ಬಕ್ರೀದ್ ಗೆ ಗೋ ಬಲಿ ಬೇಡ : ಮುಸ್ಲಿಂ ಸಮುದಾಯಕ್ಕೆ ತೆಲಂಗಾಣ ಗೃಹ ಸಚಿವರ ಮನವಿ
Team Udayavani, Jul 17, 2019, 1:02 PM IST
ಹೈದ್ರಾಬಾದ್ : ಬಲಿದಾನದ ದ್ಯೋತಕವಾಗಿ ಮುಸ್ಲಿಂ ಸಮುದಾಯದವರು ಆಚರಿಸುವ ಈದ್–ಉಲ್–ಅದಾ ಅಥವಾ ಬಕ್ರ್–ಈದ್ ಸಂದರ್ಭದಲ್ಲಿ ಗೋವಿನ ಹತ್ಯೆಯನ್ನು ಸ್ವಯಂಪ್ರೇರಿತರಾಗಿ ತ್ಯಜಿಸುವಂತೆ ತೆಲಂಗಾಣದ ಗೃಹ ಸಚಿವ ಮಹಮ್ಮದ್ ಆಲಿ ಅವರು ತಮ್ಮ ಸಮುದಾಯದವರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮ ವಕ್ತಾರರೊಂದಿಗೆ ಮಾತನಾಡುತ್ತಾ ಸಚಿವರು ತಮ್ಮ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಈ ಸಮಾಜದ ಭಾಗವಾಗಿರುವ ಒಂದು ಸಮುದಾಯದವರು ಗೋವನ್ನು ಪೂಜ್ಯಭಾವನೆಯಿಂದ ಕಾಣುತ್ತಾರೆ ಮತ್ತು ಗೋವನ್ನು ಆರಾಧಿಸುತ್ತಾರೆ. ಹೀಗಿರುವಾಗ ನಾವು ಗೋವನ್ನು ಕೊಂದು ಅದನ್ನು ಆಹಾರವಾಗಿ ಸೇವಿಸುವುದು ಸರಿಯಲ್ಲ, ಅವರ ಭಾವನೆಗಳಿಗೂ ಬೆಲೆ ಕೊಡಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ ಎಂದು ಸಚಿವ ಮಹಮ್ಮದ್ ಅವರು ಅಭಿಪ್ರಾಯಪಟ್ಟರು.
‘ನಾವು ಗೋವನ್ನು ಹತ್ಯೆ ಮಾಡುವುದನ್ನು ಸ್ವಯಂಪ್ರೇರಿತವಾಗಿ ತ್ಯಜಿಸಬೇಕು ಎಂದು ನನ್ನೆಲ್ಲಾ ಸಮುದಾಯ ಬಾಂಧವರಲ್ಲಿ ನಾನು ವಿನಂತಿಸುತ್ತಿದ್ದೇನೆ. ಒಂದು ಧರ್ಮದವರು ಗೋವನ್ನು ದೇವರೆಂದು ಪೂಜಿಸುತ್ತಾರೆ ಹಾಗಾಗಿ ಆ ಧರ್ಮದವರ ಭಾವನೆಗಳನ್ನು ಗೌರವಿಸುವುದು ನಮ್ಮ ಕರ್ತವ್ಯ’ ಎಂಬುದು ತೆಲಂಗಾಣ ಗೃಹ ಸಚಿವರ ಮಾತು.
ಬಕ್ರ್-ಈದ್ ಸಂದರ್ಭದಲ್ಲಿ ಗೋ ಹತ್ಯೆ ಮಾಡಿದಲ್ಲಿ ಕಾನೂನು ವ್ಯವಸ್ಥೆಯ ಮೂಲಕವೇ ಸೂಕ್ತ ಕ್ರಮ ಕೈಗೊಳ್ಳುವಂತಾಗಬೇಕು ಎಂದೂ ಮಹಮ್ಮದ್ ಅವರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು