ಕುಡಿದ ಮತ್ತಿನಲ್ಲಿ ಟ್ರಕ್ ಚಾಲನೆ- ಅಪಘಾತ; ಮೂವರು ಬೈಕ್ ಸವಾರರು ಸಾವು, ಹಲವರು ಗಂಭೀರ
Team Udayavani, Jan 6, 2021, 12:39 PM IST
ಜೈಪುರ: ಕುಡಿದ ಮತ್ತಿನಲ್ಲಿ ಟ್ರಕ್ ಚಾಲಕನೊಬ್ಬ ಬೈಕ್ ಗಳಿಗೆ ಗುದ್ದಿದ ಪರಿಣಾಮ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಜೈಪುರ ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಕುಡಿದ ಮತ್ತಿನಲ್ಲಿನಲ್ಲಿದ್ದ ಚಾಲಕ ಬಹಳ ವೇಗವಾಗಿ ಟ್ರಕ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಜೈಪುರದ ಬ್ರಾಂಪುರಿ ಫ್ಲೈಓವರ್ ಬಳಿ ಬೈಕ್ ಗಳಿಗೆ ಗುದ್ದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ರಾಜ್ ಕುಮಾರ್, ಲಾಲ್ ಚಂದ್ ಮತ್ತು ಮೊಹಮ್ಮದ್ ಸಲಾಂ ಎಂದು ಗುರುತಿಸಲಾಗಿದೆ. ಟ್ರಕ್ ಚಾಲಕ ಹರ್ಯಾಣ ಮೂಲದವನು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದೂರದಿಂದಲೇ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿ : ಅಭಿಮಾನಿಗಳಿಗೆ ಯಶ್ ಮನವಿ
ಮಂಗಳವಾರ (ಜ.5) ರಾತ್ರಿ 7:30 ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರು ಮತ್ತು ಗಾಯಗೊಂಡವರೆಲ್ಲಾ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದರು ಎನ್ನಲಾಗಿದೆ. ಈ ನಡುವೆ ಅಕ್ಕಿ ಚೀಲಗಳನ್ನು ಹೊತ್ತಿದ್ದ ಟ್ರಕ್ ವೇಗವಾಗಿ ಬಂದು ಬೈಕ್ ಸವಾರರ ಮೇಲೆ ಹರಿದಿದೆ.
ಅಪಘಾತ ಸಂಭವಿಸಿದ ಸ್ವಲ್ಪ ದೂರದಲ್ಲೇ ಬಸ್ ನಿಲ್ದಾಣವಿದ್ದು ನೂರಾರು ಪ್ರಯಾಣಿಕರು ಬಸ್ ಗಾಗಿ ಕಾದು ನಿಂತಿದ್ದರು. ಅಪಘಾತವಾದ ಕೂಡಲೇ ಟ್ರಕ್ ಮಗುಚಿ ಬಿದ್ದಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ವಿಷ ನೀಡಿ ನನ್ನ ಹತ್ಯೆಗೆ ಯತ್ನಿಸಿದ್ರು…ಇಸ್ರೋ ವಿಜ್ಞಾನಿ ಮಿಶ್ರಾ ಸ್ಫೋಟಕ ಹೇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್