ವೈದ್ಯರ ರಾಷ್ಟ್ರವ್ಯಾಪಿ ಮುಷ್ಕರ ಯಶಸ್ವಿ

ಒಪಿಡಿ ಇಲ್ಲದೇ ಸಾರ್ವಜನಿಕರ ಪರದಾಟ

Team Udayavani, Jun 18, 2019, 6:00 AM IST

t-41

ನವದೆಹಲಿ/ಬೆಂಗಳೂರು/ಬಾಗಲಕೋಟೆ: ಸಹೋದ್ಯೋಗಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮುಷ್ಕರ ನಡೆಸುತ್ತಿದ್ದ ವೈದ್ಯರಿಗೆ, ಸೋಮವಾರ ದೇಶಾದ್ಯಂತ ವೈದ್ಯ ಸಮೂಹವೇ ಸಾಥ್‌ ನೀಡಿತು. ಈ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ಕರೆ ಕೊಟ್ಟಿದ್ದ ರಾಷ್ಟ್ರವ್ಯಾಪಿ ವೈದ್ಯ ಮುಷ್ಕರ ಕರ್ನಾಟಕವೂ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಯಶಸ್ವಿಯಾಯಿತು.

ಆದರೆ, ವೈದ್ಯರ ಮುಷ್ಕರದಿಂದಾಗಿ ಆರೋಗ್ಯ ಸೇವೆಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿ, ರೋಗಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಯಿತು. ಪಶ್ಚಿಮ ಬಂಗಾಳದಲ್ಲಂತೂ, ಕಳೆದೊಂದು ವಾರದಿಂದ ಮುಷ್ಕರ ನಡೆಯುತ್ತಿದ್ದ ಕಾರಣ, ರೋಗಿಗಳ ಸ್ಥಿತಿ ಹೇಳತೀರದಂತಾಗಿತ್ತು.

ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ: ಐಎಂಎ ಕರೆ ಕೊಟ್ಟಿದ್ದ ಮುಷ್ಕರಕ್ಕೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿವಿಧೆಡೆ ಸರ್ಕಾರಿ ಆಸ್ಪತ್ರೆಗಳನ್ನು ಸೇರಿದಂತೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಘಟಕದ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿತು.

ಮುಷ್ಕರದ ಹಿನ್ನೆಲೆ ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ರಜೆ ನೀಡದೇ ಸಾಂಕೇತಿಕವಾಗಿ ಪ್ರತಿಭಟಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಆದರೂ, ರಾಜ್ಯದ ಕೆಲವೆಡೆ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಘಟಕವನ್ನು ಬಂದ್‌ ಮಾಡಿ ವೈದ್ಯರು ಮುಷ್ಕರದಲ್ಲಿ ಭಾಗವಹಿಸಿದ್ದರು.

ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತವಾಗಿತ್ತು. ಇದರಿಂದ ರೋಗಿಗಳು ಚಿಕಿತ್ಸೆಗೆ ಪರದಾಡಿದರು. ಕೆಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೇ ಹಾಗೂ ತುರ್ತು ಸೇವಾ ಘಟಕಗಳಲ್ಲಿ ದಟ್ಟಣೆ ಹೆಚ್ಚು ಕಂಡು ಬಂದಿದ್ದು, ಸಕಾಲಕ್ಕೆ ಚಿಕಿತ್ಸೆ ಸಿಗದೇ ರೋಗಿಗಳು ಅವರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ನಿಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ದಟ್ಟಣೆ ಹೆಚ್ಚಿತ್ತು. ವೈದ್ಯರು ಎಂದಿನಂತೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿ ಮಧ್ಯಾಹ್ನ ಊಟದ ವೇಳೆಯಲ್ಲಿ ಪ್ರತಿಭಟನೆ ನಡೆಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

ವ್ಯಕ್ತಿಯೊಬ್ಬ ಬಲಿ

ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಜೆಡಿಎಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಬಾಗಲಕೋಟೆಯ ಬಾದಾಮಿ ತಾಲೂಕು ಕೆರೂರ ಪಟ್ಟಣದ ದಾವಲಸಾಬ ಕೊಣ್ಣೂರ (55) ಮೃತಪಟ್ಟ ವ್ಯಕ್ತಿ. ಅಸ್ತಮಾ, ಜ್ವರದಿಂದ ಬಳಲುತ್ತಿದ್ದ ಇವರನ್ನು ಸೋಮವಾರ ಮಧ್ಯಾಹ್ನ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಎಂದು ಸಿಬ್ಬಂದಿ ಹೇಳಿದ ಬಳಿಕ ಮತ್ತೂಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದ್ದರು. ಅಲ್ಲೂ ವೈದ್ಯರು ಇರಲಿಲ್ಲ. ನವನಗರದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟಿದ್ದಾರೆ.

ದೀದಿ-ವೈದ್ಯರ ಸಂಧಾನ ಯಶಸ್ವಿ

ವಾರದಿಂದ ನಡೆದ ವೈದ್ಯರ ಮುಷ್ಕರ ಅಂತ್ಯಗೊಂಡಿದೆ. ಸೋಮವಾರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ವೈದ್ಯರ ನಡುವೆ ನಡೆದ ಮಾತುಕತೆ ಯಶಸ್ವಿಯಾ ಯಿತು. 31 ವೈದ್ಯರ ನಿಯೋಗದೊಂದಿಗೆ ದೀದಿ ಸಭೆ ನಡೆಸಿದ್ದು, ವೈದ್ಯರ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ವೈದ್ಯರಿಗೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಜಾರಿ ಮಾಡುವ ಕುರಿತೂ ಭರವಸೆ ನೀಡಿ ದ್ದಾರೆ. ಮಾತುಕತೆ ಫ‌ಲಪ್ರದವಾದ ಕಾರಣ, ಮುಷ್ಕರ ವಾಪಸ್‌ ಪಡೆಯುತ್ತಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.