DMK Questions ; ಜಾತಿ, ಸಮಾನತೆ ಬಗ್ಗೆ ಮೋಹನ್ ಭಾಗವತ್ ನಿಲುವೇನು?
Team Udayavani, Sep 10, 2023, 12:19 AM IST
ಚೆನ್ನೈ/ಶಿಮ್ಲಾ: ದೇಶದಲ್ಲಿ ಇರುವ ಜಾತಿ ಮತ್ತು ಇತರ ವಿಚಾರಗಳ ಬಗ್ಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಬಳಿ ಯಾವ ಸಮರ್ಥನೆಗಳು ಇವೆ ಎಂದು ಡಿಎಂಕೆಯ ಮುಖವಾಣಿ “ಮುರಸೋಳಿ’ಯಲ್ಲಿ ಬರೆಯಲಾಗಿರುವ ಲೇಖನದಲ್ಲಿ ಪ್ರಶ್ನಿಸಲಾಗಿದೆ. ಇದರ ಜತೆಗೆ ಸನಾತನ ಧರ್ಮವನ್ನು ಸಮರ್ಥಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿಯವರು ಕೇಂದ್ರ ಸಚಿವರಿಗೆ ಸೂಚಿಸಿದ್ದಾರೆ. ಅದರ ಬಗ್ಗೆ ಭಾಗವತ್ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸಲಾಗಿದೆ.
ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕರಾದ ಉದಯನಿಧಿ ಸ್ಟಾಲಿನ್, ಎ.ರಾಜಾ ಮಾಡಿರುವ ಟೀಕೆಗಳ ವಿರುದ್ಧ ಆಕ್ರೋಶಗಳು ಮುಂದುವರಿದಿರುವಾಗಲೇ ಆ ಪಕ್ಷದ ಮುಖವಾಣಿಯಲ್ಲಿ ಆರ್ಎಸ್ಎಸ್ ಮುಖ್ಯಸ್ಥರಿಗೆ ನೇರ ಪ್ರಶ್ನೆಗಳನ್ನು ಕೇಳಲಾಗಿದೆ. ಜಗತ್ತಿನ ಯಾವುದೇ ಶಕ್ತಿ ಸನಾತನ ಧರ್ಮವನ್ನು ನಾಶಗೊಳಿಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಶಿಮ್ಲಾದಲ್ಲಿ ಮಾತನಾಡಿದ ಅವರು ವಿಪಕ್ಷಗಳ ಒಕ್ಕೂಟ, ಐ.ಎನ್.ಡಿ.ಐ.ಎ. ಮತ್ತು ಕೆಲವು ಮಂದಿ ಬುದ್ಧಿ ಜೀವಿಗಳು ತಮಿಳುನಾಡು ಸಿಎಂ ಪುತ್ರನ ಹೇಳಿಕೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು