ಬರ: ಕೇಂದ್ರದಿಂದ ಹೆಚ್ಚುವರಿ ನೆರವು ಕೇಳಿದ ಶಿವಸೇನೆ
Team Udayavani, Jun 6, 2019, 3:00 PM IST
ಮುಂಬಯಿ: ಮಹಾರಾಷ್ಟ್ರವು ತೀವ್ರ ಬರಗಾಲವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಶಿವಸೇನೆಯು ಬಿಜೆಪಿ ಆಡಳಿತದ ಕೇಂದ್ರ ಸರಕಾರಕ್ಕೆ ಹೆಚ್ಚುವರಿ ಹಣಕಾಸು ನೆರವು ಒದಗಿಸಲು ಮನವಿ ಮಾಡಿದೆ. ರಾಜ್ಯದ ಸುಮಾರು 9000 ಹಳ್ಳಿಗಳಿಗೆ ಇನ್ನೂ ಆರ್ಥಿಕ ನೆರವು ದೊರೆತಿಲ್ಲ. ಬರಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರಕಾರವು ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿವಸೇನೆ ಬುಧವಾರ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ. ಬರ ಸಮಸ್ಯೆಗಳನ್ನು ನಿಭಾಯಿಸಲು ತೆಗೆದುಕೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲು ಶಿವಸೇನೆ ಸಭೆ ಕೂಡ ನಡೆಸಿದೆ.
ಕೇಂದ್ರ ಸರಕಾರವು ಬರ ನಿವಾರಣೆ ಕ್ರಮಗಳನ್ನು ಕೈಗೊಳ್ಳಲು ಮಹಾರಾಷ್ಟ್ರ ಸರಕಾರಕ್ಕೆ ಈವರೆಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ 4,248.59 ಕೋಟಿ ರೂ.ಗಳ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿ¨ªಾರೆ.
ಕೇಂದ್ರದಿಂದ ಈವರೆಗೆ ಒಟ್ಟು 4,248.59 ಕೋಟಿ ರೂ. ನೆರವು ಸ್ವೀಕರಿಸಲಾಗಿದೆ ಎಂದು ಮುಖ್ಯಮಂತ್ರಿ ಟ್ವೀಟ್ನಲ್ಲಿ ತಿಳಿಸಿ¨ªಾರೆ. ಕಳಪೆ ಮುಂಗಾರಿನ ಅನಂತರ ಫಡ್ನವೀಸ್ ಸರಕಾರವು ಕಳೆದ ವರ್ಷದ ಅಕ್ಟೋಬರ್ನಲ್ಲಿ ರಾಜ್ಯದ 358 ತಾಲೂಕುಗಳ ಪೈಕಿ 151 ತಾಲೂಕುಗಳಲ್ಲಿ ಬರಗಾಲವನ್ನು ಘೋಷಿಸಿದೆ. ಏತನ್ಮಧ್ಯೆ, ವಿಪತ್ತು ನಿರ್ವಹಣಾ ಕಾಯಿದೆಯನ್ನು ಅನುಷ್ಠಾನಗೊಳಿಸಲು ಹಾಗೂ ಪ್ರತಿ ಜಿÇÉೆಯಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ಸ್ಥಾಪಿಸಲು ಕೋರಿ ಬಾಂಬೆ ಹೈಕೋರ್ಟ್ನಲ್ಲಿ ಒಂದು ಅರ್ಜಿಯನ್ನು ಕೂಡ ಸಲ್ಲಿಸಲಾಗಿದೆ. ಕಳೆದ ತಿಂಗಳು ಹೈಕೋರ್ಟ್ ಬರ ನಿಭಾಯಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿದವಿತ್ ಸಲ್ಲಿಸುವಂತೆ ರಾಜ್ಯ ಸರಕಾರವನ್ನು ಕೇಳಿತ್ತು. ಇದಾದ ಒಂದು ವಾರದ ಅನಂತರ ಫಡ್ನವೀಸ್ ಸರಕಾರವು ಅಫಿದವಿತ್ ಸಲ್ಲಿಸಿದ್ದು, ನೀರಿನ ಕೊರತೆಯ ನಿರ್ವಹಣೆ ಮತ್ತು ಬರ ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರವು ಕ್ರಿಯಾ ಯೋಜನೆಗಳ ಸಿದ್ಧತೆ ಸೇರಿದಂತೆ ಹಲವಾರು ಬರ ನಿರೋಧಕ ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಅದರಲ್ಲಿ ತಿಳಿಸಿದೆ.
ಹೊಸ ಕೊಳವೆಬಾವಿಗಳ ಸ್ಥಾಪನೆ, ಪೈಪ್ ನೀರು ಸರಬರಾಜು ಯೋಜನೆಗಳ ವಿಶೇಷ ರಿಪೇರಿ, ಟ್ಯಾಂಕರ್ಗಳು ಮತ್ತು ಎತ್ತಿನ ಬಂಡಿಗಳ ಮೂಲಕ ನೀರು ಸರಬರಾಜು, ಬಾವಿಗಳ ಆಳಗೊಳಿಸುವಿಕೆ ಮತ್ತು ಹೂಳೆತ್ತುವಿಕೆ ಸಹಿತ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರವು ಅಫಿದವಿತ್ನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ