ಒಂದೆಡೆ ಬೆಂಕಿ ವ್ಯಾಪಿಸುತ್ತಿದ್ದರೆ ಇನ್ನೊಂದೆಡೆ ವೈದ್ಯರು ಹೆರಿಗೆ ಮಾಡಿಸುತ್ತಿದ್ದರು!

ದೆಹಲಿಯ ಏಮ್ಸ್ ವೈದ್ಯರ ಧೈರ್ಯ ಕಾರ್ಯಕ್ಕೆ ಪ್ರಶಂಸೆಯ ಮಾಹಾಪೂರ

Team Udayavani, Aug 18, 2019, 6:52 PM IST

AIIMS-Fire-726

ನವದೆಹಲಿ: ದೇಶದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾಗಿರುವ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಶನಿವಾರ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಏಮ್ಸ್ ಕಟ್ಟಡದ ಒಂದು ಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳದವರು ಕಾರ್ಯಪ್ರವೃತ್ತರಾಗಿದ್ದ ಸಮಯದಲ್ಲೇ ಇತ್ತ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯೊಂದರಲ್ಲಿ ತಜ್ಞ ವೈದ್ಯರ ತಂಡವೊಂದು ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸುವುದರಲ್ಲಿ ನಿರತವಾಗಿತ್ತು. ಈ ಘಟನೆ ನಡೆದಿರುವ ಕುತೂಹಲಕರ ವಿಚಾರ ಆದಿತ್ಯವಾರದಂದು ಬೆಳಕಿಗೆ ಬಂದಿದೆ.

ಶನಿವಾರ ಬೆಳಿಗ್ಗೆ ಗರ್ಭಿಣಿಯೊಬ್ಬರು ಏಮ್ಸ್ ಆಸ್ಪತ್ರೆಯ ಗೈನಕಾಲಜಿ ವಾರ್ಡ್ ನಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು. ಬಳಿಕ ಸಾಯಂಕಾಲದ ಹೊತ್ತಿಗೆ ಆಸ್ಪತ್ರೆಯ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣದಿಂದ ಆಸ್ಪತ್ರೆಯ ಸಿಬ್ಬಂದಿಗಳು ತುರ್ತುಚಿಕಿತ್ಸಾ ಕೊಠಡಿಯಲ್ಲಿದ್ದ ರೋಗಿಗಳನ್ನು ತರಾತುರಿಯಲ್ಲಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲೇ ಈ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ.

ತಕ್ಷಣವೇ ಮಹಿಳೆಯನ್ನು ಡಾ. ರಾಜೆಂದ್ರ ಪ್ರಸಾದ್ ನೇತ್ರಶಾಸ್ತ್ರ ವಿಜ್ಞಾನ ವಿಭಾಗದಲ್ಲಿರುವ ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದೊಯ್ಯಲಾಗುತ್ತದೆ. ಇಷ್ಟೊತ್ತಿಗೆ ಸಮಯ ರಾತ್ರಿ 9.30 ಗಂಟೆಗಳಾಗಿತ್ತು ಮತ್ತು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ಭರದಿಂದ ಸಾಗುತ್ತಿತ್ತು. ಇದೇ ಸಂದರ್ಭದಲ್ಲಿ ವೈದ್ಯರ ಸಕಾಲಿಕ ಸ್ಪಂದನೆಯಿಂದಾಗಿ 30 ವರ್ಷ ಪ್ರಾಯದ ಈ ಮಹಿಳೆ ಆರೋಗ್ಯವಂತ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು.

ಗರ್ಭಿಣಿ ಮತ್ತು ಮಗುವಿನ ಪ್ರಾಣ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯ ವೈದ್ಯರೊಬ್ಬರು ಈ ಘಟನೆಯ ಕುರಿತಾಗಿ ಹೇಳಿದ್ದು ಹೀಗೆ, ‘ರೋಗಿಗಳಿಗೆ ಸಕಾಲಿಕ ವೈದ್ಯಕೀಯ ನೆರವನ್ನು ಒದಗಿಸುವುದು ನಮ್ಮ ಕರ್ತವ್ಯ ಮತ್ತು ನಾವಿದನ್ನು ಯಾವುದೇ ಸನ್ನಿವೇಶದಲ್ಲೂ ನಿರ್ಲಕ್ಷಿಸಲಾಗದು. ಈ ಘಟನೆಯಲ್ಲಿ ತಾಯಿ ಮತ್ತು ಮಗುವಿನ ಪ್ರಾಣ ನಮಗೆ ಅತೀ ಮುಖ್ಯವಾಗಿತ್ತು. ಹಾಗಾಗಿ ನಾವು ಆಕೆಯನ್ನು ತಕ್ಷಣವೇ ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದೊಯ್ದು ಹೆರಿಗೆ ಮಾಡಿಸಿದೆವು.’

ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ವಿಚಲಿತರಾಗದೇ ಗರ್ಭಿಣಿಯೊಬ್ಬರಿಗೆ ಸಕಾಲಿಕ ವೈದ್ಯಕೀಯ ನೆರವನ್ನು ಒದಗಿಸಿದ ಏಮ್ಸ್ ಆಸ್ಪತ್ರೆಯ ವೈದ್ಯರ ತಂಡದ ಈ ಕಾರ್ಯಕ್ಕೆ ಇದೀಗ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.