ಗೋರಖ್ ಪುರ್ ದುರಂತ; 2 ವರ್ಷದ ಬಳಿಕ ಡಾ.ಕಫೀಲ್ ಖಾನ್ ಗೆ ಕ್ಲೀನ್ ಚಿಟ್


Team Udayavani, Sep 27, 2019, 2:50 PM IST

Kapil-Khan

ಲಕ್ನೋ:ಉತ್ತರಪ್ರದೇಶದ ಗೋರಖ್ ಪುರದ ಸರಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸುಮಾರು 60 ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷದ ಹಿಂದೆ ಸೇವೆಯಿಂದ ಅಮಾನತುಗೊಂಡು, ಬಂಧಿಸಿಲ್ಪಟ್ಟಿದ್ದ ವೈದ್ಯ ಡಾ.ಕಫೀಲ್ ಖಾನ್ ಅವರ ಮೇಲಿನ ಎಲ್ಲಾ ಆರೋಪದಿಂದ ಮುಕ್ತಗೊಳಿಸಿ ಸರಕಾರ ವರದಿ ಸಲ್ಲಿಸಿದೆ.

ಮಕ್ಕಳ ತಜ್ಞ ಡಾ.ಕಫೀಲ್ ಖಾನ್ ಗೋರಖ್ ಪುರದ ಬಿಆರ್ ಡಿ ಮೆಡಿಕಲ್ ಕಾಲೇಜಿನಲ್ಲಿ 2017ರ ಆಗಸ್ಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಕೇವಲ ಎರಡೇ ದಿನದಲ್ಲಿ 63 ಮಕ್ಕಳು ಸಾವನ್ನಪ್ಪಿದ್ದರು. ಆಮ್ಲಜನಕದ ಕೊರತೆಯಿಂದ ಮಕ್ಕಳು ಸಾವನ್ನಪ್ಪಿದ್ದು, ಇದು ಕಫೀಲ್ ಖಾನ್ ನಿರ್ಲಕ್ಷ್ಯ ಎಂದು ಆರೋಪಿಸಲಾಗಿತ್ತು.

ಘಟನೆ ನಂತರ ಆಸ್ಪತ್ರೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ, ಡಾ.ಕಫೀಲ್ ಖಾನ್ ಅವರನ್ನು ಅಮಾನತುಗೊಳಿಸಿದ್ದರು. ಸೂಕ್ತ ವ್ಯವಸ್ಥೆ ಕೈಗೊಳ್ಳಲು ಖಾನ್ ವಿಫಲರಾಗಿರುವುದಾಗಿ ಯೋಗಿ ಸರಕಾರ ದೂರಿತ್ತು. ಈ ಪ್ರಕರಣದಲ್ಲಿ ಡಾ.ಖಾನ್, ಮೆಡಿಕಲ್ ಕಾಲೇಜಿನ ಮಾಜಿ ಪ್ರಿನ್ಸಿಪಾಲ್ ಸೇರಿದಂತೆ ಒಂಬತ್ತು ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ 2017ರ ಸೆಪ್ಟಂಬರ್ 2ರಂದು ಡಾ.ಕಫೀಲ್ ಖಾನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಸುಮಾರು 8 ತಿಂಗಳ ಬಳಿಕ(2018ರ ಏಪ್ರಿಲ್) ಡಾ.ಕಫೀಲ್ ಖಾನ್ ಗೆ ಅಲಹಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ ಯುಪಿ ಸರಕಾರ 15 ಪುಟಗಳ ತನಿಖಾ ವರದಿಯನ್ನು ಡಾ.ಕಫೀಲ್ ಖಾನ್ ಅವರಿಗೆ ಹಸ್ತಾಂತರಿಸಿದೆ. ಅಷ್ಟೇ ಅಲ್ಲ ಡಾ.ಖಾನ್ ಆರೋಪದ ವಿರುದ್ಧ ತನಿಖೆ ನಡೆಸಿದ್ದ ಐಎಎಸ್ ಅಧಿಕಾರಿ ಹಿಮಾಂಶು ಕುಮಾರ್ ಅವರಿಗೆ 2019ರ ಏಪ್ರಿಲ್ ನಲ್ಲಿಯೇ ಉತ್ತರ ಪ್ರದೇಶ ಸರಕಾರ ಹಸ್ತಾಂತರಿಸಿತ್ತು.

ಎರಡು ವರ್ಷಗಳ ಬಳಿಕ ನನಗೆ ಈ ವರದಿ, ಸುದ್ದಿ ಕೇಳಿ ತುಂಬಾ ಖುಷಿಯಾಯ್ತು. ಇಡೀ ಕುಟುಂಬವೇ ಸಂತಸ ವ್ಯಕ್ತಪಡಿಸಿದೆ ಎಂದು ಡಾ.ಕಫೀಲ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕ ಸಿಲಿಂಡರ್ ಕೊರತೆಯಾಗಿದ್ದರು, ನನ್ನ ತಂಡ 54 ಗಂಟೆಗಳಲ್ಲಿ 500 ಸಿಲಿಂಡರ್ ಗಳನ್ನು ಪೂರೈಕೆ ಮಾಡಿತ್ತು. ಹೌದು ಆದರೆ ಸಿಲಿಂಡರ್ ಕೊರತೆ ಇದ್ದಿತ್ತು, ಅದಕ್ಕೆ ಕಾರಣ ಯೋಗಿ ನೇತೃತ್ವದ ಸರಕಾರ ಸಿಲಿಂಡರ್ ಪೂರೈಕೆ ಮಾಡುತ್ತಿದ್ದ ವೆಂಡರ್ ಗೆ ಹಣ ಪಾವತಿ ಮಾಡಿರಲಿಲ್ಲ. ನನ್ನ ಎರಡು ವರ್ಷಗಳ ಬಳಿಕ ನಿರ್ದೊಷಿ ಎಂದು ಸರಕಾರ ಹೇಳಿದೆ, ಹಾಗಾದರೆ ನಿಜವಾದ ಆರೋಪಿಗಳನ್ನು ಈವರೆಗೂ ಯಾಕೆ ಬಂಧಿಸಿಲ್ಲ ಎಂದು ಖಾನ್ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.