಕೇಂದ್ರ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್; ತುಟ್ಟಿಭತ್ಯೆ ಏರಿಕೆ, ಪಿಂಚಣಿದಾರರಿಗೂ ಲಾಭ
ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ
Team Udayavani, Oct 9, 2019, 3:09 PM IST
ನವದೆಹಲಿ:ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.5ರಷ್ಟು ಏರಿಕೆ ಮಾಡಿದ್ದು, ಇದರಿಂದ ಸುಮಾರು 50 ಲಕ್ಷ ಸರಕಾರಿ ನೌಕರರಿಗೆ ಲಾಭವಾಗಲಿದೆ. ಇದು ಕೇಂದ್ರ ಸರಕಾರಿ ನೌಕರರಿಗೆ ದೀಪಾವಳಿ ಕೊಡುಗೆಯಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಬುಧವಾರ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.12ರಿಂದ ಶೇ.17ಕ್ಕೆ ಏರಿಸಲಾಗಿದೆ ಎಂದು ಹೇಳಿದರು.
ತುಟ್ಟಿಭತ್ಯೆ ಶೇ.5ರಷ್ಟು ಏರಿಕೆಯಿಂದ ಕೇಂದ್ರ ಸರಕಾರದ ಬೊಕ್ಕಸಕ್ಕೆ 16 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ. ಈ ಘೋಷಣೆಯಿಂದ ಕೇಂದ್ರ ಸರಕಾರದ ಹಲವಾರು ಸೆಕ್ಟರ್ ಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಜಾವ್ಡೇಕರ್ ತಿಳಿಸಿದರು.
ಶೇ.5ರಷ್ಟು ತುಟ್ಟಿಭತ್ಯೆ ಏರಿಕೆಯಿಂದ ಸುಮಾರು 65 ಲಕ್ಷ ಪಿಂಚಣಿದಾರರಿಗೂ ಲಾಭವಾಗಲಿದೆ ಎಂದು ಜಾವ್ಡೇಕರ್ ಹೇಳಿದರು. ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.5ರಷ್ಟು ಏರಿಕೆ ಮಾಡಬೇಕೆಂದು 7ನೇ ವೇತನ ಆಯೋಗ ಕೂಡಾ ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ