ಡಿಕೆಶಿ-ನಿತ್ಯಾನಂದ ಸಂಪರ್ಕ ಬಹಿರಂಗ, ಜಾಲ ತಾಣಗಳಲ್ಲಿ ವೈರಲ್‌ ಆಗಿದೆ ಫೋಟೋ


Team Udayavani, Nov 22, 2019, 9:09 PM IST

dk-nitya

– 2018ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭೇಟಿಯಾಗಿದ್ದನ್ನು ಒಪ್ಪಿದ ಕಾಂಗ್ರೆಸ್‌ ನಾಯಕ
– ದೇಶ ಬಿಟ್ಟು ಪರಾರಿಯಾಗುವ ಮೊದಲು ಪಾಸ್‌ಪೋರ್ಟ್‌ ನವೀಕರಿಸಲು ನಿತ್ಯಾನಂದ ವಿಫ‌ಲ
– ಗುರುತರ ಆರೋಪಗಳು ಇರುವ ಹಿನ್ನೆಲೆಯಲ್ಲಿ ನವೀಕರಣಕ್ಕೆ ಅವಕಾಶ ನೀಡಿರಲಿಲ್ಲ: ರಾಮನಗರ ಎಸ್‌ಪಿ

ಅಹಮದಾಬಾದ್‌/ಬೆಂಗಳೂರು: ಬಿಡದಿಯ ನಿತ್ಯಾನಂದ ಸ್ವಾಮಿ ವಿದೇಶಕ್ಕೆ ಪರಾರಿಯಾಗಿರುವ ವಿಚಾರ ಬಹಿರಂಗವಾಗುತ್ತಲೇ, ಮತ್ತೂಂದು ಕುತೂಹಲಕಾರಿ ಅಂಶ ಬಯಲಾಗಿದೆ. ಕರ್ನಾಟಕದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ನಿತ್ಯಾನಂದ ಸ್ವಾಮಿ ಭೇಟಿಯಾಗಿರುವ ಫೋಟೋ ಶುಕ್ರವಾರ ವೈರಲ್‌ ಆಗಿದೆ.

ನಿತ್ಯಾನಂದ ಸ್ವಾಮಿಯನ್ನು ಭೇಟಿಯಾಗಿರುವ ಅಂಶವನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ “ಎಎನ್‌ಐ’ ಸುದ್ದಿ ಸಂಸ್ಥೆ ಜತೆಗೆ ಮಾತನಾಡಿರುವ ಅವರು, 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತ ಯಾಚನೆಗಾಗಿ ಭೇಟಿಯಾಗಿರುವುದನ್ನು ಖಚಿತಪಡಿಸಿದ್ದಾರೆ. ಜತೆಗೆ 20 ವರ್ಷಗಳಿಂದ ಪರಿಚಯ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಆ ಭೇಟಿಯಲ್ಲಿ ಬೇರೆ ಯಾವುದೇ ಉದ್ದೇಶ ಇರಲಿಲ್ಲ. ಅವರ ಮತ್ತು ಅವರ ಆಶ್ರಮದಲ್ಲಿರುವವರ ಮತಗಳ ಯಾಚನೆಗಾಗಿ ಹೋದದ್ದು ಹೌದು. ನಿತ್ಯಾನಂದ ಆಶ್ರಮ ಮಾತ್ರವಲ್ಲದೆ, ಕೆಲವೊಂದು ಶಿಕ್ಷಣ ಸಂಸ್ಥೆಗಳನ್ನೂ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಅವಧಿ ಮುಕ್ತಾಯ:
ನಿತ್ಯಾನಂದ ಸ್ವಾಮಿ ದೇಶ ಬಿಡುವ ಮೊದಲು ಅವಧಿ ಮುಕ್ತಾಯವಾಗಿದ್ದ ಪಾಸ್‌ಪೋರ್ಟ್‌ ಅನ್ನು ನವೀಕರಿಸಿಕೊಳ್ಳಲೂ ಸಾಧ್ಯವಾಗಿರಲಿಲ್ಲ.

ಅಹಮದಾಬಾದ್‌ ಪೊಲೀಸರು ನಿತ್ಯಾನಂದ ಸ್ವಾಮಿಯ ಬೆನ್ನು ಬೀಳುವ ಬದಲು ಗುರುವಾರ ಬಂಧಿಸಲಾಗಿರುವ ಆತನ ಇಬ್ಬರು ನಿಕಟವರ್ತಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಾತನಾಡಿ, ನಿತ್ಯಾನಂದ ಸ್ವಾಮಿಗೆ ಪಾಸ್‌ಪೋರ್ಟ್‌ ನವೀಕರಿಸಿಕೊಳ್ಳಲು ಅವಕಾಶ ನಿರಾಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಸಂಚು ರೂಪಿಸಲಾಗುತ್ತಿದೆ:
ಇಬ್ಬರು ಹೆಣ್ಣು ಮಕ್ಕಳನ್ನು ಅಕ್ರಮವಾಗಿ ಕೂಡಿ ಹಾಕಲಾಗಿದೆ ಎಂಬ ಆರೋಪಗಳ ಬಗ್ಗೆ ಪರಾರಿಯಾಗಿರುವ ನಿತ್ಯಾನಂದ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. “ಈ ಪ್ರಕರಣದ ಮೂಲಕ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ’ ಎಂದು ಅಲವತ್ತುಕೊಂಡಿದ್ದಾರೆ. ಈ ವಿಚಾರದಲ್ಲಿ ಸುಳ್ಳು ಹೇಳುತ್ತಿಲ್ಲ. ನಿಜಾಂಶವನ್ನೇ ಹೇಳುತ್ತಿದ್ದೇನೆ ಎಂದು ಪ್ರತಿಪಾದಿಸಿದ್ದಾರೆ.

ಅಹಮದಾಬಾದ್‌ನಲ್ಲಿರುವ ನಿತ್ಯಾನಂದರ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಬೆಂಗಳೂರಿನ ದಂಪತಿ ಗುಜರಾತ್‌ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು. ಅದಕ್ಕನುಸಾರವಾಗಿ, ಎಫ್ಐಆರ್‌ ದಾಖಲಾಗಿದೆ ಮತ್ತು ಇಬ್ಬರನ್ನು ಬಂಧಿಸಲಾಗಿದೆ.

ಈಕ್ವೇಡಾರ್‌ನಲ್ಲಿ ನಿತ್ಯಾನಂದ?
ಸ್ವಾಮಿ ನಿತ್ಯಾವಂದ ಈಕ್ವೇಡಾರ್‌ನಲ್ಲಿ ಅಡಗಿಕೊಂಡಿರುವ ಸಾಧ್ಯತೆ ಇದೆ ಎಂದು ಆತನ ಮಾಜಿ ಸಹಾಯಕಿ ಕೆನಡಾದ ಸರಹಾ ಸ್ಟೇಫಾನಿ ಲ್ಯಾಂಡ್ರಿ ಹೇಳಿದ್ದಾರೆ. ಈ ಬಗ್ಗೆ ರಿಪಬ್ಲಿಕ್‌ ವಾಹಿನಿ ವರದಿ ಮಾಡಿದೆ. ನಿತ್ಯಾನಂದನ ಜತೆಗೆ ಜನಾರ್ದನ ಶರ್ಮಾರ ಪುತ್ರಿ ಲೋಪಮುದ್ರಾಳೂ ಈಕ್ವೇಡಾರ್‌ನಲ್ಲೇ ಇರಬಹುದು ಎಂದು ಹೇಳಿದ್ದಾರೆ. ಭಾರತದಲ್ಲಿ ನಿತ್ಯಾನಂದನ ವಿರುದ್ಧ ಕೇಸುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಇಡೀ ಆಶ್ರಮವನ್ನೇ ಈಕ್ವೇಡಾರ್‌ಗೆ ಸ್ಥಳಾಂತರಿಸುವ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ ಎಂದೂ ಸರಹಾ ಹೇಳಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.