ತಾಜ್‌ ಕೋಣೆಗಳಲ್ಲಿ ಹಿಂದೂ ವಿಗ್ರಹಗಳಿಲ್ಲ! ಭಾರತೀಯ ಪ್ರಾಚ್ಯವಸ್ತು ಇಲಾಖೆ ಸ್ಪಷ್ಟನೆ


Team Udayavani, May 14, 2022, 7:05 AM IST

ತಾಜ್‌ ಕೋಣೆಗಳಲ್ಲಿ ಹಿಂದೂ ವಿಗ್ರಹಗಳಿಲ್ಲ! ಭಾರತೀಯ ಪ್ರಾಚ್ಯವಸ್ತು ಇಲಾಖೆ ಸ್ಪಷ್ಟನೆ

ಆಗ್ರಾ: ವಿಶ್ವವಿಖ್ಯಾತ ತಾಜ್‌ ಮಹಲ್‌ ಮೂಲತಃ ಶಿವನ ದೇವಸ್ಥಾನ, ಅದರ ಹೆಸರು ತೇಜೋ ಮಹಾಲಯ ಎಂಬ ವಾದವೊಂದು ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಹಾಕಿದ್ದ ಅರ್ಜಿಯೊಂದನ್ನು ಅಲಹಾಬಾದ್‌ ಉಚ್ಚ ನ್ಯಾಯಾಲಯ ಇತ್ತೀಚೆಗಷ್ಟೇ ತಿರಸ್ಕರಿಸಿದೆ.

ಇದರ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ (ಎಎಸ್‌ಐ) ಅಧಿಕಾರಿಯೊಬ್ಬರು ಪ್ರತಿ ಕ್ರಿಯಿಸಿ, ತಾಜ್‌ ಮಹಲ್‌ನೊಳಗಿನ ಮುಚ್ಚಿದ 22 ಕೋಣೆಗಳೊಳಗೆ ಹಿಂದೂ ದೇವರ ವಿಗ್ರಹಗಳಿಲ್ಲ.

ಹಾಗೆಯೇ ಆ ಕೋಣೆಗಳನ್ನು ಶಾಶ್ವತವಾಗಿ ಮುಚ್ಚಿಲ್ಲ. ಕಾಲಕಾಲಕ್ಕೆ ತೆಗೆದು ಕಟ್ಟಡದ ಸಂರಕ್ಷಣೆಗೆ ಅಗತ್ಯವಾದ ಕಾರ್ಯಗಳನ್ನು ಕೈಗೊಂಡು ಬರಲಾಗಿದೆ ಎಂದು ಹೇಳಿದ್ದಾರೆ.

ತಾಜ್‌ ಮಹಲ್‌ ಮೂಲತಃ ಶಿವನ ದೇವಸ್ಥಾನ ಎಂಬ ವಾದವನ್ನೂ ಎಎಸ್‌ಐ ಮೂಲಗಳು ಅಲ್ಲಗಳೆದಿವೆ. ತಾಜ್‌ ಮಹಲ್‌ನ ನೆಲಮಾಳಿಗೆಯಲ್ಲಿ ಒಟ್ಟು 100 ಸಾರ್ವಜನಿಕ ಕೋಣೆಗಳಿವೆ. ಇವುಗಳೆಲ್ಲ ವಿವಿಧ ವಿನ್ಯಾಸಗಳನ್ನು ಹೊಂದಿವೆ. ಅವು ಗಳನ್ನು ಭದ್ರತಾ ಕಾರಣಗಳಿಗಾಗಿ ಮುಚ್ಚ ಲಾಗಿದೆ. ಜನರು ಅಲ್ಲೆಲ್ಲ ಪ್ರವೇಶಿಸಿ ಹಾಳು ಮಾಡಬಾರದೆನ್ನುವುದೇ ಇದರ ಹಿಂದಿನ ಕಾಳಜಿ ಎಂದು ಅಧಿಕಾರಿ ಹೇಳಿದ್ದಾರೆ.

ಎಎಸ್‌ಐನ ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ. ಮೊಹಮ್ಮದ್‌ ಈ ಬಗ್ಗೆ ಪ್ರತಿ ಕ್ರಿಯಿಸಿ, ತಾನು ಅಲ್ಲಿ ಉಸ್ತುವಾರಿಯಾ ಗಿದ್ದಾಗ ಆ ಕೊಠಡಿಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಕಂಡಿಲ್ಲ ಎಂದಿದ್ದಾರೆ.

ತಾಜ್‌ ಜಾಗ ನಿಮ್ಮದಾಗಿದ್ದರೆ ಸಾಕ್ಷಿ ಕೊಡಿ
ತಾಜ್‌ ಮಹಲ್‌ ಜೈಪುರ ರಾಜ ಮನೆತನದ ಆಸ್ತಿ ಎನ್ನುವುದಕ್ಕೆ ಸಾಕ್ಷಿ ಕೊಡಿ ಎಂದು ಬಿಜೆಪಿ ಸಂಸದೆ ದಿವ್ಯಾ ಕುಮಾರಿಗೆ ಶಹಜಹಾನ್‌ ವಂಶಸ್ಥ ಯಾಕೂಬ್‌ ಹಬೀಬುದ್ದೀನ್‌ ತುಸಿ ಸವಾಲು ಹಾಕಿದ್ದಾರೆ. ನಿಮ್ಮಲ್ಲಿ ಒಂದು ತೊಟ್ಟು ರಜಪೂತ್‌ ರಕ್ತವಿದ್ದರೆ ನಿಮ್ಮ ಹೇಳಿಕೆಯನ್ನು ಸಾಬೀತು ಮಾಡಿ ಎಂದು ವೀಡಿಯೊ ಹೇಳಿಕೆಯಲ್ಲಿ ಅವರು ಕೆಣಕಿದ್ದಾರೆ. ಅಷ್ಟು ಮಾತ್ರವಲ್ಲ 14 ಮಂದಿ ರಜಪೂತ್‌ ರಾಣಿಯರನ್ನು ಮೊಘಲ ಸುಲ್ತಾನರು ಮದುವೆ ಯಾಗಿದ್ದರು. ತಮ್ಮ ಅಳಿಯಂದಿರಿಗೆ ರಜಪೂತರು ಜಾಗಗಳನ್ನು ದಾನವಾಗಿ ಕೊಡುವ ಪದ್ಧತಿ ಇಟ್ಟುಕೊಂಡಿದ್ದರು ಎಂದು ಹಬೀಬುದ್ದೀನ್‌ ಹೇಳಿದ್ದಾರೆ. ಗುರುವಾರ ತಾಜ್‌ ಮಹಲ್‌ ಬಗ್ಗೆ ಮಾತನಾಡಿದ್ದ ಜೈಪುರ ರಾಜ ಮನೆತನದ ಭವಿಷ್ಯದ ಯುವರಾಣಿ ದಿವ್ಯಾ ಕುಮಾರಿ, “ತಾಜ್‌ ಮಹಲ್‌ ಇರುವ ಜಾಗ ತಮ್ಮ ಪೂರ್ವಿಕರಿಗೆ ಸೇರಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆ ನನ್ನಲ್ಲಿವೆ’ ಎಂದಿದ್ದರು.

 

 

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.