ಕರುಣಾನಿಧಿ ಸ್ಥಿತಿ ಗಂಭೀರ: ಮನೆಯಲ್ಲೆ ಚಿಕಿತ್ಸೆ;ಗಣ್ಯಾತೀಗಣ್ಯರ ದೌಡು
Team Udayavani, Jul 27, 2018, 9:47 AM IST
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ಅಧಿನಾಯಕ 94 ರ ಹರೆಯದ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರ ಸ್ವರೂಪಕ್ಕೆ ತಲುಪಿದೆ.
ಮನೆಯಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು , ಕಾವೇರಿ ಆಸ್ಪತ್ರೆಯ ವೈದ್ಯರ ತಂಡ ನಿಗಾ ವಹಿಸಿದೆ. ಮೂತ್ರ ನಾಳದ ಸೊಂಕಿನಿಂದಲೂ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಗೋಪಾಲಪುರಂನಲ್ಲಿರುವ ನಿವಾಸಕ್ಕೆ ಡಿಎಂಕೆ ಮುಖಂಡರು,ಉಪ ಮುಖ್ಯಮಂತ್ರಿ ಪನೀರ್ಸೆಲ್ವಂ , ನಟ ಕಮಲಹಾಸನ್ ಸೇರಿದಂತೆ ಗಣ್ಯಾತೀಗಣ್ಯರು ಭೇಟಿ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ತಂದೆ ಬಳಲುತ್ತಿದ್ದರು ಎಂದು ಪುತ್ರ ಸ್ಟಾಲಿನ್ ಹೇಳಿದ್ದಾರೆ.
ಮನೆಯ ಹೊರಗೆ ನೂರಾರು ಡಿಎಂಕೆ ಕಾರ್ಯಕರ್ತರು ಜಮಾವಣೆಗೊಳ್ಳುತ್ತಿದ್ದು, ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ