ಕಾವೇರಿ ಸ್ಪಷ್ಟೀಕರಣ ಅರ್ಜಿ ಹಿಂಪಡೆವಂತೆ ಡಿಎಂಕೆ ಆಗ್ರಹ
Team Udayavani, Apr 18, 2018, 10:25 AM IST
ಚೆನ್ನೈ: ಕಾವೇರಿ ಜಲ ನಿರ್ವಹಣೆ ಮಂಡಳಿ ರಚನೆಗೆ ಸಂಬಂಧಿಸಿ ಸುಪ್ರೀಂಕೋರ್ಟ್ಗೆ ಕೇಂದ್ರ ಸರಕಾರ ಸಲ್ಲಿಸಿರುವ ಸ್ಪಷ್ಟೀಕರಣ ಅರ್ಜಿ ಹಿಂಪಡೆಯುವಂತೆ ತಮಿಳುನಾಡಿನ ಡಿಎಂಕೆ ಆಗ್ರಹಿಸಿದೆ. ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್, ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದಿದ್ದಾರೆ. ಮಾ.29ರಂದು ಸ್ಪಷ್ಟೀಕರಣ ಅರ್ಜಿ ಸಲ್ಲಿಸುವ ವೇಳೆ, ಆದೇಶ ಜಾರಿಗೆ ಇನ್ನೂ 3 ತಿಂಗಳ ಕಾಲಾವಕಾಶ ಕೇಳಿರುವುದು ಸರಿಯಲ್ಲ. ಇದರಿಂದ ಇಡೀ ರಾಜ್ಯ ಸಂಕಷ್ಟಕ್ಕೀಡಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.