ಡಾ| ಸಿಂಗ್ ಬಯಸಿದರಷ್ಟೇ ಪ್ರದರ್ಶನ: ನಟ ಖೇರ್
Team Udayavani, Dec 30, 2018, 12:30 AM IST
ಹೊಸದಿಲ್ಲಿ: “ದ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರವನ್ನು ಬಿಡುಗಡೆಗೂ ಮುನ್ನ ತಮಗೆ ತೋರಿಸಬೇಕೆಂದು ಮಾಜಿ ಪ್ರಧಾನಿ
ಡಾ| ಮನಮೋಹನ್ ಸಿಂಗ್ ಆಗ್ರಹಿಸಿದರೆ ಮಾತ್ರವೇ, ಅವರಿಗೆ ವಿಶೇಷ ಪ್ರದರ್ಶನ ಏರ್ಪಡಿಸುತ್ತೇವೆ. ಅವರನ್ನು ಬಿಟ್ಟು ಬೇರ್ಯಾರಿಗೂ ಅಂಥ ಕೋರಿಕೆ ಸಲ್ಲಿಸುವ ಅಧಿಕಾರವಿಲ್ಲ ಎಂದು ಹಿರಿಯ ನಟ ಅನುಪಮ್ ಖೇರ್ ತಿಳಿಸಿದ್ದಾರೆ.
ಚಿತ್ರದ ಬಿಡುಗಡೆಗೂ ಮುನ್ನ ತಮಗಾಗಿ ಚಿತ್ರದ ಪ್ರೀಮಿಯರ್ ಶೋ ಏರ್ಪಡಿಸ ಬೇಕೆಂದು ಮಹಾರಾಷ್ಟ್ರದ ಯುವ ಕಾಂಗ್ರೆಸ್ ಮಂಡಿಸಿರುವ ಬೇಡಿಕೆಗೆ ತುಸು ಖಾರ ವಾಗಿಯೇ ಪ್ರತಿಕ್ರಿಯಿಸಿರುವ ಖೇರ್, ಒಮ್ಮೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣ ಪತ್ರ ದೊರೆತಾದ ಮೇಲೆ ಯಾರಾರಿಗೋ ಚಿತ್ರ ವನ್ನು ನಾವೇಕೆ ತೋರಿಸಬೇಕು? ಇದು ಪುಸ್ತಕ ಆಧಾರಿತ ಚಿತ್ರ. ಆ ಪುಸ್ತಕ ನೈಜ ಘಟನೆಗಳ ಆಧಾರಿತ. ಹಾಗಿರುವಾಗ ವಿವಾದ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಬಿಜೆಪಿಯನ್ನು ಬೆಂಬಲಿಸುವ ಸಲುವಾಗಿ ಚಿತ್ರದ ಪರ ನಿಂತಿದ್ದಾರೆ ಎಂಬ ಆರೋಪಗಳನ್ನು ಖೇರ್ ತಳ್ಳಿಹಾಕಿದ್ದು, ಚುನಾವಣೆ ಹೊಸ್ತಿಲಲ್ಲೇ ಚಿತ್ರ ಬಿಡುಗಡೆ ಮಾಡುತ್ತಿರುವುದರಲ್ಲಿ ತಪ್ಪೇನೂ ಇಲ್ಲ ಎಂದು ಚಿತ್ರ ನಿರ್ಮಾಪಕರ ನಡೆಯನ್ನು ಸಮರ್ಥಿಸಿ ಕೊಂಡಿದ್ದಾರೆ.
ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನೆಮಾವು ಒಂದು ಗಿಮಿಕ್ ಅಷ್ಟೆ. ಇಂಥ ಸಿನಿಮಾಗಳಿ ಗಾಗಿ ಆಡಳಿತಾರೂಢ ಬಿಜೆಪಿ ಹಣವನ್ನು ದುರ್ಬಳಕೆ ಮಾಡುತ್ತಿದೆ. ಅವರಿಗೇನು ಬೇಕೋ ಅದನ್ನು ಮಾಡಿಕೊಳ್ಳಲಿ. ಅಂಥ ಸಿನೆಮಾ ಬರುತ್ತದೆ, ಹೋಗುತ್ತದೆ. ಅದರ ಬಗ್ಗೆ ಕಮೆಂಟ್ ಮಾಡಲು ನಾವು ಇಚ್ಛಿಸುವುದಿಲ್ಲ.
ಅಹ್ಮದ್ ಪಟೇಲ್, ಕಾಂಗ್ರೆಸ್ ಹಿರಿಯ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?