ಭಾರತದ ಸಮಗ್ರತೆಗೆ ಸವಾಲು ಹಾಕುವವರನ್ನು ಸಹಿಸಲ್ಲ: ಮೋದಿ
Team Udayavani, Feb 24, 2018, 8:03 AM IST
ಹೊಸದಿಲ್ಲಿ: ಭಾರತದ ಸಮಗ್ರತೆ, ಏಕತೆ ಮತ್ತು ಸಾರ್ವಭೌಮತ್ವಕ್ಕೆ ಸವಾಲು ಹಾಕುವವರನ್ನು ನಾವು ಸಹಿಸುವುದಿಲ್ಲ.’ ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡ್ನೂ ಅವರ ಸಮ್ಮುಖದಲ್ಲೇ ಪ್ರಧಾನಿ ನರೇಂದ್ರ ಮೋದಿ ಆಡಿದ ತೀಕ್ಷ್ಣ ಮಾತುಗಳಿವು.
ಶುಕ್ರವಾರ ಜಸ್ಟಿನ್ ಜತೆಗಿನ ಮಾತುಕತೆ ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನಿ ಮೋದಿ ಖಲಿಸ್ಥಾನ ವಿಚಾರದಲ್ಲಿ ಕೆನಡಾ ಸರ ಕಾರದ ಮೃದು ಧೋರಣೆ ಯನ್ನು ಪರೋಕ್ಷವಾಗಿ ಖಂಡಿಸಿದ್ದು ಕಂಡುಬಂತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ರಾಜಕೀಯ ಉದ್ದೇಶಗಳಿಗಾಗಿ ಧರ್ಮ ವನ್ನು ದುರ್ಬಳಕೆ ಮಾಡಿ ಕೊಳ್ಳುವುದಕ್ಕೆ ಯಾವ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸೂಚ್ಯವಾಗಿ ಜಸ್ಟಿನ್ಗೆ ಸಂದೇಶ ರವಾನಿಸಿದರು.
“ನಾವು ದ್ವಿಪಕ್ಷೀಯ ಸಂಬಂಧ ವೃದ್ಧಿ, ನಮ್ಮ ರಕ್ಷಣಾ ಸಹಕಾರ ಬಲಿಷ್ಠಗೊಳಿಸುವ ಬಗ್ಗೆ ಚರ್ಚಿಸಿದ್ದೇವೆ. ಭಯೋತ್ಪಾದನೆ, ಪ್ರತ್ಯೇಕತಾವಾದ ಭಾರತ, ಕೆನಡಾ ದಂಥ ರಾಷ್ಟ್ರಗಳಿಗೆ ಅಪಾಯಕಾರಿ. 5 ದಿನಗಳ ಹಿಂದೆಯೇ ಭಾರತ ಪ್ರವಾಸ ಆರಂಭಿಸಿರುವ ಕಾರಣ ಜಸ್ಟಿನ್ ನಮ್ಮ ದೇಶದ ವೈವಿಧ್ಯತೆಯನ್ನು ಪ್ರತ್ಯಕ್ಷವಾಗಿ ನೋಡಿರುತ್ತಾರೆ. ಭಾರತದ ಈ ಸಮಗ್ರತೆಗೆ ಧಕ್ಕೆ ತರುವವರನ್ನು ನಾವು ಸಹಿಸಲು ಅಸಾಧ್ಯ’ ಎಂದೂ ಪ್ರಧಾನಿ ಹೇಳಿದರು.
ಆಲಿಂಗನದ ಸ್ವಾಗತ: ಇದಕ್ಕೂ ಮುನ್ನ ದಿಲ್ಲಿಗೆ ಆಗಮಿಸಿದ ಜಸ್ಟಿನ್ ಟ್ರಾಡ್ನೂ ಕುಟುಂಬವನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಷ್ಟ್ರಪತಿ ಭವನದಲ್ಲಿ ಜಸ್ಟಿನ್ರನ್ನು ಆಲಂಗಿಸಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್