ವರ್ಷಾಂತ್ಯಕ್ಕೆ ಜಿಡಿಪಿ ಶೇ.5 ತಲುಪಿದರೆ ಅದೇ ನಮ್ಮ ಪುಣ್ಯ: ಪಿ.ಚಿದಂಬರಂ ವ್ಯಂಗ್ಯ
Team Udayavani, Dec 5, 2019, 5:25 PM IST
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಹಾಗೂ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಒಂದು ತಿಂಗಳ ಸೆರೆವಾಸ ಕಂಡು ಬೇಲ್ ಮೂಲಕ ಹೊರ ಬಂದಿರುವ ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮೋದಿ ಸರಕಾರ ವಿರುದ್ಧ ಟೀಕೆ ಪ್ರಹಾರ ನಡೆಸಿದ್ದು, ಆರ್ಥಿಕ ಹಿಂಜರಿತಕ್ಕೆ ಕೇಂದ್ರ ಸರಕಾರ ಈಗಿನ ನೀತಿಗಳೇ ಕಾರಣ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬುಧವಾರ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಪಿ.ಚಿದಂಬರಂ ಜೈಲಿನಿಂದ ಹೊರ ಬಂದ ನಂತರ ಮೊದಲ ಬಾರಿಗೆ ಗುರುವಾರ ಸುದ್ದಿಗೋಷ್ಠಿ ನಡೆಸಿದ್ದು, ದೇಶದ ಆರ್ಥಿಕತೆ ಕುಸಿತ ಕುರಿತು ಮಾತನಾಡಿದ್ದಾರೆ. ಮೋದಿ ಮೌನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವರ್ಷದ ಅಂತ್ಯಕ್ಕೆ ಜಿಡಿಪಿ ಶೇ.5 ರಷ್ಟು ಮುಟ್ಟಿದರೆ ಅದು ನಮ್ಮ ಅದೃಷ್ಟ ಎಂದು ವ್ಯಂಗ್ಯವಾಡಿದ ಅವರು, ಕೇಂದ್ರ ಸರಕಾರ ತೆಗೆದುಕೊಳ್ಳುತ್ತಿರುವ ಕೆಟ್ಟ ನಿರ್ಧಾರಗಳಿಂದ ದೇಶದ ಜಿಡಿಪಿ ದಿನದಿಂದ ದಿನಕ್ಕೆ ಕುಂಠಿತವಾಗುತ್ತಿದೆ. ಪರಿಸ್ಥಿತಿ ಮೀರಿ ಹೋಗುತ್ತಿದ್ದರೂ ದೇಶದ ಆರ್ಥಿಕತೆ ಬಗ್ಗೆ ಕೇವಲ ವಿತ್ತ ಸಚಿವರೇ ಮಾತನಾಡುತ್ತಿದ್ದಾರೆ. ಜಿಡಿಪಿ ಕುಸಿತದ ಕುರಿತು ಪ್ರಧಾನಿ ಮೋದಿ ಅವರು ಮೌನವಹಿಸಿದ್ದಾರೆ ಎಂದು ಟೀಕೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ