Video: ನ.19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ… ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ
Team Udayavani, Nov 5, 2023, 11:37 AM IST
ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿರುವ ನಡುವೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಬೆದರಿಕೆ ಒಡ್ಡಿರುವ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾನೆ.
ಪನ್ನು ಬಿಡುಗಡೆ ಮಾಡಿದ ವಿಡಿಯೋದಲ್ಲಿ ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಸಿಖ್ಖರು ಪ್ರಯಾಣಿಸಬೇಡಿ ಒಂದು ವೇಳೆ ಪ್ರಯಾಣಿಸಿದರೆ ನಿಮಗೆ ಅಪಾಯ ಸಂಭವಿಸಲಿದೆ ಎಂದು ಹೇಳಿರುವ ಬೆದರಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಅಷ್ಟುಮಾತ್ರವಲ್ಲದೆ ನವೆಂಬರ್ 19 ರಂದು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಮತ್ತು ಅದರ ಹೆಸರನ್ನು ಬದಲಾಯಿಸಲಾಗುವುದು ಎಂದು ಪನ್ನು ಹೇಳಿದ್ದಾರೆ. ಅದಲ್ಲದೆ ಕ್ರಿಕೆಟ್ ವಿಶ್ವಕಪ್ನ ಅಂತಿಮ ಪಂದ್ಯ ಕೂಡ ಇದೇ ದಿನ ನಡೆಯಲಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಹೈಲೈಟ್ ಮಾಡಿದ್ದಾನೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ದಾಳಿ ನಡೆಸುವುದಾಗಿ ಭಯೋತ್ಪಾದಕ ಬೆದರಿಕೆ ಹಾಕಿದ್ದು, ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ರೀತಿಯ ಪರಿಸ್ಥಿತಿ ಭಾರತದಲ್ಲೂ ಉಂಟಾಗಬಹುದು ಎಂದು ಹೇಳಿದ್ದ.
ಇದನ್ನೂ ಓದಿ: GPS Anklet: ಜಾಮೀನಿನ ಮೇಲಿರುವ ಶಂಕಿತ ಉಗ್ರರ ಚಲನವಲನ ಪತ್ತೆಗೆ ಪೊಲೀಸರಿಂದ ನೂತನ ಕ್ರಮ
New York and Canada based terrorist asks Sikhs to not fly Air India after Nov 19, as their lives can be under threat. He says they will not let Air India fly
They want to do what their hero Talwinder Parmar did #cdnpoli pic.twitter.com/45tSDUE0dE
— Journalist V (@OnTheNewsBeat) November 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ