ಕ್ಲಿನಿಕ್ ಬಾಗಿಲು ತಡವಾಗಿ ತೆರೆದರೆಂದು ವೈದ್ಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು
Team Udayavani, Sep 11, 2022, 12:24 PM IST
ಮಹಾರಾಷ್ಟ್ರ : ಕ್ಲಿನಿಕ್ ಬಾಗಿಲು ತಡವಾಗಿ ತೆರೆದರೆಂದು ಹೊರಗಡೆ ವೈದ್ಯರಿಗಾಗಿ ಕಾದು ಕುಳಿತ ತಂಡವೊಂದು ಸಿಟ್ಟಿಗೆದ್ದು ವೈದ್ಯ ಮತ್ತು ಅವರ ಮಗನ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಸೆಪ್ಟೆಂಬರ್ 6 ರಂದು ಮಹಾರಾಷ್ಟ್ರದ ಬಾರಾಮತಿಯಲ್ಲಿ ಈ ಘಟನೆ ನಡೆದಿದ್ದು ಬಾರಾಮತಿಯಲ್ಲಿರುವ ಆಯುರ್ವೇದ ವೈದ್ಯರೊಬ್ಬರು ತನ್ನ ಮನೆಯಲ್ಲೇ ಕ್ಲಿನಿಕ್ ನಡೆಸುತ್ತಿದ್ದು ಸೆಪ್ಟೆಂಬರ್ 6 ರಂದು ರಾತ್ರಿ ಕ್ಲಿನಿಕ್ ಬಂದ್ ಮಾಡಿ ಕುಟುಂಬದವರೊಂದಿಗೆ ಊಟ ಮಾಡುತ್ತಿರುವ ವೇಳೆ ಬಾಗಿಲು ಬಡಿದಿದ್ದಾರೆ ಈ ವೇಳೆ ಮನೆ ಮಂದಿ ಊಟ ಮಾಡುತ್ತಿದ್ದ ಕಾರಣ ಬಾಗಿಲು ತೆರೆಯಲು ತಡವಾಗಿದೆ ಇದರಿಂದ ಕೋಪಗೊಂಡ ಗುಂಪೊಂದು ಮನೆಯ ಕಿಟಕಿಯ ಗಾಜುಗಳನ್ನು ಪುಡಿಗೈದಿದ್ದಾರೆ ಈ ವೇಳೆ ಎದ್ದು ಬಂದ ವೈದ್ಯರು ಬಾಗಿಲು ತೆರೆದಾಗ ಮೂರು ನಾಲ್ಕು ಮಂದಿ ಒಳ ಪ್ರವೇಶಿಸಿ ವೈದ್ಯರು ಮತ್ತು ಅವರ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.
ಡಾ. ಗುರುರಾಜ್ ಗಾಯಕ್ವಾಡ್ ಅವರ ಕ್ಲಿನಿಕ್ ನಲ್ಲಿ ನಡೆದ ಘಟನೆ ಅವರ ಕ್ಲಿನಿಕ್ ಒಳಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಗೆ ಸಂಬಂಧಿಸಿ ಮಾಲೆಗಾಂವ್ ಪೊಲೀಸರು ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಲಕ್ನೋ ಹೋಟೆಲ್ ನಲ್ಲಿ ಅಗ್ನಿ ಅವಘಡ ಪ್ರಕರಣ : 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ
कैसे- कैसे लोग…!?
बारामती के सांगवी में एक आयुर्वेदिक #Doctor ने देर से दरवाजा खोला तो मरीज के साथ आए लोगों ने डॉक्टर और उनके बेटे की जमकर पिटाई कर दी!
मालेगांव पुलिस #FIR दर्ज कर जांच कर रही है। @ndtvvideos@ndtvindia pic.twitter.com/9deiLBsopZ— sunilkumar singh (@sunilcredible) September 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ