ವೈದ್ಯರ ಮುಷ್ಕರ: ಕಲ್ಕತ್ತ ಹೈಕೋರ್ಟಿಗೆ ಪಿಐಎಲ್; ಮಮತಾ ಸರಕಾರಕ್ಕೆ 7 ದಿನ ಟೈಮ್
Team Udayavani, Jun 14, 2019, 4:23 PM IST
ಕೋಲ್ಕತ : ದೇಶಾದ್ಯಂತ ಸಹಸ್ರಾರು ವೈದ್ಯರು ದಿನಪೂರ್ತಿ ಮುಷ್ಕರ ನಿರತರಾಗಿರುವಂತೆಯೇ ಈ ಮುಷ್ಕರವನ್ನು ಕಾನೂನು ಬಾಹಿರವೆಂದು ಘೋಷಿಸಬೇಕೆಂದು ಕೋರಿ ಕಲ್ಕತ್ತ ಹೈಕೋರ್ಟಿಗೆ ಇಂದು ಶುಕ್ರವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ
ಪೀಪಲ್ ಫಾರ್ ಬೆಟರ್ ಟ್ರೀಟ್ ಮೆಂಟ್ ಎಂಬ ಸೇವಾ ಸಂಘಟನೆಯ ಕುಣಾಲ್ ಸಹಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ವೈದ್ಯರ ಮುಷ್ಕರವನ್ನು ಕಾನೂನು ಬಾಹಿರವೆಂದು ಘೋಷಿಸಬೇಕಲ್ಲದೆ ಈ ಮುಷ್ಕರವನ್ನು ಕೊನೆಗೊಳಿಸುವಂತೆ ಮಾಡಬೇಕು ಹಾಗೂ ಪಶ್ಚಿಮ ಬಂಗಾಲ ಸರಕಾರ ವೈದ್ಯರ ಸುರಕ್ಷೆಗೆ ತೆಗೆದುಕೊಂಡಿರುವ ಕ್ರಮಗಳನ್ನು ತಿಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಈ ಪಿಐಎಲ್ಗೆ ಉತ್ತರಿಸುವುದಕ್ಕೆ ಹೈಕೋರ್ಟ್ ಮಮತಾ ಬ್ಯಾನರ್ಜಿ ಸರಕಾರಕ್ಕೆ ಏಳು ದಿನಗಳ ಕಾಲಾವಕಾಶ ನೀಡಿದೆ. ಚೀಫ್ ಜಸ್ಟಿಸ್ ಟಿವಿ ಸುಬ್ರಮಣಿಯಮ್ ನೇತೃತ್ವದ ಕಲ್ಕತ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ