ಲೈಸೆನ್ಸ್ ರದ್ದು ಕೇಸ್; ಕಚೇರಿಯೊಳಗೆ ನುಗ್ಗಿ ಗುಂಡು ಹಾರಿಸಿ ಅಧಿಕಾರಿ ಹತ್ಯೆ!
Team Udayavani, Mar 30, 2019, 3:14 PM IST
ಚಂಡೀಗಢ್: ಕಚೇರಿಯೊಳಗೆ ನುಗ್ಗಿದ ದುಷ್ಕರ್ಮಿಯೊಬ್ಬ ಫುಡ್ ಅಂಡ್ ಡ್ರಗ್ಸ್ ಅಡ್ಮಿನಿಸ್ಟ್ರೇಷನ್ ವಿಭಾಗದ ಮಹಿಳಾ ಅಧಿಕಾರಿಯನ್ನು ಗುಂಡಿಟ್ಟು ಕೊಂದ ಘಟನೆ ಪಂಜಾಬ್ ನ ಮೋಹಾಲಿ ಸಮೀಪದ ಖಾರರ್ ನಲ್ಲಿ ನಡೆದಿದೆ.
ದಶಕಗಳಿಂದ ಫಾರ್ಮಸಿಯನ್ನು ನಡೆಸುತ್ತಿದ್ದ ಮಾಲೀಕನ ಫಾರ್ಮಸಿ ಲೈಸೆನ್ಸ್ ಅನ್ನು ಮಹಿಳಾ ಅಧಿಕಾರಿ ರದ್ದುಪಡಿಸಿದ್ದರು. ಇದೇ ಘಟನೆ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ ಎಂಬುದಾಗಿ ವರದಿ ಹೇಳಿದೆ.
ಖಾರರ್ ಕಚೇರಿಯೊಳಕ್ಕೆ ನುಗ್ಗಿದ್ದ ವ್ಯಕ್ತಿ ಏಕಾಏಕಿ ನೇಹಾ ಶೋರೀ(36) ಎಂಬ ಅಧಿಕಾರಿ ಮೇಲೆ 2 ಸುತ್ತು ಗುಂಡು ಹಾರಿಸಿದ್ದ. ಘಟನೆ ನಂತರ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಸುತ್ತುವರಿದು ಸೆರೆಹಿಡಿದಿರುವುದಾಗಿ ವರದಿ ವಿವರಿಸಿದೆ.
2016ರಿಂದ ಎಫ್ ಡಿಎನ ಝೋನಲ್ ಅಧಿಕಾರಿಯಾಗಿ ನೇಹಾ ಕಾರ್ಯನಿರ್ವಹಿಸುತ್ತಿದ್ದರು. ಆರೋಪಿಯನ್ನು ಬಲ್ವಿಂದರ್ ಸಿಂಗ್(50) ಎಂದು ಗುರುತಿಸಲಾಗಿದೆ. ಈತ ಮೋರಿಂಡಾದಲ್ಲಿ ಔಷಧದ ಅಂಗಡಿ ಹೊಂದಿದ್ದ. ಏತನ್ಮಧ್ಯೆ ಸಿಂಗ್ ಮಾಲೀಕತ್ವದ ಔಷಧ ಮಳಿಗೆಯ ಪರವಾನಿಗೆಯನ್ನು ನೇಹಾ ರದ್ದುಗೊಳಿಸಿದ್ದರು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ತಪಾಸಣೆ ನಡೆಸಿದ ನಂತರ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಿ, ಆರೋಪಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ
ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ
MUST WATCH
ಹೊಸ ಸೇರ್ಪಡೆ
Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ
ಫಾಹದ್ ಫಾಸಿಲ್ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ: ಸುದ್ದಿ ಕೇಳಿ ಥ್ರಿಲ್ ಆದ ಫ್ಯಾನ್ಸ್
Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!