ಜಲ್ಲಿಕಟ್ಟು ಕ್ರೀಡೆಯನ್ನು ಜೂಜಿಗಾಗಿ ಬಳಸಕೂಡದು: ಮದ್ರಾಸ್ ಹೈಕೋರ್ಟ್
Team Udayavani, Mar 15, 2017, 4:19 PM IST
ಮಧುರೆ : ಜಲ್ಲಿಕಟ್ಟು ಕ್ರೀಡೆಯನ್ನು ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಕ್ರೀಡೆಯಾಗಿ ನಡೆಸಬೇಕೇ ಹೊರತು ಜೂಜು ಕ್ರೀಡೆಯಾಗಿ ಬಳಸಕೂಡದು ಎಂದು ಮದ್ರಾಸ್ ಹೈಕೋರ್ಟ್ ಪೀಠ ಜಲ್ಲಿಕಟ್ಟು ಸಂಘಟಕರಿಗೆ ಖಡಕ್ ಆಗಿ ಹೇಳಿದೆ.
ಪುದುಕೋಟೆ ಜಿಲ್ಲೆಯ ಕಳಮವೂರು ಗ್ರಾಮದಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ನಡೆಸುವುದಕ್ಕೆ ಅನುಮತಿ ನೀಡುವಂತೆ ಪೊಲೀಸರಿಗೆ ಆದೇಶಿಸಬೇಕೆಂದು ಕೋರಿ ಎಂ ರಾಜೇಂದ್ರನ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಜಸ್ಟಿಸ್ ಹುಲುವಾಡಿ ಜಿ ರಮೇಶ್ ಮತ್ತು ಟಿ ಎಸ್ ಶಿವಜ್ಞಾನಂ ಅವರನ್ನು ಒಳಗೊಂಡ ವಿಭಾಗೀಯ ಪೀಠವು, ಜಲ್ಲಿಕಟ್ಟು ಕ್ರೀಡೆಯನ್ನು ಜೂಜಿನ ಕ್ರೀಡೆಯಾಗಿ ಬಳಸಕೂಡದೆಂದು ಸ್ಪಷ್ಟಪಡಿಸಿತು.
ಅರ್ಜಿದಾರರ ಕೋರಿಕೆಯಂತೆ ಜಲ್ಲಿಕಟ್ಟು ಕ್ರೀಡೆಯನ್ನು ನಡೆಸುವುದಕ್ಕೆ ಅನುಮತಿ ನೀಡುವಂತೆಯೂ, ಆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕೆಂದೂ ನ್ಯಾಯ ಪೀಠ ಪೊಲೀಸರಿಗೆ ಸೂಚನೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ