ಚೆನ್ನೈಯಲ್ಲಿ ಅಘೋಷಿತ ಬಂದ್‌ ;ಕರುಣಾ ಅಂತ್ಯ ಸಂಸ್ಕಾರ ಸ್ಥಳ ವಿವಾದ


Team Udayavani, Aug 8, 2018, 4:40 AM IST

karunanidhi-7-8-18.jpg

ಚೆನ್ನೈ: ಐದು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ, ದ್ರಾವಿಡ ಪಕ್ಷದ ಸೂರ್ಯ ಮುತ್ತುವೇಲ್‌ ಕರುಣಾನಿಧಿ ಅಸ್ತಂಗತರಾಗಿದ್ದಾರೆ. 94 ವರ್ಷದ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರು ಮೂತ್ರಕೋಶ ಸೋಂಕಿನಿಂದಾಗಿ ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿದ್ದರು. ಬಹು ಅಂಗಾಂಗ ವೈಫ‌ಲ್ಯದಿಂದಾಗಿ ಚಿಕಿತ್ಸೆ ಫ‌ಲಕಾರಿಯಾಗದೆ ಮಂಗಳವಾರ ಸಂಜೆ 6.10ಕ್ಕೆ ಚೆನ್ನೈಯ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕರುಣಾ ಅವರ ಆರೋಗ್ಯ ಸ್ಥಿತಿ ವಿಷಮಗೊಂಡ ಸುದ್ದಿ ತಿಳಿದು ಸೋಮವಾರ ರಾತ್ರಿಯಿಂದಲೇ ಕಲೈನಾರ್‌ ಅವರ ಅಭಿಮಾನಿಗಳ ಸಾಗರವೇ ಆಸ್ಪತ್ರೆಯ ಸುತ್ತ ನೆರೆದಿತ್ತು. ಮಂಗಳವಾರ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆ ಅವರ ನೋವಿನ ಕಟ್ಟೆಯೊಡೆಯಿತು. ಆಕ್ರಂದನ ಮುಗಿಲುಮುಟ್ಟಿತ್ತು. ಶಾಂತಿ ಕಾಪಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್‌ ಮನವಿ ಮಾಡಿದರು. ಪೊಲೀಸರು ತಮಿಳುನಾಡಿನಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಿದರು. 

ಡಿಎಂಕೆ ವರಿಷ್ಠ ನಾಯಕನ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ, ಅಮೆರಿಕ ರಾಯಭಾರಿ ಹಾಗೂ ವಿವಿಧ ಪಕ್ಷಗಳ ನಾಯಕರು ಕಂಬನಿ ಮಿಡಿದಿದ್ದಾರೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಚೆನ್ನೈಗೆ ಆಗಮಿಸಲಿದ್ದು ಅಂತಿಮ ದರ್ಶನ ಪಡೆಯಲಿದ್ದಾರೆ.

ಗಣ್ಯರ ಸಂತಾಪ
ಕರುಣಾನಿಧಿ ನಿಧನಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಚಿತ್ರನಟ ರಜನಿಕಾಂತ್‌  ಮೊದಲಾದವರು ಸಂತಾಪ ಸೂಚಿಸಿದ್ದಾರೆ.

ಬಂದ್‌ ವಾತಾವರಣ
ಚೆನ್ನೈಯಲ್ಲಿ ಅಘೋಷಿತ ಬಂದ್‌ ವಾತಾವರಣ ನೆಲೆಸಿದೆ. ಸ್ವಯಂಪ್ರೇರಿತರಾಗಿ ಜನರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ತಮ್ಮ ಮೆಚ್ಚಿನ ನಾಯಕನಿಗೆ ಗೌರವ ಸಲ್ಲಿಸಿದರು. ಅಂತ್ಯಸಂಸ್ಕಾರವಾಗುವ ತನಕ ತಮಿಳುನಾಡಿನಾದ್ಯಂತ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಈ ಮಧ್ಯೆ ತಮಿಳುನಾಡು ಸರಕಾರ ಬುಧವಾರ ರಜೆ ಹಾಗೂ ಒಂದು ವಾರ ಶೋಕಾಚರಣೆ ಘೋಷಿಸಿದೆ. ಮಂಗಳವಾರ ರಾತ್ರಿಯೇ ಪಾರ್ಥಿವ ಶರೀರವನ್ನು ಗೋಪಾಲಪುರಂಗೆ ತೆಗೆದುಕೊಂಡು ಹೋಗಲಾಗಿದೆ. ಬುಧವಾರ ಬೆಳಗ್ಗೆ ರಾಜಾಜಿಹಾಲ್‌ ನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗುತ್ತದೆ. 

ಅಂತ್ಯ ಸಂಸ್ಕಾರ ಸ್ಥಳ ವಿವಾದ
ಕರುಣಾನಿಧಿ ಅವರ ಅಂತ್ಯಸಂಸ್ಕಾರದ ಸ್ಥಳ ನಿಗದಿಗೊಳಿಸುವ ಸಂಬಂಧ ರಾಜಕೀಯ ಸ್ಫೋಟಗೊಂಡಿದೆ. ಸ್ಟಾಲಿನ್‌ ನೇತೃತ್ವದಲ್ಲಿ ಕರುಣಾ ಕುಟುಂಬ ಸದಸ್ಯರು ಮರೀನಾ ಬೀಚ್‌ ನಲ್ಲಿ ಡಿಎಂಕೆ ಸಂಸ್ಥಾಪಕ ಅಣ್ಣಾದೊರೈ ಸಮಾಧಿಯ ಸನಿಹ ಸ್ಥಳ ನೀಡುವಂತೆ ವಿನಂತಿಸಿದ್ದರು. ಆದರೆ ತಮಿಳುನಾಡು ಸರಕಾರ ಕೋರ್ಟ್‌ ವ್ಯಾಜ್ಯದ ಕಾರಣವೊಡ್ಡಿ ಮರೀನಾ ಬೀಚ್‌ನಲ್ಲಿ ಸ್ಥಳ ನೀಡಲು ಸಾಧ್ಯವಿಲ್ಲ ಎಂದಿದೆ. ಆದರೆ ಇದನ್ನು ವಿರೋಧಿಸಿರುವ ಡಿಎಂಕೆ ನಾಯಕರು ಮಂಗಳವಾರ ರಾತ್ರಿಯೇ ಮದ್ರಾಸ್‌ ಹೈಕೋರ್ಟ್‌ ಕದ ಬಡಿದಿದ್ದಾರೆ. ಬುಧವಾರ ಸಂಜೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಡಿಎಂಕೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.