ಆತ್ಮ ನಿರ್ಭರ ದೀಪಾವಳಿ; ಪರಿಸರ ಸ್ನೇಹಿ ಬೆಳಕಿನ ಹಬ್ಬದತ್ತ ಚಿತ್ತ


Team Udayavani, Nov 14, 2020, 5:43 AM IST

Atnanir

ಸಾಂದರ್ಭಿಕ ಚಿತ್ರ

ಮಣಿಪಾಲ: ಕೇಂದ್ರ ಸರಕಾರದ ಆತ್ಮ ನಿರ್ಭರ ಭಾರತ ಕಲ್ಪನೆಯಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ ಪರಿಸರ ಸ್ನೇಹಿ ಹಣತೆಗಳು ಸಿದ್ಧವಾಗಿವೆ. ಈ ಬಾರಿ ವಿಶೇಷವಾಗಿ ಸೆಗಣಿಯಿಂದ ತಯಾರಿಸಿದ ಹಣತೆಗಳು ಮಾರುಕಟ್ಟೆಗೆ ಬಂದಿವೆ. ಇನ್ನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಪಟಾಕಿ ರಹಿತವಾದ ಹಸುರು ದೀಪಾವಳಿ ಆಚರಿಸಲು ಜನರು ಹೆಚ್ಚಿನ ಒಲವು ಹೊಂದಿದ್ದಾರೆ. ಈ ಹಿಂದೆ ಇದ್ದಂತಹ ಚೀನಿ ವಸ್ತುಗಳ ಅಬ್ಬರ ತೀರಾ ಕಡಿಮೆಯಾಗಿದೆ.

ಸೆಗಣಿ ಮಿಶ್ರಿತ ಹಣತೆ
ದೀಪಾವಳಿ ಅಂದರೆ ಬೆಳಕೇ ಪ್ರಾಧಾನ್ಯ. ಇತ್ತೀಚೆಗಿನ ವರ್ಷಗಳಲ್ಲಿ ಜನರು ಮಣ್ಣಿನ ಹಣತೆಗಳನ್ನು ಹೆಚ್ಚಾಗಿ ಬಳಸಲಾರಂಭಿಸಿದ್ದಾರೆ. ಈ ಬಾರಿ ಅದಕ್ಕೆ ಹೊಸದಾಗಿ ಸೇರ್ಪಡೆಯಾಗಿರುವುದು ಸೆಗಣಿಯಿಂದ ನಿರ್ಮಿಸಿದ ಹಣತೆ. ದೇಶದೆಲ್ಲೆಡೆಯಂತೆ ಕರಾವಳಿಯ ಎಲ್ಲ ಕಡೆಯೂ ಈ ಬಾರಿ ಸೆಗಣಿ ಮಿಶ್ರಿತ ಹಣತೆ ಮಾರುಕಟ್ಟೆಗೆ ಬಂದಿದೆ. ವಿವಿಧ ಸಂಘ ಸಂಸ್ಥೆಗಳು, ಶಾಲೆ, ಕಾಲೇಜಿನ ಮಕ್ಕಳು ಹೀಗೆ ಹಲವಾರು ಮಂದಿ ಈ ಬಾರಿ ಸೆಗಣಿಯ ಹಣತೆ ನಿರ್ಮಿಸಿ ಮಾರುಕಟ್ಟೆಗೆ ಒದಗಿಸಿದ್ದಾರೆ. ಶೇ.70ರಷ್ಟು ಗೋಮಯ ಹಾಗೂ ಶೇ.30 ಮಣ್ಣು ಅಥವಾ ಇತರ ಪರಿಸರ ಪೂರಕ ವಸ್ತುಗಳನ್ನು ಬಳಸಿಕೊಂಡು ತಯಾರಿಸಲಾಗುತ್ತದೆ. ಇದು ನೀರಿನಲ್ಲಿ ತೇಲುತ್ತದೆ. ಕೆಲವು ದೀಪಗಳನ್ನು ಒಮ್ಮೆಗೆ ಮಾತ್ರ ಬಳಸಬಹುದಾಗಿದ್ದರೆ, ಇನ್ನು ಕೆಲವನ್ನು 5, 6 ಬಾರಿ ಹಚ್ಚಬಹುದಾಗಿದೆ. 50 ರೂ. ಪ್ಯಾಕೆಟ್‌ನಲ್ಲಿ 10ರಿಂದ 12 ಹಣತೆಗಳಿರುತ್ತವೆ. ದ.ಕ.. ಉಡುಪಿಯ ಹೆಚ್ಚಿನ ಅಂಗಡಿಗಳಲ್ಲಿ ಇದು ಲಭ್ಯವಿದ್ದು, ತಾತ್ಕಾಲಿಕ ಪಟಾಕಿ ಮಾರಾಟ ಅಂಗಡಿಗಳಲ್ಲೂ ಕೆಲವರು ಮಾರಾಟಕ್ಕೆ ಇರಿಸಿದ್ದಾರೆ. ಪರಿಸರ ಪೂರಕ ದೀಪಾವಳಿಯ ನಿಟ್ಟಿನಲ್ಲಿ ಇದೊಂದು ಹೊಸ ಹೆಜ್ಜೆ.

ಅಷ್ಟಪಟ್ಟಿ ಗೂಡುದೀಪ‌
ದೀಪಾವಳಿಯ ಇನ್ನೊಂದು ವಿಶೇಷ ಸ್ಥಳೀಯವಾಗಿ ತಯಾರಿಸಲಾಗಿರುವ ಅಷ್ಟಪಟ್ಟಿ ಗೂಡುದೀಪ. ಚೀನ ವಸ್ತುಗಳಿಗೆ ಬಹಿಷ್ಕಾರ ಹಿನ್ನೆಲೆಯಲ್ಲಿ ಈ ಬಾರಿ ಸಾಂಪ್ರದಾಯಿಕ ಆಕಾಶಬುಟ್ಟಿಗಳಿಗೆ ಬೇಡಿಕೆ ಹೆಚ್ಚಿದೆ. ಕರಾವಳಿಯ ಪ್ರಸಿದ್ಧ ಅಷ್ಟಪಟ್ಟಿ ಗೂಡುದೀಪಗಳಿಗೆ ಉತ್ತಮ ಬೇಡಿಕೆ ಬಂದಿದ್ದು, ಹೆಚ್ಚಿನವರು ಇದನ್ನು ಕೇಳಿ ಪಡೆಯುತ್ತಿದ್ದಾರೆ. ಹಿಂದೊಮ್ಮೆ ಮನೆಯಲ್ಲಿ ಮಾಡಿದ್ದವರು ಈಗ ಮತ್ತೂಮ್ಮೆ ಗೂಡುದೀಪ ತಯಾರಿಸಿ ಹಬ್ಬಕ್ಕೆ ದೇಶೀಯತೆಯ ಮೆರುಗನ್ನು ತಂದಿದ್ದಾರೆ. ಈ ಬಾರಿ ಕೆಲವೇ ಕೆಲವರು ಪ್ಲಾಸ್ಟಿಕ್‌ ಮಾದರಿಯ ವಸ್ತುಗಳಿಂದ ರಚಿಸಿದ ಗೂಡುದೀಪಗಳನ್ನು ಮಾರಾಟಕ್ಕೆ ಇಟ್ಟಿದ್ದರೂ ಅದಕ್ಕೆ ಬೇಡಿಕೆಯೇ ಇರಲಿಲ್ಲ.

ವಾತಾವರಣ ಶುದ್ಧ
ಎಲ್ಲವನ್ನೂ ಪವಿತ್ರ ಮಾಡುವಂತದ್ದು ಗೋಮಯ. ಪಾವಿತ್ರತೆ ಇರುವಲ್ಲಿ ಲಕ್ಷ್ಮೀ ನೆಲೆಸುತ್ತಾಳೆ. ಗೋಮಯದಲ್ಲಿ ಶ್ರೀ ಲಕ್ಷ್ಮಿ ನೆಲೆಸಿದ್ದಾಳೆ ಎನ್ನುವುದು ನಂಬಿಕೆ. ವೈಜ್ಞಾ ನಿಕವಾಗಿಯೂ ಗೋಮಯದಿಂದ ವಾತಾ ವರಣ ಶುದ್ಧವಾಗುತ್ತದೆ. ಋಣಾತ್ಮಕ ಶಕ್ತಿ ಹೊಡೆದೋಡಿಸುತ್ತದೆ. ಅಲ್ಲದೆ ಗೋಮಯ ಬಳಕೆಯಿಂದ ವೈರಸ್‌ ನಿರ್ಮೂಲ ನೆಯಾಗುತ್ತದೆ ಎನ್ನುವುದೂ ಸಾಬೀತಾಗಿದೆ.

ಪಟಾಕಿ ಮಾರಾಟ ಕುಸಿತ
ಕಳೆದ ದೀಪಾವಳಿಯಿಂದ ದೇಶದಲ್ಲಿ ಪಟಾಕಿ ಮಾರಾಟ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ. ಒಟ್ಟಾರೆ ವ್ಯಾಪಾರದಲ್ಲಿ ಶೇ. 20ರಿಂದ ಶೇ. 30ರಷ್ಟು ಕುಸಿತ ಕಂಡು ಬಂದಿದೆ. ಭಾರೀ ಶಬ್ದವನ್ನುಂಟು ಮಾಡುವ ಪಟಾಕಿಗಳ ಬೇಡಿಕೆ ಶೇ. 50ರಷ್ಟು ಕಡಿಮೆಯಾಗಿತ್ತು. ಮುಂಬಯಿ-ಥಾಣೆಯಂತಹ ಮಹಾನಗರಗಳಲ್ಲಿ ಪ್ರತಿ ವರ್ಷ 300 ಕೋಟಿ. ರೂ.ಗಳ ಪಟಾಕಿಗಳು ಮಾರಾಟವಾಗುತ್ತಿತ್ತು. ಅವುಗಳ ಪ್ರಮಾಣ ಕಳೆದ ವರ್ಷ ಶೇ. 30ರಷ್ಟು ಇಳಿಕೆಯಾಗಿತ್ತು. ಈ ವರ್ಷ ಹಸಿರು ಪಟಾಕಿ ಮತ್ತು ಆತ್ಮನಿರ್ಭರ್‌ ಭಾರತ್‌ನಡಿ ದೀಪಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇದು ಪಟಾಕಿ ವ್ಯಾಪಾರದ ಮೇಲೆ ನೇರ ಪರಿಣಾಮಬೀರಲಿದೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.