
ಬೀದಿ ನಾಯಿಯನ್ನು ಕಾರಿಗೆ ಕಟ್ಟಿ ವಿಕೃತಿ : ಜೀವ ಉಳಿಸಬೇಕಾದ ವೈದ್ಯನಿಂದಲೇ ಹೇಯ ಕೃತ್ಯ
Team Udayavani, Sep 19, 2022, 9:24 AM IST

ರಾಜಸ್ಥಾನ : ನಾಯಿಯ ಬಾಯಿಗೆ ಬಟ್ಟೆ ಕಟ್ಟಿ ಅದನ್ನು ಕಾರಿಗೆ ಕಟ್ಟಿದ ಚಾಲಕ ನಗರ ತುಂಬೆಲ್ಲಾ ಎಳೆದೊಯ್ದು ವಿಕೃತಿ ಮೆರೆದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದ ಹಾಗೆ ಈ ಘಟನೆ ನಡೆದಿದ್ದು ರಾಜಸ್ಥಾನದ ಜೋಧ್ ಪುರದಲ್ಲಿ.
ಈ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ನಾಯಿಯನ್ನು ಕಾರಿಗೆ ಕಟ್ಟಿ ಹಿಂಸೆ ನೀಡಿದ ಘಟನೆ ಸಾಕಷ್ಟು ನೋಡಿದ್ದೇವೆ ಆದರೆ ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಜೀವ ಕಾಪಾಡಬೇಕಾದ ವೈದ್ಯ ನಾಯಿಯನ್ನು ಈ ರೀತಿಯಾಗಿ ಕಾರಿಗೆ ಕಟ್ಟಿ ಹಿಂಸೆ ನೀಡಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಅಂದ ಹಾಗೆ ವಿಕೃತಿ ಮೆರೆದ ವೈದ್ಯನ ಹೆಸರು ಡಾ.ರಜನೀಶ್ ಗಾಲ್ವಾ ಎನ್ನಲಾಗಿದೆ.
ವಿಡಿಯೋದಲ್ಲಿ ಕಾಣುವಂತೆ, ನಾಯಿ ಬೊಬ್ಬೆ ಹೊಡೆಯದಂತೆ ಬಾಯಿಗೆ ಬಟ್ಟೆಯಿಂದ ಕಟ್ಟಿ ಕುತ್ತಿಗೆಗೆ ಹಗ್ಗ ಬಿಗಿದು ಅದನ್ನು ತನ್ನ ಕಾರಿಗೆ ಕಟ್ಟಿ ಎಳೆದೊಯ್ಯುವ ವಿಡಿಯೋ ಕಾಣಬಹುದು. ಈ ವಿಡಿಯೋವನ್ನು ಅಲ್ಲಿದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದು ಅಲ್ಲದೆ ಅದನ್ನು ಕಂಡ ಕೆಲವರು ಶ್ವಾನದ ರಕ್ಷಣೆಗೆ ಮುಂದಾಗಿದ್ದಾರೆ ಆದರೆ ವೈದ್ಯ ಮಾತ್ರ ಕಾರು ನಿಲ್ಲಿಸದೆ ಮುಂದೆ ಚಲಿಸಿದ್ದಾನೆ ಆದರೆ ಸಾರ್ವಜನಿಕರು ಮತ್ತೆ ಕಾರನ್ನು ಅಡ್ಡಕಟ್ಟಿ ಶ್ವಾನದ ರಕ್ಷಣೆ ಮಾಡಿದ್ದಾರೆ.
ಈ ವಿಡಿಯೋ ಅನ್ನು ಸ್ಥಳೀಯರು ಎನ್ಜಿಓಗೆ ಕಳಿಸಿದ್ದಾರೆ. ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದ ನಾಯಿಯ ವಿಡಿಯೋ ನೋಡಿದ ಎನ್ಜಿಓ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆ ಶ್ವಾನವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಡಾಗ್ ಹೋಮ್ ಫೌಂಡೇಶನ್ ನಾಯಿಯನ್ನು ಎಳೆದೊಯ್ದ ವ್ಯಕ್ತಿಯ ಮಾಹಿತಿ ಕಲೆಹಾಕಿದ್ದು ಆತನನ್ನು ಡಾ. ರಜನೀಶ್ ಗಾಲ್ವಾ ಎಂದು ಹೇಳಿಕೊಂಡಿದ್ದಾರೆ ಅಲ್ಲದೆ ವೈದ್ಯನ ಹೇಳಿಕೆಯಂತೆ ತನ್ನ ಮನೆಯ ಪಕ್ಕದಲ್ಲೇ ಬೀದಿ ನಾಯಿ ಅಡ್ಡಾಡುತ್ತಿದ್ದು ಇದರಿಂದ ಕಿರಿಕಿರಿಯಾಗುತ್ತಿತ್ತು ಅದಕ್ಕಾಗಿ ಅದನ್ನು ಬೇರೆಡೆಯೆ ಬಿಟ್ಟು ಬರಲು ಈ ರೀತಿಯಾಗಿ ಕರೆದೊಯ್ಯುತ್ತಿದ್ದೆ ಎಂದು ಹೇಳಿದ್ದಾರೆ.
ಆದರೆ ರಜನೀಶ್ ಗಾಲ್ವಾ ಮಾಡಿದ ಕೆಲಸದಿಂದ ನಾಯಿಯ ಎರಡೂ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
असली कुत्ता तो कार के अंदर है। pic.twitter.com/yNr8KFBEpe
— Rajesh Sahu (@askrajeshsahu) September 18, 2022
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
