ಪಣಜಿ: ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆ… ಕುಡಿಯುವ ನೀರಿನ ಸಮಸ್ಯೆಯ ಆತಂಕ
Team Udayavani, Jun 20, 2023, 5:18 PM IST
ಪಣಜಿ: ರಾಜ್ಯದಲ್ಲಿ ಮುಂಗಾರು ಘೋಷಣೆಯಾಗಿದ್ದರೂ ಇನ್ನೂ ಚುರುಕುಗೊಂಡಿಲ್ಲ, ಇನ್ನೂ ನಾಲ್ಕು ದಿನಗಳ ಕಾಲ ಮುಂಗಾರು ದುರ್ಬಲತೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏತನ್ಮಧ್ಯೆ, ರಾಜ್ಯದಲ್ಲಿನ ಅಣೆಕಟ್ಟುಗಳು ತಳಕ್ಕೆ ತಲುಪಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಎದುರಾಗಿದೆ. ಅದರಲ್ಲೂ ಅಂಜುನೆ, ಪಂಚವಾಡಿ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಲಕ್ಷಣ ಕಂಡುಬರುತ್ತಿದೆ ಎನ್ನಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಬೀಪರ್ಜಾಯ್ ಚಂಡಮಾರುತ ಮತ್ತು ಪೆಸಿಫಿಕ್ ಸಾಗರದಲ್ಲಿ ಸಕ್ರಿಯವಾಗಿರುವ ಅಲ್ನಿನೊದಿಂದ ಈ ವರ್ಷ ಮುಂಗಾರು ದುರ್ಬಲವಾಗಲಿದೆ ಎಂದು ಹವಾಮಾನ ತಜ್ಞರು ಭವಿಷ್ಯ ನುಡಿದಿದ್ದಾರೆ. ರಾಜ್ಯದ ಪಂಚವಾಡಿ, ಅಂಜುನೆ, ಸಾಳಾವಳಿ ಅಣೆಕಟ್ಟುಗಳು ಸಂಪೂರ್ಣ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಆತಂಕಕ್ಕೆ ಒಳಗಾಗಿದೆ.
ಅಂಜುಣೆ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ತಗ್ಗಿದ ಪರಿಣಾಮ ಕುಡಿಯುವ ನೀರಿನ ಯೋಜನೆಗಳು ಸ್ಥಗಿತಗೊಂಡಿವೆ. ಮುಂದಿನ ವಾರದಲ್ಲಿ ನೀರಿಗಾಗಿ ಹಾಹಾಕಾರ ಎದುರಾಗುವ ಆತಂಕ ಮನೆಮಾಡಿದೆ. ಪ್ರಸ್ತುತ ವಾಲ್ಪೈ-ಸತ್ತಾರಿ ಭಾಗದ ಹಲವು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನೀರು ಪೂರೈಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸದ್ಯ ರಾಜ್ಯದಲ್ಲಿನ ಅಣೇಕಟ್ಟುಗಳ ನೀರಿನ ಮಟ್ಟ ಇಂತಿದೆ-ಸಾಲಾವಳಿ-ಶೇ21, ಅಂಜುನೆ-ಶೇ 3, ಚಾಪೋಲಿ-ಶೇ 41, ಆಮಠಾಣೆ-ಶೇ 41, ಗಾವಣೆ-ಶೇ36.
ಲೊಕೋಪಯೋಗಿ ಇಲಾಖೆಯ ಮುಖ್ಯ ಎಂಜಿನೀಯರ್ ಪ್ರಮೋದ ಬಾದಾಮಿ ಸುದ್ಧಿಗಾರರೊಂದಿಗೆ ಮಾತನಾಡಿ- ರಾಜ್ಯದಲ್ಲಿ ಕುಡಿಯುವ ನೀರು ಲಭ್ಯವಿದೆ,ಖಂಡೇಪರ್, ಓಪಾ ಮತ್ತು ಮಹದಾಯಿಯಲ್ಲಿ ಸಾಕಷ್ಟು ನೀರಿದೆ. ಆದರೆ, ಅಂಜುಣೆ ಅಣೆಕಟ್ಟೆಯ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಅಂದರೆ ಶೇ.3ರಷ್ಟು ಮಾತ್ರ ಬಾಕಿ ಇದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ನೀರಿನ ಯೋಜನೆಗಳನ್ನು ರೂಪಿಸುವುದು ಅನಿವಾರ್ಯವಾಗಿದೆ. ತಿಲಾರಿ, ಸಲಾವಲಿ, ಆಮಠಾಣೆ ಮತ್ತು ಚಾಪೋಲಿ ಅಣೆಕಟ್ಟುಗಳಲ್ಲಿ ಜೂನ್ ತಿಂಗಳ ಅಂತ್ಯದವರೆಗೆ ಸಾಕಷ್ಟು ನೀರಿದೆ. ರಾಜ್ಯದಲ್ಲಿ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆಗೆ ಅಧ್ಯಯನ ಆರಂಭಿಸಲಾಗಿದೆ ಎಂಬ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ