ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು
Team Udayavani, Oct 15, 2021, 10:30 PM IST
ದುಬೈ: `ದುಬೈ ಎಕ್ಸ್ ಪೋ 2020’ರಲ್ಲಿ ಕರ್ನಾಟಕ ಸರಕಾರದ ಪರವಾಗಿ ಭಾಗವಹಿಸಲು ಇಲ್ಲಿಗೆ ಆಗಮಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಇಲ್ಲಿರುವ ಸಂಯುಕ್ತ ಅರಬ್ ಸಂಸ್ಥಾನದ ಅನಿವಾಸಿ ಕನ್ನಡಿಗರ ವೇದಿಕೆಯ ವತಿಯಿಂದ ಶುಕ್ರವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಅನಿವಾಸಿ ಕನ್ನಡಿಗರು ನೀಡಿದ ಈ ಸನ್ಮಾನದಿಂದ ಹೃದಯ ತುಂಬಿ ಬಂದಿದೆ. ಇಲ್ಲಿರುವ ಕನ್ನಡಿಗರೆಲ್ಲರೂ ಕರ್ನಾಟಕದ ರಾಯಭಾರಿಗಳಿದ್ದಂತೆ,’’ ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರ ಸಂಘದ ಪದಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ರಾಜ್ಯ ಕೈಮಗ್ಗ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್