‘ದೇಶದ ಜನರಿಗೆ ಬುದ್ದಿಯಿಲ್ಲ ಎಂದು ತಿಳಿದಿದ್ದೀರಾ..’: ಆದಿಪುರುಷ್ ತಂಡಕ್ಕೆ ಕೋರ್ಟ್ ತರಾಟೆ


Team Udayavani, Jun 27, 2023, 6:03 PM IST

Do You Consider Countrymen Brainless?’ Court Slams Adipurush team

ಲಖನೌ: ಅಲಹಾಬಾದ್ ಹೈಕೋರ್ಟ್ ಇಂದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪ ಹೊತ್ತಿರುವ ‘ಆದಿಪುರುಷ್’ ಚಿತ್ರದ ಡೈಲಾಗ್‌ ಗಳ ಬಗ್ಗೆ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿತು.

ಈ ಪ್ರಕರಣದಲ್ಲಿ ಸಹ ಬರಹಗಾರ ಮನೋಜ್ ಮುಂತಶಿರ್ ಶುಕ್ಲಾ ಅವರನ್ನು ಕಕ್ಷಿದಾರರನ್ನಾಗಿ ಮಾಡುವಂತೆ ನ್ಯಾಯಾಲಯ ಸೂಚಿಸಿದ್ದು, ಒಂದು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಹಿಂದೂ ಮಹಾಕಾವ್ಯ ರಾಮಾಯಣವನ್ನು ಆಧರಿಸಿದ ಪೌರಾಣಿಕ ಸಾಹಸಮಯ ಚಿತ್ರ ಎಂದು ಹೇಳಿಕೊಳ್ಳುವ ‘ಆದಿಪುರುಷ್’ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಚಿತ್ರದಲ್ಲಿ ಸಂಭಾಷಣೆಗಳ ಸ್ವರೂಪ ದೊಡ್ಡ ಸಮಸ್ಯೆಯಾಗಿದೆ. ರಾಮಾಯಣ ನಮಗೆ ಒಂದು ಮಾದರಿ. ಜನರು ಮನೆಯಿಂದ ಹೊರಡುವ ಮೊದಲು ರಾಮಚರಿತಮಾನಸವನ್ನು ಓದುತ್ತಾರೆ. ಸಿನಿಮಾಗಳು ಕೆಲವು ವಿಚಾರಗಳನ್ನು ಮುಟ್ಟಬಾರದು ಎಂದು ಕೋರ್ಟ್ ಹೇಳಿದೆ.

ಚಲನಚಿತ್ರ ಪ್ರಮಾಣೀಕರಣ ಪ್ರಾಧಿಕಾರವು (ಸೆನ್ಸಾರ್ ಮಂಡಳಿ) ತನ್ನ ಜವಾಬ್ದಾರಿಯನ್ನು ಪೂರೈಸಿದೆಯೇ ಎಂದು ಅಲಹಾಬಾದ್ ಹೈಕೋರ್ಟ್ ಪ್ರಶ್ನಿಸಿದೆ.

ಇದನ್ನೂ ಓದಿ:Airport: ಕಸ್ಟಮ್ಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಗೆ ಲಕ್ಷಾಂತರ ರೂ. ಪಂಗನಾಮ !

“ಸಿನಿಮಾ ನೋಡಿದ ಜನರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಿರುವುದು ಒಳ್ಳೆಯದು. ಹನುಮಂತ ಮತ್ತು ಸೀತೆಯನ್ನು ಏನೂ ಇಲ್ಲದಂತೆ ತೋರಿಸಲಾಗಿದೆ. ಈ ವಿಷಯಗಳನ್ನು ಮೊದಲಿನಿಂದಲೂ ತೆಗೆದು ಹಾಕಬೇಕಾಗಿತ್ತು. ಕೆಲವು ದೃಶ್ಯಗಳು “ಎ ವರ್ಗ” (ವಯಸ್ಕ) ಎಂದು ತೋರಿಸಲಾಗಿದೆ. ಅಂತಹ ಚಲನಚಿತ್ರಗಳನ್ನು ವೀಕ್ಷಿಸುವುದು ತುಂಬಾ ಕಷ್ಟ” ಎಂದು ನ್ಯಾಯಾಲಯವು ಗಮನಿಸಿತು.

ಚಿತ್ರದಿಂದ ಆಕ್ಷೇಪಾರ್ಹ ಸಂಭಾಷಣೆಗಳನ್ನು ತೆಗೆದುಹಾಕಲಾಗಿದೆ ಎಂದು ಡೆಪ್ಯುಟಿ ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದು, ಇದಕ್ಕೆ ಸೆನ್ಸಾರ್ ಮಂಡಳಿಯು ಏನು ಮಾಡುತ್ತಿದೆ ಎಂದು ಪೀಠ ಕೇಳಿತು.

“ಅದು ಮಾತ್ರ ಕೆಲಸ ಮಾಡುವುದಿಲ್ಲ, ನೀವು ದೃಶ್ಯಗಳನ್ನು ಏನು ಮಾಡುತ್ತೀರಿ? ನಾವು ಏನು ಮಾಡಬೇಕೆಂದು ಬಯಸುತ್ತೇವೆಯೋ ಅದನ್ನು ನಾವು ಖಂಡಿತವಾಗಿ ಮಾಡುತ್ತೇವೆ. ಒಂದು ವೇಳೆ ಚಿತ್ರದ ಪ್ರದರ್ಶನವನ್ನು ನಿಲ್ಲಿಸಿದರೆ, ಆಗ ಯಾರ ಭಾವನೆಗಳಿಗೆ ನೋವಾಗಿದೆಯೋ ಅವರಿಗೆ ಪರಿಹಾರ ಸಿಗುತ್ತದೆ’’ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದಲ್ಲಿ ಸೂಚನೆ (disclaimer) ಸೇರಿಸಲಾಗಿದೆ ಎಂಬ ಪ್ರತಿವಾದಿಗಳ ವಾದಕ್ಕೆ ಸಂಬಂಧಿಸಿದಂತೆ ಪೀಠವು, “ನೀವು ಚಿತ್ರದಲ್ಲಿ ಭಗವಾನ್ ರಾಮ, ಲಕ್ಷ್ಮಣ, ರಾವಣ, ಲಂಕಾ ಮತ್ತು ಹನುಮಂತ ದೇವರನ್ನು ತೋರಿಸುತ್ತೀರಿ. ನಂತರ ಅದು ರಾಮಾಯಣವಲ್ಲ ಎಂದು ಹೇಳುತ್ತಿದ್ದೀರಿ? ಸೂಚನೆ ಹಾಕುವ ಮೂಲಕ ಜನರು, ದೇಶವಾಸಿಗಳು ಮತ್ತು ಯುವಕರನ್ನು ಬುದ್ಧಿಹೀನರು ಎಂದು ಪರಿಗಣಿಸುತ್ತಿದ್ದೀರಾ?” ಎಂದು ಕೋರ್ಟ್ ಖಾರವಾಗಿ ಪ್ರಶ್ನಿಸಿದರು.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.