‘ಗೋಂ’ಡಾಗಿರಿಗೆ ಬೆಂಬಲ ಬೇಡ; ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಸೂಚನೆ
Team Udayavani, Jul 22, 2017, 6:55 AM IST
ನವದೆಹಲಿ: ಗೋ ರಕ್ಷಣೆ ಹೆಸರಲ್ಲಿ ನಡೆಯುವ ಹಿಂಸೆಯನ್ನು ಕೇಂದ್ರ ಅಥವಾ ಯಾವುದೇ ರಾಜ್ಯ ಸರ್ಕಾರ ಬೆಂಬಲಿಸಬಾರದು. ಬದಲಿಗೆ, ಗೋ ರಕ್ಷಣೆ ಹೆಸರಲ್ಲಿ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು. ಅವರನ್ನು ಯಾವುದೇ ಕಾರಣಕ್ಕೂ ರಕ್ಷಿಸಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.
ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗೋರಕ್ಷಣೆ ಕುರಿತ “ಹಿಂಸಾತ್ಮಕ’ ವಿಡಿಯೋ, ಭಾವಚಿತ್ರಗಳನ್ನು ಕೂಡಲೇ ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ಆದೇಶಿಸಿದೆ. ಈ ಕುರಿತು ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್, “ಗೋವಿನ ಹೆಸರಿನಲ್ಲಿ ನಡೆಯುವ ಯಾವುದೇ ಹಿಂಸೆಯನ್ನು ಸರ್ಕಾರ ಸಹಿಸುವುದಿಲ್ಲ. ಹಾಗೇ, ಕಾನೂನು, ಸುವ್ಯವಸ್ಥೆ ಕಾಪಾಡಿಕೊಳ್ಳುವುದು ಆಯಾ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದ್ದು, ಇದರಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುವುದಿಲ್ಲ. ದೇಶದ ಎಲ್ಲೇ, ಯಾವುದೇ ವ್ಯಕ್ತಿ ಹಿಂಸೆಯಲ್ಲಿ ತೊಡಗಿದ್ದರೂ ಆತನನ್ನು ಶಿಕ್ಷಿಸಲು ಕೇಂದ್ರ ಸಿದ್ಧವಿದ್ದು, ಇಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ,’ ಎಂದು ಸ್ಪಷ್ಟಪಡಿಸಿದರು.
ಸಾಮಾಜಿಕ ಕಾರ್ಯಕರ್ತ ತೆಹಸೀನ್ ಪೂನಾವಾಲ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಪೀಠ, ಗೋರಕ್ಷಣೆ ಹೆಸರಿನ ಹಿಂಸೆಗಳ ಕುರಿತು ನಾಲ್ಕು ವಾರಗಳ ಒಳಗೆ ವರದಿ ನೀಡುವಂತೆ ಸರ್ಕಾರಗಳಿಗೆ ಆದೇಶಿಸಿ, ಮುಂದಿನ ವಿಚಾರಣೆಯನ್ನು ಸೆ.6ಕ್ಕೆ ಮುಂದೂಡಿತು.
ಕ್ರಮಕ್ಕೆ ಮುಂದು: ಇದೇ ವೇಳೆ ಗೋರಕ್ಷಕರ ಹೆಸರಲ್ಲಿ ಗೋಮಾಂಸ ವ್ಯಾಪಾರಿಗಳೊಂದಿಗೆ ವ್ಯವಹಾರ ಕುದುರಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇತ್ತೀಚೆಗಷ್ಟೇ ಗೋರಕ್ಷಕರೆಂದು ಹೇಳಿಕೊಂಡು ಹಲ್ಲೆ ನಡೆಸುವವರೇ ಸ್ವತಃ ಹಣ ಪಡೆದುಕೊಂಡು ಬೀಫ್ ವ್ಯಾಪಾರಿಗಳೊಂದಿಗೆ ಡೀಲ್ ಮಾಡಿಕೊಳ್ಳುತ್ತಿರುವ ಹಾಗೂ ಅಕ್ರಮ ಗೋಮಾಂಸ ಸಾಗಣೆಗೆ ನೆರವು ನೀಡುತ್ತಿರುವ ಕುಟುಕು ಕಾರ್ಯಾಚರಣೆಯೊಂದು ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಅಂಥವರ ವಿರುದ್ಧ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ.
ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ, ಹತ್ಯೆ, ಗೂಂಡಾಗಿರಿ ಘಟನೆಗಳನ್ನು ಆರ್ಎಸ್ಎಸ್ ಎಂದೂ ಬೆಂಬಲಿಸುವುದಿಲ್ಲ.
– ಮನಮೋಹನ್ ವೈದ್ಯ, ಆರೆಸ್ಸೆಸ್ ಹಿರಿಯ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ