ತರಗತಿಯಲ್ಲೇ ಕುಡಿಯುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಿದ ಸರ್ಕಾರ!
Team Udayavani, Mar 27, 2021, 3:49 PM IST
ಹೈದರಾಬಾದ್ : ಶಾಲೆಯಲ್ಲಿಯೇ ಕುಡಿದು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಿದ್ದ ಶಿಕ್ಷಕನನ್ನು ಆಂಧ್ರ ಪ್ರದೇಶ ಸರ್ಕಾರ ಅಮಾನತು ಮಾಡಿರುವ ಘಟನೆ ನಡೆದಿದೆ.
ಕೃಷ್ಣ ಜಿಲ್ಲೆಯ ಪಲಕ ಮಂಡಲ್ ಪ್ರದೇಶದ ಮಂಡಲ್ ಪರಿಷತ್ ಶಾಲೆಯ ಕೆ. ಕೋಟೇಶ್ವರ ರಾವ್ ಅಮಾನಾತು ಆಗಿರುವ ಶಿಕ್ಷಕ. ಈ ವ್ಯಕ್ತಿ ಮದ್ಯದ ಬಾಟಲಿಗಳನ್ನು ತರಗತಿಗಳಿಗೆ ಹಾಗೂ ಶಿಕ್ಷಕರ ಕೊಠಡಿಗಳಲ್ಲಿಯೇ ಇಟ್ಟುಕೊಂಡು ಕುಡಿಯುತ್ತಿದ್ದನಂತೆ. ಈ ಬಗ್ಗೆ ಕೇಳಿದರೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಇತ್ತೀಚೆಗೆ ಶಿಕ್ಷಕ ಕೋಟೇಶ್ವರ ರಾವ್ ಕುಡಿಯುವ ವಿಡಿಯೋವನ್ನು ಪೋಷಕರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಹಾಗೂ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಕುಡಿಯುವದರ ಬಗ್ಗೆ ಪ್ರಶ್ನೆ ಮಾಡಿದ್ದ ಮಹಿಳೆಯ ಬಟ್ಟೆ ಬಿಚ್ಚುವಂತೆ ಆರೋಪಿಯು ಕೇಳಿದ್ದನಂತೆ. ಇಂತಹ ಶಿಕ್ಷಕರು ಶಾಲೆಯಲ್ಲಿ ಇದ್ದರೆ ಮಕ್ಕಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪೋಷಕರು ಆರೋಪಿಸಿದ್ದಾರೆ. ಆದ್ರಿಂದಾಗಿ ಪೋಷಕರೆಲ್ಲರು ಸೇರಿಕೊಂಡು ಕೋಟೇಶ್ವರ ರಾವ್ ಅವರ ನಡವಳಿಕೆಯನ್ನು ಸೆರೆ ಹಿಡಿದಿದ್ದೇವೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!