Karnataka Election; ಕ್ಷಮೆ ಕೇಳಲು ಒತ್ತಾಯಿಸಿದ ಡಿಎಂಕೆಗೆ ಅಣ್ಣಾಮಲೈ ತಿರುಗೇಟು
ಶಿವಮೊಗ್ಗದಲ್ಲಿ ತಮಿಳು ನಾಡಗೀತೆ ನಿಲ್ಲಿಸಿದ ವಿಚಾರ...
Team Udayavani, Apr 28, 2023, 7:53 PM IST
ಚೆನ್ನೈ: ತಮಿಳು ನಾಡಗೀತೆ ಥಾಯ್ ವಜ್ತುವಿಗೆ ಅಗೌರವ ತೋರಿದ್ದಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಕ್ಷಮೆ ಯಾಚಿಸಲು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಒತ್ತಾಯಿಸಿದೆ.
ಬಿಜೆಪಿಯ ಕರ್ನಾಟಕ ಚುನಾವಣಾ ಸಹ ಉಸ್ತುವಾರಿಯಾಗಿರುವ ಕೆ ಅಣ್ಣಾಮಲೈ ಗುರುವಾರ ಶಿವಮೊಗ್ಗದಲ್ಲಿ ಚುನಾವಣಾ ರ್ಯಾಲಿಯ ವೇದಿಕೆಯಲ್ಲಿದ್ದಾಗ, ಸಂಘಟಕರು ತಮಿಳುನಾಡು ರಾಜ್ಯ ಗೀತೆಯಾದ ತಮಿಳು ಥಾಯ್ ವಜ್ತುವನ್ನು ನುಡಿಸಿದರು. ಆದರೆ ವೇದಿಕೆಯಲ್ಲಿದ್ದ ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಮಧ್ಯಪ್ರವೇಶಿಸಿ ಅದರ ಬದಲು ಕರ್ನಾಟಕ ರಾಜ್ಯ ಗೀತೆಯನ್ನು ನುಡಿಸುವಂತೆ ಸಂಘಟಕರನ್ನು ಕೋರಿದ್ದರು.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಡಿಎಂಕೆ ನಾಯಕಿ ಕನಿಮೊಳಿ, ‘ತಮಿಳು ಥಾಯ್ ವಜ್ತು’ ಅನ್ನು ಅವಮಾನಿಸುವುದನ್ನು ತಡೆಯಲು ಸಾಧ್ಯವಾಗದ ಯಾರಾದರೂ ತಮಿಳುನಾಡಿನ ಜನರ ಬಗ್ಗೆ ಹೇಗೆ ಕಾಳಜಿ ವಹಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.
ಕನಿಮೊಳಿ ಅವರ ಟೀಕೆಗೆ ತಿರುಗೇಟು ನೀಡಿದ ಅಣ್ಣಾಮಲೈ, ‘ರಾಜ್ಯದ ನಾಡಗೀತೆಯನ್ನು ನುಡಿಸಿದ ನಂತರವೇ ಮತ್ತೊಂದು ನಾಡಗೀತೆಯನ್ನು ನುಡಿಸಬಹುದು’ ಎಂದು ಈಶ್ವರಪ್ಪ ಸೂಚಿಸಿದರು’ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ 2020 ರ ವಿಡಿಯೋ ಪೋಸ್ಟ್ ಮಾಡಿ, ಇವರು ಕೂಡ ರಾಷ್ಟ್ರಗೀತೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.ನಮ್ಮ ರಾಷ್ಟ್ರ ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ ನುಡಿಸಲು ತಿಳಿಯದ ನಾಯಕನಿಗೆ ಇದೆಲ್ಲಾ ಬೇಕಾ? ತಮಿಳು ಥಾಯ್ ರಾಜ್ಯಗೀತೆಯಿಂದ ಕನ್ನಡಮುಂಗ್ ಕಲಿತೆಲುಂಗುಂ ಕವಿನ್ಮಲಯಾಳಮುಂ ತುಳುವುಂ” ಎಂಬ ಸಾಲನ್ನು ತೆಗೆದು ರಾಜ್ಯ ವಿಭಜನೆ ಮಾಡಲು ಬಿತ್ತಿದ ಇತಿಹಾಸ ನಿಮ್ಮದಲ್ಲವೇ? ” ಎಂದು ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?