ಕರುಣಾನಿಧಿ ಅನುಪಸ್ಥಿತಿಯಲ್ಲಿ ಪುತ್ರ ಸ್ಟಾಲಿನ್‌ನಿಂದ ಪ್ರಜ್ವಲಿಸಿದ ಸೂರ್ಯ


Team Udayavani, May 24, 2019, 2:26 PM IST

chennai

ತಮಿಳುನಾಡಿನಲ್ಲಿ ಮುಂದಿನ ವಿಧಾನಸಭೆ ಚುನಾವಣೆ 2021ರಲ್ಲಿ ನಡೆಯಲಿದೆ. ಅದಕ್ಕೆ ಪೂರಕವಾಗಿ ಹಾಲಿ ಲೋಕಸಭೆ ಚುನಾವಣೆ ನಡೆದಿದೆ. ಸದ್ಯ ಅಧಿಕಾರದಲ್ಲಿರುವ ಎಐಎಡಿಎಂಕೆ ಕೇವಲ ಒಂದು ಲೋಕಸಭಾ ಸ್ಥಾನದಲ್ಲಿ ಮಾತ್ರ ಗೆದ್ದಿದೆ. ಉಳಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಹೀನಾಯ ಸೋಲು ಅನುಭವಿಸಿದೆ. ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅಲೆ ಇದ್ದರೂ, ಇದು ತಮಿಳುನಾಡಿಗೆ ಮಾತ್ರ ಯಾವುದೇ ಪರಿಣಾಮ ಬೀರಿಲ್ಲ.

ಡಿಎಂಕೆ ಮತ್ತು ಕಾಂಗ್ರೆಸ್‌ ಮೈತ್ರಿ ಒಟ್ಟು 31 ಕ್ಷೇತ್ರಗಳಲ್ಲಿ ಜಯಗಳಿಸಿವೆ. ಕಾಂಗ್ರೆಸ್‌ 8, ಡಿಎಂಕೆ 23 ಕ್ಷೇತ್ರಗಳಲ್ಲಿ ಗೆದ್ದಿವೆ. ಸಿಪಿಐ 2, ಸಿಪಿಎಂ 2, ಐಯುಎಂಎಲ್‌ 1, ವಿಸಿಕೆ ಪಕ್ಷ 1 ಸ್ಥಾನಗಳಲ್ಲಿ ಜಯ ಗಳಿಸಿವೆ. ಡಿಎಂ ಕೆಯ ಅಧ್ಯಕ್ಷರಾಗಿದ್ದ ಎಂ.ಕರುಣಾನಿಧಿ ನಿಧನದ ಬಳಿಕ ಹಾಲಿ ಲೋಕಸಭೆ ಚುನಾವಣೆ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ ಅವರಿಗೆ ಸವಾಲಿನದ್ದಾಗಿತ್ತು. ಕಮಲ್‌ಹಾಸನ್‌ ಅವರ ಮಕ್ಕಳ್‌ ನೀತಿ ಮಯ್ಯಂ ಯಾವುದೇ ಪ್ರಭಾವ ಬೀರುವಲ್ಲಿ ವಿಫ‌ಲವಾಗಿದೆ

ಎಐಎಡಿಎಂಕೆ, ಬಿಜೆಪಿ, ಪಿಎಂಕೆ, ಡಿಎಂಡಿಕೆ ಜತೆ ಗೂಡಿ ರಚಿಸಿರುವ ಮೈತ್ರಿಕೂಟ ಧೂಳಿಪಟವಾಗಿದೆ. ತಮಿಳುನಾಡಿನ ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಸಚಿವ ಪೋನ್‌ ರಾಧಾಕೃಷ್ಣನ್‌ ಕಾಂಗ್ರೆಸ್‌-ಡಿಎಂಕೆ ಮೈತ್ರಿಕೂಟದ ಎದುರು ಸೋತಿದ್ದಾರೆ. ಕನ್ಯಾಕುಮಾರಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ರಾಧಾಕ ‌ೃಷ್ಣನ್‌ ಕಾಂಗ್ರೆಸ್‌ನ ಎಚ್‌. ವಸಂತಕುಮಾರ್‌ ವಿರುದ್ಧ 2,46,136 ಮತಗಳ ಅಂತರದಿಂದ ಸೋತಿ ದ್ದಾರೆ. ಅವರ ಜತೆಗೆ ಬಿಜೆಪಿಯ ಇತರ ನಾಲ್ವರೂ ಸೋತಿ ದ್ದಾರೆ. ರಾಜ್ಯ ಬಿಜೆಪಿ ಘಟಕದ ನಾಯಕಿ ತಮಿ ಳುಸೈ ಸುಂದರ ರಾಜನ್‌ ಟ್ಯುಟಿಕಾರಿನ್‌ನಿಂದ ಸೋತಿ ದ್ದಾರೆ. ಅವರ ವಿರುದ್ಧ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಸ್ಪರ್ಧಿಸಿದ್ದಾರೆ. ನೀಲಗಿರಿ ಕ್ಷೇತ್ರದಿಂದ ಮಾಜಿ ಸಚಿವ ಎ.ರಾಜಾ ಗೆದ್ದಿದ್ದಾರೆ. ಅವರು ಎಐಎ ಡಿಎಂಕೆಯ ಎಂ.ತ್ಯಾಗರಾಜನ್‌ ವಿರುದ್ಧ 2.05 ಲಕ್ಷ ಮತಗಳಿಂದ ಗೆದ್ದಿದ್ದಾರೆ. ಪುದುಚೇರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿ. ವೈಥಿಲಿಂಗಂ ಗೆದ್ದಿದ್ದಾರೆ. ಎಐಎನ್‌ಆರ್‌ಸಿ ಪಾರ್ಟಿ ಅಭ್ಯರ್ಥಿ ನಾರಾಯಣ ಸ್ವಾಮಿ ಕೇಶವನ್‌ 84 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.

ಒಂದೇ ಸ್ಥಾನ
ಸ್ಟಾರ್‌ ನಾಯಕ ಇಲ್ಲದೇ ಇದ್ದರೆ ಒಂದು  ಪಕ್ಷದ ಸ್ಥಿತಿ ಏನಾಗುತ್ತದೆ ಎನ್ನುವುದಕ್ಕೆ ಎಐಎಡಿಎಂಕೆ ಉತ್ತಮ ಉದಾಹರಣೆ. ಜಯಲಲಿತಾ ನಿಧನಾನಂತರ  ಆ ಪಕ್ಷಕ್ಕೆ ಇದು ಮೊತ್ತಮೊದಲ ಲೋಕಸಭೆ  ಚುನಾವಣೆ. ಹಾಲಿ ಲೋಕಸಭೆಯಲ್ಲಿ 37  ಸ್ಥಾನಗಳನ್ನು ಹೊಂದಿ ಮೂರನೇ ಅತಿದೊಡ್ಡ  ಪಕ್ಷವೆಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಹಾಲಿ ಚುನಾವಣೆಯಲ್ಲಿ ತಮಿಳು ನಾಡಿನ ಆಡಳಿತ ಪಕ್ಷಕ್ಕೆ ಒಂದೇ ಒಂದು ಸ್ಥಾನದಲ್ಲಿ ಗೆದ್ದಿದೆ. ಟಿಟಿವಿ ದಿನಕರನ್‌ರ ಎಎಂಎಂಕೆ ಭಾರಿ ಆಘಾತ ತಂದು ಕೊಟ್ಟದ್ದು ಸುಳ್ಳಲ್ಲ.

ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ತಮಿಳುನಾಡಿನ ಜನರು ಮತ ನೀಡ ಬಹುದಾಗಿತ್ತು. ಈ ಮೂಲಕ ಅವರಿಗೆ ಉತ್ತಮ ಸೌಲಭ್ಯಗಳು ಹೆಚ್ಚಿನ ರೀತಿಯಲ್ಲಿ ಸಿಗುತ್ತಿದ್ದವು.
ತಮಿಳುಸೈ ಸುಂದರರಾಜನ್‌, ಬಿಜೆಪಿ ನಾಯಕಿ

ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್‌ ಉತ್ತಮ ಸಾಧನೆಯನ್ನು ಮಾಡಿದೆ. ಇಂಥ ಕ್ಷಣದಲ್ಲಿ ನಮ್ಮ ಪಕ್ಷದ ಸಂಸ್ಥಾಪಕ, ತಂದೆ ಕರುಣಾನಿಧಿಯವರು ಇರಬೇಕಿತ್ತು. ಅವರ ಅನುಪಸ್ಥಿತಿ ನಮ್ಮನ್ನು ಬಹುವಾಗಿ ಕಾಡುತ್ತಿದೆ
ಎಂ.ಕೆ.ಸ್ಟಾಲಿನ್‌, ಡಿಎಂಕೆ ಅಧ್ಯಕ್ಷ


ಗೆದ್ದ ಪ್ರಮುಖರು

ಎ.ರಾಜಾ, ನೀಲಗಿರಿ
ಕನಿಮೋಳಿ, ಟ್ಯುಟಿಕಾರಿನ್‌
ಕಾರ್ತಿ ಚಿದಂಬರಂ, ಶಿವಗಂಗಾ
ಟಿ.ಆರ್‌.ಬಾಲು, ಶ್ರೀಪೆರಂಬದೂರ್‌
ಎಸ್‌.ಯು.ತಿರುನಾವುಕ್ಕರಸು, ತಿರುಚಿರಾಪಳ್ಳಿ

ಸೋತ ಪ್ರಮುಖರು
ಪೋನ್‌ ರಾಧಾಕೃಷ್ಣನ್‌ , ಕನ್ಯಾಕುಮಾರಿ
ಅಗ್ರಿ ಕೃಷ್ಣಮೂರ್ತಿ, ತಿರುವಣ್ಣಾಮಲೆ
ವಡಿವೇಲ್‌ ರವಣನನ್‌ ಎಸ್‌, ವಿಲ್ಲುಪುರಂ
ಅಲಗಾರ್‌ಸ್ವಾಮಿ ಆರ್‌, ವಿರುಧ್‌ನಗರ
ಎ.ಕೆ.ಮೂರ್ತಿ, ಅರಕ್ಕೋಣಂ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.