ಆಧಾರ್ ಇಲ್ಲದವರಿಗೂ ಸಾಮಾಜಿಕ ಭದ್ರತೆಯ ಲಾಭ ಕೊಡಿ: ಸುಪ್ರೀಂ
Team Udayavani, Feb 8, 2018, 7:20 PM IST
ಹೊಸದಿಲ್ಲಿ : ಆಧಾರ್ ಕಾರ್ಡ್ ಹೊಂದಿಲ್ಲದಿರುವ ಕಾರಣಕ್ಕೆ ಯಾರಿಗೂ ಸಾಮಾಜಿಕ ಭದ್ರತೆಯ ಲಾಭಗಳನ್ನು ನಿರಾಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಹೇಳಿದೆ.
ಆಧಾರ್ ಕಾರ್ಡ್ ಇಲ್ಲದವರಿಗೆ ಅವರ ಇತರ ಅಧಿಕೃತ ಗುರುತು ಪತ್ರಗಳ ಆಧಾರದ ಮೇಲೆ ಸಾಮಾಜಿಕ ಭದ್ರತೆಯ ಲಾಭಗಳನ್ನು ಸರಕಾರ ನೀಡಬೇಕು ಎಂದು ಕೋರ್ಟ್ ಹೇಳಿತು.
ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ, ಎ ಎಂ ಕಾನ್ವಿಲ್ಕರ್, ಡಿ ವೈ ಚಂದ್ರಚೂಡ್ ಮತ್ತು ಅಶೋಕ್ ಭೂಷಣ್ ಅವರನ್ನು ಒಳಗೊಂಡ ಐವರು ಸದಸ್ಯರ ಸಾಂವಿಧಾನಿಕ ನ್ಯಾಯ ಪೀಠ ತನ್ನ ಈ ಸೂಚನೆಯನ್ನು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರಿಗೆ ಬಾಯ್ದೆರೆಯಾಗಿ ನೀಡಿತು.
ಇದಕ್ಕೆ ಮುನ್ನ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ತಮ್ಮ ವಾದ ಮಂಡಿಸುತ್ತಾ “ಇಂದಿಗೂ ಆಧಾರ್ ಕಾರ್ಡ್ ಇಲ್ಲದವರಿಗೆ ಸರಕಾರದ ಸಾಮಾಜಿಕ ಭದ್ರತೆಯ ಲಾಭಗಳನ್ನು ನಿರಾಕರಿಸಲಾಗುತ್ತಿದೆ’ ಎಂದು ಕೋರ್ಟಿಗೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ