ಗುರುವಾಯೂರು “ಕೊಡತಿ ವಿಳಕ್ಕು’ ಕಾರ್ಯಕ್ರಮಕ್ಕೆ ಕೋರ್ಟ್ ತಕರಾರು
Team Udayavani, Nov 3, 2022, 7:20 AM IST
ತಿರುವನಂತಪುರ: ಖ್ಯಾತ ಗುರುವಾಯೂರು ಶ್ರೀಕೃಷ್ಣ ದೇಗುಲದಲ್ಲಿ ವಾರ್ಷಿಕವಾಗಿ ಆಚರಿಸುವ “ಕೊಡತಿ ವಿಳಕ್ಕು'(ನ್ಯಾಯಾಲಯದ ಬೆಳಕು) ಕಾರ್ಯಕ್ರಮದ ಆಯೋಜನೆಯಲ್ಲಿ ಸಕ್ರಿಯವಾಗಿ ತೊಡಗದಂತೆ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್ ಅಧಿಕೃತವಾಗಿ ನೋಟಿಸ್ ನೀಡಿದೆ.
ಚಾವಕ್ಕಾಡ್ ಮುನ್ಸಿಫ್ ಕೋರ್ಟ್ ಬಾರ್ ಅಸೋಸಿಯೇಷನ್ ಸದಸ್ಯರು ಒಳಗೊಂಡ ಸಮಿತಿಯು ವಾರ್ಷಿಕವಾಗಿ ಗುರುವಾಯೂರು ದೇಗುಲದಲ್ಲಿ “ಕೊಡತಿ ವಿಳಕ್ಕು’ ಕಾರ್ಯಕ್ರಮವನ್ನು ಆಯೋಜಿಸುತ್ತಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೈಕೋರ್ಟ್, “ಬಾರ್ ಅಸೋಸಿಯೇಷನ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ನಮಗೆ ಯಾವುದೇ ತಕರಾರಿಲ್ಲ. ಆದರೆ ಕಾರ್ಯಕ್ರಮದ ಹೆಸರು “ಕೊಡತಿ ವಿಳಕ್ಕು’ (ನ್ಯಾಯಾಲಯದ ಬೆಳಕು) ಎಂದು ಇರುವುದು ಸ್ವೀಕಾರಾರ್ಹವಲ್ಲ. ಇದು ರಾಜ್ಯದ ನ್ಯಾಯಾಲಯಗಳು ಕಾರ್ಯಕ್ರಮದ ಸಂಘಟನೆಯೊಂದಿಗೆ ಕೆಲವು ರೀತಿಯಲ್ಲಿ ಸಂಪರ್ಕ ಹೊಂದಿವೆ ಎಂಬ ಅಭಿಪ್ರಾಯ ಬರುವಂತೆ ಮಾಡುತ್ತದೆ,’ ಎಂದು ಹೇಳಿದೆ.
“ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುವ ಜಾತ್ಯಾತೀತ ಪ್ರಜಾಸತ್ತತ್ಮಕ ಸಂಸ್ಥೆಯಾದ ನ್ಯಾಯಾಲಯಗಳು ಯಾವುದೇ ನಿರ್ದಿಷ್ಟ ಧರ್ಮವನ್ನು ಉತ್ತೇಜಿಸುವ ಚಟುವಟಿಕೆಗಳಲ್ಲಿ ತೊಡಗಲು ಆಗುವುದಿಲ್ಲ,’ ಎಂದು ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ