ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕಾರಕ್ಕೆ ಸಡಗರದ ಸಿದ್ಧತೆ

ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಮುರ್ಮು ಪ್ರಮಾಣವಚನ

Team Udayavani, Jul 23, 2022, 7:15 AM IST

ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕಾರಕ್ಕೆ ಸಡಗರದ ಸಿದ್ಧತೆ

ಹೊಸದಿಲ್ಲಿ: ಸೋಮವಾರ ಹೊಸದಿಲ್ಲಿಯಲ್ಲಿ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಪ್ರಮಾಣ ಸ್ವೀಕಾರಕ್ಕಾಗಿ ಎಲ್ಲ ಸಿದ್ಧತೆಗಳೂ ಆರಂಭವಾಗಿದ್ದು, ಅಂದು ಕೆಲವು ಸರಕಾರಿ ಕಚೇರಿಗಳನ್ನು ಭಾಗಶಃ ಬಂದ್‌ ಮಾಡುವಂತೆ ಕೇಂದ್ರ ಸಿಬಂದಿ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಜತೆಗೆ, ನೂತನ ಸಂಸತ್‌ ಭವನದ ನಿರ್ಮಾಣ ಕಾಮಗಾರಿಯನ್ನೂ ಅಂದು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.

ಜು.25ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಸುಮಾರು 30 ಕಚೇರಿಗಳನ್ನು ಖಾಲಿ ಮಾಡಿ, ಭದ್ರತಾ ತಪಾಸಣೆ ನಡೆಸಲಾಗುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದೇ ವೇಳೆ, ದ್ರೌಪದಿ ಗೆಲುವು ಹಿನ್ನೆಲೆಯಲ್ಲಿ ಶುಕ್ರವಾರ ಅಸ್ಸಾಂ, ಅರುಣಾಚಲಪ್ರದೇಶ, ತ್ರಿಪುರ, ಮಿಜೋರಾಂ, ನಾಗಾಲ್ಯಾಂಡ್‌ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿದೆ.

ಒಡಿಶಾ ಸಿಎಂ ನವೀನ್‌ ಪಾಟ್ನಾಯಕ್‌ ಅವರೂ ಮುರ್ಮು ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.

ರಾಜ್ಯಸಭೆ ಅವಧಿ ಬದಲು: ಸಾಮಾನ್ಯವಾಗಿ ರಾಜ್ಯಸಭಾ ಕಲಾಪವು ಬೆಳಗ್ಗೆ 11 ಗಂಟೆಗೆ ಆರಂಭವಾಗುತ್ತದೆ. ಆದರೆ, ಮುರ್ಮು ಅವರ ಪ್ರಮಾಣ ವಚನ ಹಿನ್ನೆಲೆಯಲ್ಲಿ ಜು. 25ರಂದು ಕಲಾಪವು ಮಧ್ಯಾಹ್ನ 2 ಗಂಟೆಯಿಂದ ಆರಂಭಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ರಾಜ್‌ಭರ್‌ಗೆ ಭದ್ರತೆ ಹೆಚ್ಚಳ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದ ಬೆನ್ನಲ್ಲೇ ಉತ್ತರಪ್ರದೇಶದ ಸುಹೇಲ್‌ದೇವ್‌ ಭಾರತೀಯ ಸಮಾಜ್‌ ಪಾರ್ಟಿ ಅಧ್ಯಕ್ಷ ಓಂ ಪ್ರಕಾಶ್‌ ರಾಜ್‌ಭರ್‌ ಅವರಿಗೆ ರಾಜ್ಯ ಸರಕಾರ “ವೈ’ ಕೆಟಗರಿ ಭದ್ರತೆ ಒದಗಿಸಿದೆ. ಅಲ್ಲದೇ, ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಮುರ್ಮು ಅವರ ಗೌರವಾರ್ಥ ಆಯೋಜಿಸಿದ್ದ ಔತಣಕೂಟ   ದಲ್ಲೂ ರಾಜ್‌ಭರ್‌ ಭಾಗಿಯಾಗಿದ್ದಾರೆ.

ರಾಜ್‌ಭರ್‌ ಅವರ ಎಸ್‌ಬಿಎಸ್‌ಪಿ ಈ ಹಿಂದೆ ಸಮಾಜವಾದಿ ಪಕ್ಷದ ಮಿತ್ರಪಕ್ಷವಾಗಿತ್ತು. ಅನಂತರದಲ್ಲಿ ಎರಡೂ ಪಕ್ಷಗಳ ನಡುವೆ ಅಸಮಾಧಾನ ಹೊಗೆಯಾಡಿತ್ತು.

ಆಕ್ಷೇಪಾರ್ಹ ಪೋಸ್ಟ್‌: ಉದ್ಯೋಗಿ ವಜಾ: ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದಕ್ಕಾಗಿ ಖಾಸಗಿ ಮಾಧ್ಯಮವೊಂದು ತನ್ನ ಕಂಪನಿಯಲ್ಲಿ ಜನರಲ್‌ ಮ್ಯಾನೇಜರ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಇಂದ್ರಾಣಿ ಚಟರ್ಜಿ ಎಂಬ ವ್ಯಕ್ತಿಯನ್ನು ಆ ಹುದ್ದೆಯಿಂದ ವಜಾಗೊಳಿಸಿದೆ.

“ಫೇಸ್‌ಬುಕ್‌ನಲ್ಲಿ ಅವರು ಮಾಡಿದ ಪೋಸ್ಟ್‌ ಭಾರೀ ವೈರಲ್‌ ಆಗಿತ್ತು. ಆ ಪೋಸ್ಟ್‌ ತಮ್ಮ ಗಮನಕ್ಕೂ ಬಂದಿದ್ದು ಅದು ಸಂಯಮವನ್ನು ಮೀರುವಂತಿದೆ. ಹಾಗಾಗಿ, ಈ ಕ್ರಮ ಕೈಗೊಂಡಿದ್ದೇವೆ’ ಎಂದು ಕಂಪನಿ ತಿಳಿಸಿದೆ.

ಚರ್ಚೆಗೆ ಗ್ರಾಸವಾದ ಕೇರಳದ “ಒಂದು ಮತ’: ಕೇರಳದಲ್ಲಿ ಬಿಜೆಪಿಯು ಯಾವುದೇ ಶಾಸಕರನ್ನು ಹೊಂದಿಲ್ಲ. ಆದರೂ, ಅಲ್ಲಿಂದ ಒಂದು ಮತ, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬಂದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅದಕ್ಕೆ ಕಾರಣವಾಗಿದ್ದು ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ ಅವರ ಟ್ವೀಟ್‌. “ಒಬ್ಬರೂ ಬಿಜೆಪಿ ಶಾಸಕರಿಲ್ಲದ ಕೇರಳದಿಂದ ಒಂದು ಮತ ಮುರ್ಮು ಅವರಿಗೆ ಬಂದಿದೆ. ಇದೊಂದು ಸಕಾರಾತ್ಮಕ ಬೆಳವಣಿಗೆ’ ಎಂದಿದ್ದರು. ಕೇರಳದ ಯಾವುದಾದರೂ ಶಾಸಕರು ಅಥವಾ ಸಂಸದರು ಅಡ್ಡ ಮತದಾನ ಹಾಕಿದರೇ ಅಥವಾ ಕಣ್ತಪ್ಪಿನಿಂದ ಒಂದು ಮತ ಮುರ್ಮು ಅವರಿಗೆ ಬಿದ್ದಿದೆಯೇ ಎಂಬ ಅನುಮಾನಗಳು ಹುಟ್ಟಿಕೊಂಡಿದ್ದವು. ಅತ್ತ, ಆಡಳಿತಾರೂಢ ಸಿಪಿಎಂ- ಕಾಂಗ್ರೆಸ್‌ ಮೈತ್ರಿ ಕೂಟ ಸರಕಾರಕ್ಕೂ ಕೊಂಚ ತಲೆಬಿಸಿಯಾಗಿತ್ತು. ತೀವ್ರ ಚರ್ಚೆಯ ಅನಂತರ ಒಂದು ವಿಚಾರ ಬೆಳಕಿಗೆ ಬಂದು ಈ ಕುತೂಹಲಕ್ಕೆ ತೆರೆಬಿದ್ದಿತು.

ಉತ್ತರ ಪ್ರದೇಶದ ಬಿಜೆಪಿ ಸಂಸದ ನೀಲ್‌ ರತನ್‌ ಸಿಂಗ್‌ ಪಟೇಲ್‌ ಅವರು ಅನಾರೋಗ್ಯದಿಂದಾಗಿ ಕೇರ ಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಕೇರಳದಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿತ್ತು. ಇದು ಗೊತ್ತಾದ ಅನಂತರ ಸಿಪಿಎಂ-ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಕೊಂಚ ಸಮಾಧಾನವಾಗಿರಬಹುದು.

“ಸೆಡ್ಡು, ಅಹಮಿಕೆಗೆ ಇದು ಸಮಯವಲ್ಲ’
ದೇಶದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಎಲ್ಲ ವಿಪಕ್ಷಗಳು ಒಗ್ಗಟ್ಟಾಗಿರಬೇಕಿದೆ. ಯಾವುದೇ ವಿಪಕ್ಷಗಳು ಪರಸ್ಪರ ಸಡ್ಡು ಹೊಡೆಯುವುದು, ಅಹಂ ಕಾರ, ಕೋಪಗಳನ್ನು ತೋರ್ಪಡಿಸುವ ಕಾಲ ಇದಲ್ಲ ಎಂದು ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾರ್ಗರೆಟ್‌ ಆಳ್ವ ಕಿವಿಮಾತು ಹೇಳಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಗೆ ಸೂಕ್ತ ಅಭ್ಯರ್ಥಿಯನ್ನು ಆರಿಸುವಾಗ ವಿಪಕ್ಷಗಳು ತನ್ನ ಅಭಿಪ್ರಾಯವನ್ನು ಪಡೆದಿಲ್ಲ ಎಂಬ ಕಾರಣಕ್ಕಾಗಿ ಟಿಎಂಸಿ ಚುನಾವಣೆಯಿಂದ ದೂರ ಉಳಿಯವುದಾಗಿ ಗುರುವಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಆಳ್ವರವರು ಮೇಲಿನಂತೆ ಹೇಳಿದ್ದಾರೆ. “ಟಿಎಂಸಿಯ ನಿರ್ಧಾರ ಬೇಸರ ತರಿಸಿದೆ. ಈ ಸಂದರ್ಭದಲ್ಲಿ ಎಲ್ಲ ವಿಪಕ್ಷಗಳು ತಮ್ಮ ನಡುವಿನ ಅಸಮಾಧಾನಗಳನ್ನು ಬದಿಗೊತ್ತಿ, ಧೈರ್ಯ, ನಾಯಕತ್ವ ಹಾಗೂ ಏಕತೆಯನ್ನು ತೋರಬೇಕು. ಧೈರ್ಯವಂತ ಮಹಿಳೆ ಎಂದೇ ಪ್ರಸಿದ್ಧಿಯಾಗಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರು ಎಲ್ಲ ವಿಪಕ್ಷಗಳ ಜತೆಗೆ ನಿಲ್ಲುವ ಭರವಸೆಯಿದೆ’ ಎಂದು ಆಳ್ವ ಟ್ವೀಟ್‌ ಮಾಡಿದ್ದಾರೆ.

 

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.