20ರ ವರೆಗೆ ವಿಶ್ವಾಸ ಮತ ಬೇಡ
Team Udayavani, Sep 15, 2017, 6:40 AM IST
ಚೆನ್ನೈ/ನವದೆಹಲಿ: ತಮಿಳುನಾಡು ವಿಧಾನ ಸಭೆಯಲ್ಲಿ ಎಡಪ್ಪಾಡಿ ಕೆ.ಪಳನಿಸ್ವಾಮಿ ನೇತೃತ್ವದ ಸರ್ಕಾರ ಸೆ.20ರ ವರೆಗೆ ಬಹುಮತ ಸಾಬೀತುಪಡಿಸಬೇಕಾದ ಅಗತ್ಯವಿಲ್ಲ ಎಂದಿದೆ ಮದ್ರಾಸ್ ಹೈಕೋರ್ಟ್. ನ್ಯಾ.ಎಂ.ದುರೈ ಸ್ವಾಮಿ ನೇತೃತ್ವದ ನ್ಯಾಯಪೀಠ ಗುರುವಾರ ಮಧ್ಯಂತರ ಆದೇಶ ನೀಡಿದೆ. ಇದರಿಂದಾಗಿ ಸರ್ಕಾರ ಬೀಳಿಸುತ್ತೇವೆ ಎಂದು ಸವಾಲು ಹಾಕಿದ್ದ ಟಿ.ಟಿ.ವಿ.ದಿನಕರನ್ ನೇತೃತ್ವದ ಎಐಎಡಿಎಂಕೆ ಬಣಕ್ಕೆ ಹಿನ್ನಡೆ ಉಂಟಾಗಿದೆ. ಸರ್ಕಾರದ ಅಸ್ತಿತ್ವ ಪ್ರಶ್ನಿಸಿ ಪ್ರತಿಪಕ್ಷ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಕೂಡ ಹೈಕೋರ್ಟಲ್ಲಿ ಮೊಕದ್ದಮೆ ಹೂಡಿದ್ದರು.
ತಮಿಳುನಾಡು ವಿಧಾನಸಭೆಯಲ್ಲಿ 19 ಮಂದಿ ಶಾಸಕರನ್ನು ಅನರ್ಹಗೊಳಿಸುವ ವಿಚಾರ ಇನ್ನೂ ಇತ್ಯರ್ಥವಾಗಿಲ್ಲ. ಹೀಗಾಗಿ ಸೆ.20ರ ವರೆಗೆ ವಿಶ್ವಾಸ ಮತ ಕೋರಬೇಕಾದ ಅಗತ್ಯವಿಲ್ಲವೆಂದಿತು ನ್ಯಾಯಪೀಠ. ಇದಕ್ಕೂ ಮೊದಲು ಅಡ್ವೊಕೇಟ್ ಜನರಲ್ ವಿಜಯ ನಾರಾಯಣನ್ ಸ್ಪೀಕರ್ ಸಾಂವಿಧಾನಿಕವಾ ಗಿಯೇ ಕ್ರಮ ಕೈಗೊಂಡಿದ್ದಾರೆಂದು ಹೇಳಿದ್ದರು. ಶಶಿಕಲಾ ಮತ್ತು ತಮ್ಮನ್ನು ಹೊರಗಿಟ್ಟು ವಿಲೀನ ಘೋಷಣೆ ಮಾಡಿದ ವೇಳೆ ದಿನಕರನ್ ಸರ್ಕಾರ ಪತನಗೊಳಿಸುವ ಎಚ್ಚರಿಸಿದ್ದರು.
ಇದೇ ವೇಳೆ ದಿನಕರನ್ ಬಣದ ನಾಯ ಕರು ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಶಶಿಕಲಾರನ್ನು ಉಚ್ಚಾಟನೆ ಮಾಡಿದ್ದು ತಪ್ಪು. ಸಿಎಂ ಪಳನಿ ಸ್ವಾಮಿ ಮತ್ತು ಡಿಸಿಎಂ ಓ.ಪನ್ನೀರ್ಸೆಲ್ವಂ ಬಣಕ್ಕೆ ಅಧಿಕಾರ ಇಲ್ಲ. ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ